ಆರೋಗ್ಯ ಹದಗೆಟ್ಟಾಗ 1962 ಗೆ ಕರೆ ಮಾಡಿ ; ಮನೆ ಮುಂದೆ ವಾಹನದಲ್ಲಿ ವೈದ್ಯರು ಸಮೇತ ಹಾಜರು
ಜಾನುವಾರುಗಳ ಆರೋಗ್ಯ ಹದಗೆಟ್ಟಾಗ 1962 ಸಹಾಯವಾಣಿಗೆ ಕರೆ ಮಾಡಿದರೆ ವಾಹನದ ಜೊತೆ ವೈದ್ಯರು ಸಮೇತ ಮನೆ ಬಾಗಿಲಿಗೆ ಆಗಮಿಸಿ ಉಚಿತ ಸೇವೆ ನೀಡುವ ಪಶುಸಂಜೀವಿನಿ ಯೋಜನೆ ರಾಜ್ಯಾದ್ಯಂತ ಅನುಷ್ಠಾನಗೊಳ್ಳುತ್ತಿದೆ.
ಈಗಾಗಲೇ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ 18 ವಾಹನಗಳು ಸೇವೆಗೆ ಸಿದ್ದಗೊಂಡಿದ್ದು, ವಾರದಲ್ಲೇ ಸೇವೆ ಆರಂಭಗೊಳ್ಳುವ ನಿರೀಕ್ಷೆ ಇದೆ.
ಪಶುಪಾಲನೆ ಮತ್ತು ಪಶುವೈದ್ಯ ಇಲಾಖೆಯಲ್ಲಿ ಸಿಬಂದಿ ಕೊರತೆ ಇದ್ದು ವಿವಿಧ ಕಡೆಗಳಲ್ಲಿ ಸೇವೆ ಸರಿಯಾಗಿ ಸಿಗುವುದಿಲ್ಲ ಎನ್ನುವ ಕೂಗು ಆಗಾಗ ಕೇಳಿಬರುತ್ತಿದ್ದು, ಆದ್ದರಿಂದ ಜಾನುವಾರುಗಳಿಗೆ ತುರ್ತು ಚಿಕಿತ್ಸೆ ಅಗತ್ಯವಿದ್ದಾಗ 1962 ಸಂಖ್ಯೆಯ ಸಹಾಯವಾಣಿಗೆ ಕರೆ ಮಾಡಿದರೆ ಹತ್ತಿರದ ತಾಲೂಕು ಕೇಂದ್ರದ ವಾಹನಕ್ಕೆ ಕರೆ ವರ್ಗಾವಣೆಗೊಳ್ಳುತ್ತದೆ.
ಅದರಲ್ಲಿನ ವೈದ್ಯರು, ಸಹಾಯಕರು ಧಾವಿಸಿ ಸ್ಥಳದಲ್ಲಿಯೇ ಚಿಕಿತ್ಸೆ ನೀಡುತ್ತಾರೆ. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದರೆ ಅಗತ್ಯಸಣ್ಣ ಪ್ರಮಾಣದ ಶಸ್ತ್ರಚಿಕಿತ್ಸಾ ಘಟಕ, ಪ್ರಸೂತಿ ಮತ್ತು ಶಸ್ತ್ರ ಚಿಕಿತ್ಸಾ ಉಪಕರಣಗಳ ಕಿಟ್, ಮರಣೋತ್ತರ ಪರೀಕ್ಷೆ ಉಪಕರಣಗಳ ಕಿಟ್, ವಾಶ್ ಬೇಸಿನ್, ಆಮ್ಲಜನಕ ವ್ಯವಸ್ಥೆ ಹಾಗೂ ಓರ್ವ ವೈದ್ಯ, ಸಹಾಯಕ, ಚಾಲಕ ಕಮ್ ಡಿ ದರ್ಜೆ ನೌಕರ ವಾಹನದಲ್ಲಿರುತ್ತಾರೆ. ರಾಜ್ಯಕ್ಕೆ ಒಟ್ಟು 290 ವಾಹನಗಳು ಮಂಜೂರಾಗಿದ್ದು, ತಾಲೂಕಿಗೆ ಒಂದು ಹಾಗೂ ಜಿಲ್ಲಾ ಕೇಂದ್ರದ ಆಸ್ಪತ್ರೆಗೆ ಹೆಚ್ಚುವರಿ ಒಂದು ದಿನ ನೀಡಲಾಗುತ್ತದೆ.
ಉಡುಪಿ ಜಿಲ್ಲೆಗೆ 8, ದ.ಕ. ಜಿಲ್ಲೆಗೆ 10 ವಾಹನ ಆಗಮಿಸಿದೆ. ಕೇಂದ್ರ ಸರಕಾರದ ಶೇ. 60 ಮತ್ತು ರಾಜ್ಯ ಸರಕಾರದ ಶೇ. 40 ಅನುದಾನದಲ್ಲಿ ಯೋಜನೆ ಕಾರ್ಯ ನಿರ್ವಹಿಸಲಿದೆ. ನಿರ್ವಹಣೆಯ ಹೊರಗುತ್ತಿಗೆಯನ್ನು ಮುಂಬಯಿ ಮೂಲದ ಎಜುಸ್ಪಾರ್ಕ್ ಇಂಟರ್ ನ್ಯಾಶನಲ್ ಖಾಸಗಿ ಕಂಪೆನಿಗೆ ಟೆಂಡರ್ ನೀಡಲಾಗಿದೆ.
ಗುತ್ತಿಗೆದಾರರು ಅಂಬ್ಯುಲೆನ್ಸ್ಗೆ ಅಗತ್ಯವಿರುವ ಸಿಬಂದಿಯನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಿಸಿ ತರಬೇತಿ ನೀಡಲಿದ್ದಾರೆ. ನಿವೃತ್ತ ವೈದ್ಯರೂ ಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸಲು ಅವಕಾಶವಿದೆ.
ಪಶುಸಂಜೀವಿನಿ ವಾಹನ ಜಿಲ್ಲೆಗೆ ಆಗಮಿಸಿದ್ದು, ಉಡುಪಿ ಜಿಲ್ಲೆಯ ಎಲ್ಲ ವಾಹನಗಳಿಗೆ ವೈದ್ಯರ ನೇಮಕ ನಡೆದಿದ್ದು, ದ.ಕ. ಜಿಲ್ಲೆಯ ಮೂಲ್ಕಿ, ಉಳ್ಳಾಲ, ಬೆಳ್ತಂಗಡಿ, ಕಡಬ, ಪುತ್ತೂರು ತಾಲೂಕಿನ ವಾಹನಕ್ಕೆ ವೈದ್ಯಾಧಿಕಾರಿ ನೇಮಕ ಬಾಕಿ ಇದೆ.
ವಾರದಲ್ಲಿ ಕಾರ್ಯಾರಂಭಿಸುವ ನಿರೀಕ್ಷೆ ಇದ್ದು, ರೈತರು ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…