ಇತರೆ

ಪಶುಸಂಜೀವಿನಿ ಯೋಜನೆ ಅನುಷ್ಠಾನ ; ಸಹಾಯವಾಣಿ 1962 ಗೆ ಕರೆ ಮಾಡಿ, ಮನೆ ಮುಂದೆ ವೈದ್ಯರು ಹಾಜರು…!

ಆರೋಗ್ಯ ಹದಗೆಟ್ಟಾಗ 1962 ಗೆ ಕರೆ ಮಾಡಿ ; ಮನೆ ಮುಂದೆ ವಾಹನದಲ್ಲಿ ವೈದ್ಯರು ಸಮೇತ ಹಾಜರು
ಜಾನುವಾರುಗಳ ಆರೋಗ್ಯ ಹದಗೆಟ್ಟಾಗ 1962 ಸಹಾಯವಾಣಿಗೆ ಕರೆ ಮಾಡಿದರೆ ವಾಹನದ ಜೊತೆ ವೈದ್ಯರು ಸಮೇತ ಮನೆ ಬಾಗಿಲಿಗೆ ಆಗಮಿಸಿ ಉಚಿತ ಸೇವೆ ನೀಡುವ ಪಶುಸಂಜೀವಿನಿ ಯೋಜನೆ ರಾಜ್ಯಾದ್ಯಂತ ಅನುಷ್ಠಾನಗೊಳ್ಳುತ್ತಿದೆ.
ಈಗಾಗಲೇ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ 18 ವಾಹನಗಳು ಸೇವೆಗೆ ಸಿದ್ದಗೊಂಡಿದ್ದು, ವಾರದಲ್ಲೇ ಸೇವೆ ಆರಂಭಗೊಳ್ಳುವ ನಿರೀಕ್ಷೆ ಇದೆ.
ಪಶುಪಾಲನೆ ಮತ್ತು ಪಶುವೈದ್ಯ ಇಲಾಖೆಯಲ್ಲಿ ಸಿಬಂದಿ ಕೊರತೆ ಇದ್ದು ವಿವಿಧ ಕಡೆಗಳಲ್ಲಿ ಸೇವೆ ಸರಿಯಾಗಿ ಸಿಗುವುದಿಲ್ಲ ಎನ್ನುವ ಕೂಗು ಆಗಾಗ ಕೇಳಿಬರುತ್ತಿದ್ದು, ಆದ್ದರಿಂದ ಜಾನುವಾರುಗಳಿಗೆ ತುರ್ತು ಚಿಕಿತ್ಸೆ ಅಗತ್ಯವಿದ್ದಾಗ 1962 ಸಂಖ್ಯೆಯ ಸಹಾಯವಾಣಿಗೆ ಕರೆ ಮಾಡಿದರೆ ಹತ್ತಿರದ ತಾಲೂಕು ಕೇಂದ್ರದ ವಾಹನಕ್ಕೆ ಕರೆ ವರ್ಗಾವಣೆಗೊಳ್ಳುತ್ತದೆ.


ಅದರಲ್ಲಿನ ವೈದ್ಯರು, ಸಹಾಯಕರು ಧಾವಿಸಿ ಸ್ಥಳದಲ್ಲಿಯೇ ಚಿಕಿತ್ಸೆ ನೀಡುತ್ತಾರೆ. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದರೆ ಅಗತ್ಯಸಣ್ಣ ಪ್ರಮಾಣದ ಶಸ್ತ್ರಚಿಕಿತ್ಸಾ ಘಟಕ, ಪ್ರಸೂತಿ ಮತ್ತು ಶಸ್ತ್ರ ಚಿಕಿತ್ಸಾ ಉಪಕರಣಗಳ ಕಿಟ್, ಮರಣೋತ್ತರ ಪರೀಕ್ಷೆ ಉಪಕರಣಗಳ ಕಿಟ್, ವಾಶ್ ಬೇಸಿನ್, ಆಮ್ಲಜನಕ ವ್ಯವಸ್ಥೆ ಹಾಗೂ ಓರ್ವ ವೈದ್ಯ, ಸಹಾಯಕ, ಚಾಲಕ ಕಮ್ ಡಿ ದರ್ಜೆ ನೌಕರ ವಾಹನದಲ್ಲಿರುತ್ತಾರೆ. ರಾಜ್ಯಕ್ಕೆ ಒಟ್ಟು 290 ವಾಹನಗಳು ಮಂಜೂರಾಗಿದ್ದು, ತಾಲೂಕಿಗೆ ಒಂದು ಹಾಗೂ ಜಿಲ್ಲಾ ಕೇಂದ್ರದ ಆಸ್ಪತ್ರೆಗೆ ಹೆಚ್ಚುವರಿ ಒಂದು ದಿನ ನೀಡಲಾಗುತ್ತದೆ.
ಉಡುಪಿ ಜಿಲ್ಲೆಗೆ 8, ದ.ಕ. ಜಿಲ್ಲೆಗೆ 10 ವಾಹನ ಆಗಮಿಸಿದೆ. ಕೇಂದ್ರ ಸರಕಾರದ ಶೇ. 60 ಮತ್ತು ರಾಜ್ಯ ಸರಕಾರದ ಶೇ. 40 ಅನುದಾನದಲ್ಲಿ ಯೋಜನೆ ಕಾರ್ಯ ನಿರ್ವಹಿಸಲಿದೆ. ನಿರ್ವಹಣೆಯ ಹೊರಗುತ್ತಿಗೆಯನ್ನು ಮುಂಬಯಿ ಮೂಲದ ಎಜುಸ್ಪಾರ್ಕ್ ಇಂಟರ್ ನ್ಯಾಶನಲ್ ಖಾಸಗಿ ಕಂಪೆನಿಗೆ ಟೆಂಡರ್ ನೀಡಲಾಗಿದೆ.
ಗುತ್ತಿಗೆದಾರರು ಅಂಬ್ಯುಲೆನ್ಸ್ಗೆ ಅಗತ್ಯವಿರುವ ಸಿಬಂದಿಯನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಿಸಿ ತರಬೇತಿ ನೀಡಲಿದ್ದಾರೆ. ನಿವೃತ್ತ ವೈದ್ಯರೂ ಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸಲು ಅವಕಾಶವಿದೆ.

ಪಶುಸಂಜೀವಿನಿ ವಾಹನ ಜಿಲ್ಲೆಗೆ ಆಗಮಿಸಿದ್ದು, ಉಡುಪಿ ಜಿಲ್ಲೆಯ ಎಲ್ಲ ವಾಹನಗಳಿಗೆ ವೈದ್ಯರ ನೇಮಕ ನಡೆದಿದ್ದು, ದ.ಕ. ಜಿಲ್ಲೆಯ ಮೂಲ್ಕಿ, ಉಳ್ಳಾಲ, ಬೆಳ್ತಂಗಡಿ, ಕಡಬ, ಪುತ್ತೂರು ತಾಲೂಕಿನ ವಾಹನಕ್ಕೆ ವೈದ್ಯಾಧಿಕಾರಿ ನೇಮಕ ಬಾಕಿ ಇದೆ.
ವಾರದಲ್ಲಿ ಕಾರ್ಯಾರಂಭಿಸುವ ನಿರೀಕ್ಷೆ ಇದ್ದು, ರೈತರು ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…

1 hour ago

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…

1 hour ago

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…

1 hour ago

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್‌ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…

7 hours ago

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…

7 hours ago

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…

1 day ago