ಆರೋಗ್ಯ ಹದಗೆಟ್ಟಾಗ 1962 ಗೆ ಕರೆ ಮಾಡಿ ; ಮನೆ ಮುಂದೆ ವಾಹನದಲ್ಲಿ ವೈದ್ಯರು ಸಮೇತ ಹಾಜರು
ಜಾನುವಾರುಗಳ ಆರೋಗ್ಯ ಹದಗೆಟ್ಟಾಗ 1962 ಸಹಾಯವಾಣಿಗೆ ಕರೆ ಮಾಡಿದರೆ ವಾಹನದ ಜೊತೆ ವೈದ್ಯರು ಸಮೇತ ಮನೆ ಬಾಗಿಲಿಗೆ ಆಗಮಿಸಿ ಉಚಿತ ಸೇವೆ ನೀಡುವ ಪಶುಸಂಜೀವಿನಿ ಯೋಜನೆ ರಾಜ್ಯಾದ್ಯಂತ ಅನುಷ್ಠಾನಗೊಳ್ಳುತ್ತಿದೆ.
ಈಗಾಗಲೇ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ 18 ವಾಹನಗಳು ಸೇವೆಗೆ ಸಿದ್ದಗೊಂಡಿದ್ದು, ವಾರದಲ್ಲೇ ಸೇವೆ ಆರಂಭಗೊಳ್ಳುವ ನಿರೀಕ್ಷೆ ಇದೆ.
ಪಶುಪಾಲನೆ ಮತ್ತು ಪಶುವೈದ್ಯ ಇಲಾಖೆಯಲ್ಲಿ ಸಿಬಂದಿ ಕೊರತೆ ಇದ್ದು ವಿವಿಧ ಕಡೆಗಳಲ್ಲಿ ಸೇವೆ ಸರಿಯಾಗಿ ಸಿಗುವುದಿಲ್ಲ ಎನ್ನುವ ಕೂಗು ಆಗಾಗ ಕೇಳಿಬರುತ್ತಿದ್ದು, ಆದ್ದರಿಂದ ಜಾನುವಾರುಗಳಿಗೆ ತುರ್ತು ಚಿಕಿತ್ಸೆ ಅಗತ್ಯವಿದ್ದಾಗ 1962 ಸಂಖ್ಯೆಯ ಸಹಾಯವಾಣಿಗೆ ಕರೆ ಮಾಡಿದರೆ ಹತ್ತಿರದ ತಾಲೂಕು ಕೇಂದ್ರದ ವಾಹನಕ್ಕೆ ಕರೆ ವರ್ಗಾವಣೆಗೊಳ್ಳುತ್ತದೆ.
ಅದರಲ್ಲಿನ ವೈದ್ಯರು, ಸಹಾಯಕರು ಧಾವಿಸಿ ಸ್ಥಳದಲ್ಲಿಯೇ ಚಿಕಿತ್ಸೆ ನೀಡುತ್ತಾರೆ. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದರೆ ಅಗತ್ಯಸಣ್ಣ ಪ್ರಮಾಣದ ಶಸ್ತ್ರಚಿಕಿತ್ಸಾ ಘಟಕ, ಪ್ರಸೂತಿ ಮತ್ತು ಶಸ್ತ್ರ ಚಿಕಿತ್ಸಾ ಉಪಕರಣಗಳ ಕಿಟ್, ಮರಣೋತ್ತರ ಪರೀಕ್ಷೆ ಉಪಕರಣಗಳ ಕಿಟ್, ವಾಶ್ ಬೇಸಿನ್, ಆಮ್ಲಜನಕ ವ್ಯವಸ್ಥೆ ಹಾಗೂ ಓರ್ವ ವೈದ್ಯ, ಸಹಾಯಕ, ಚಾಲಕ ಕಮ್ ಡಿ ದರ್ಜೆ ನೌಕರ ವಾಹನದಲ್ಲಿರುತ್ತಾರೆ. ರಾಜ್ಯಕ್ಕೆ ಒಟ್ಟು 290 ವಾಹನಗಳು ಮಂಜೂರಾಗಿದ್ದು, ತಾಲೂಕಿಗೆ ಒಂದು ಹಾಗೂ ಜಿಲ್ಲಾ ಕೇಂದ್ರದ ಆಸ್ಪತ್ರೆಗೆ ಹೆಚ್ಚುವರಿ ಒಂದು ದಿನ ನೀಡಲಾಗುತ್ತದೆ.
ಉಡುಪಿ ಜಿಲ್ಲೆಗೆ 8, ದ.ಕ. ಜಿಲ್ಲೆಗೆ 10 ವಾಹನ ಆಗಮಿಸಿದೆ. ಕೇಂದ್ರ ಸರಕಾರದ ಶೇ. 60 ಮತ್ತು ರಾಜ್ಯ ಸರಕಾರದ ಶೇ. 40 ಅನುದಾನದಲ್ಲಿ ಯೋಜನೆ ಕಾರ್ಯ ನಿರ್ವಹಿಸಲಿದೆ. ನಿರ್ವಹಣೆಯ ಹೊರಗುತ್ತಿಗೆಯನ್ನು ಮುಂಬಯಿ ಮೂಲದ ಎಜುಸ್ಪಾರ್ಕ್ ಇಂಟರ್ ನ್ಯಾಶನಲ್ ಖಾಸಗಿ ಕಂಪೆನಿಗೆ ಟೆಂಡರ್ ನೀಡಲಾಗಿದೆ.
ಗುತ್ತಿಗೆದಾರರು ಅಂಬ್ಯುಲೆನ್ಸ್ಗೆ ಅಗತ್ಯವಿರುವ ಸಿಬಂದಿಯನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಿಸಿ ತರಬೇತಿ ನೀಡಲಿದ್ದಾರೆ. ನಿವೃತ್ತ ವೈದ್ಯರೂ ಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸಲು ಅವಕಾಶವಿದೆ.
ಪಶುಸಂಜೀವಿನಿ ವಾಹನ ಜಿಲ್ಲೆಗೆ ಆಗಮಿಸಿದ್ದು, ಉಡುಪಿ ಜಿಲ್ಲೆಯ ಎಲ್ಲ ವಾಹನಗಳಿಗೆ ವೈದ್ಯರ ನೇಮಕ ನಡೆದಿದ್ದು, ದ.ಕ. ಜಿಲ್ಲೆಯ ಮೂಲ್ಕಿ, ಉಳ್ಳಾಲ, ಬೆಳ್ತಂಗಡಿ, ಕಡಬ, ಪುತ್ತೂರು ತಾಲೂಕಿನ ವಾಹನಕ್ಕೆ ವೈದ್ಯಾಧಿಕಾರಿ ನೇಮಕ ಬಾಕಿ ಇದೆ.
ವಾರದಲ್ಲಿ ಕಾರ್ಯಾರಂಭಿಸುವ ನಿರೀಕ್ಷೆ ಇದ್ದು, ರೈತರು ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…