ಜನ ಮನದ ನಾಡಿ ಮಿಡಿತ

Advertisement

ಶಿಮಂತೂರು ಶ್ರೀ ಆದಿ ಜನಾರ್ಧನ ವಿದ್ಯಾ ನಿಧಿ ಸಮಿತಿ ವತಿಯಿಂದ ವಿದ್ಯಾರ್ಥಿವೇತನ ಮತ್ತು ಪ್ರತಿಭಾ ಪುರಸ್ಕಾರ

ಮುಲ್ಕಿ: ಶಿಮಂತೂರು ಶ್ರೀ ಆದಿ ಜನಾರ್ಧನ ವಿದ್ಯಾ ನಿಧಿ ಸಮಿತಿ ವತಿಯಿಂದ ಶಿಮಂತೂರು ಗ್ರಾಮ ವ್ಯಾಪ್ತಿಯ ಬಡ ವಿದ್ಯಾರ್ಥಿಗಳಿಗೆ ದಾನಿಗಳ ಸಹಕಾರದಿಂದ ವಿದ್ಯಾರ್ಥಿವೇತನ ಮತ್ತು ಪ್ರತಿಭಾ ಪುರಸ್ಕಾರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ದೇವಸ್ಥಾನದ ತಂತ್ರಿಗಳಾದ ಶಿಬರೂರು ವೇದವ್ಯಾಸ ತಂತ್ರಿ ಆಶೀರ್ವಚನ ನೀಡಿ ವಿದ್ಯಾರ್ಥಿಗಳು ಸವಲತ್ತುಗಳನ್ನು ಪಡೆದು ಸಾಧಕರಾಗಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಸ್ಥಾನದ ಆಡಳಿತ ಮೊಕ್ತೇಸರ ಚಂದ್ರಹಾಸ ಎನ್ ಶೆಟ್ಟಿ ವಹಿಸಿ ಮಾತನಾಡಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು, ಶಿಕ್ಷಣ ಪ್ರೋತ್ಸಾಹ ನೀಡುವ ಉದ್ದೇಶದಿಂದ ದೇವಸ್ಥಾನದಲ್ಲಿ ವಿದ್ಯಾನಿಧಿ ಸಮಿತಿ ಪ್ರಾರಂಭಿಸಲಾಗಿದ್ದು, ದಾನಿಗಳ ಸಹಾಯದಿಂದ ಸಮಿತಿ ವತಿಯಿಂದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಕಾರ ನೀಡಲಾಗುವುದು ಎಂದರು.ಮುಖ್ಯ ಅತಿಥಿಗಳಾಗಿ ಉದ್ಯಮಿ ಡಾ.ಪದ್ಮನಾಭ ವಿ ಶೆಟ್ಟಿ ಮುಂಬೈ, ಬಪ್ಪನಾಡು ದೇವಳದ ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿ, ಉದ್ಯಮಿಗಳಾದ ಪ್ರೇಮಾನಂದ ಶೆಟ್ಟಿ, ಉದ್ಯಮಿ ಸತೀಶ್ ಶೆಟ್ಟಿ ಕೆಂಚನಕೆರೆ, ಶ್ರೀಪತಿ ಭಟ್, ಅತಿಕಾರಿಬೆಟ್ಟು ಗ್ರಾ. ಪಂ ಉಪಾಧ್ಯಕ್ಷ ಮನೋಹರ್ ಕೋಟ್ಯಾನ್, ಯುವಕ ಮಂಡಲದ ಅಧ್ಯಕ್ಷ ಕಿಶೋರ್ ಶೆಟ್ಟಿ, ಉಪಾಧ್ಯಕ್ಷ ಪ್ರವೀಣ್, ವ್ಯವಸ್ಥಾಪನಾ ಸಮಿತಿಯ ಸದಸ್ಯ ಹರೀಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರುಕಾರ್ಯಕ್ರಮದಲ್ಲಿ ಸುಮಾರು 60 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಯಿತು ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಪೂರ್ವಿಕ ಹರೀಶ್, ಹೃಷಿಕ್ ಉಮೇಶ್ ಶೆಟ್ಟಿ, ತ್ರಿಶಾ, ಅನಿಶಾರವರಿಗೆ ಪ್ರತಿಭಾ ಪುರಸ್ಕಾರ ನಡೆಯಿತು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!