ಕೇರಳದ ಕಾಸರಗೋಡಿನಿಂದ ಆಸ್ಪತ್ರೆ ತ್ಯಾಜ್ಯವನ್ನು ಕರ್ನಾಟಕ ವಾಹನ ಮೂಲಕ ಕರ್ನಾಟಕಕ್ಕೆ ತಂದು ನಿರ್ಜನ ಪ್ರದೇಶದಲ್ಲಿ ಸುರಿದು ಹೋಗುತ್ತಿದ್ದರು.
ಈ ದಂಧೆಯನ್ನು ಕಲ್ಲಡ್ಕ ಕಾಂಞoಗಾಡು ಹೆದ್ದಾರಿಯ ಉಕ್ಕುಡದಲ್ಲಿ ಸಾರ್ವಜನಿಕರು ಪತ್ತೆ ಹಚ್ಚಿದ್ದಾರೆ.
ಕೆಲವೇ ದಿನಗಳ ಹಿಂದೆ ಕೇಪು ಗ್ರಾಮ ಚೆಲ್ಲಡ್ಕ ಅಮೈ ಮಾರ್ಗದ ಬದಿಯಲ್ಲಿ ಇದೇ ರೀತಿ ತ್ಯಾಜ್ಯವನ್ನು ಸುರಿಯುತ್ತಿದ್ದಾಗ ಸ್ಥಳೀಯರು ಪತ್ತೆ ಹಚ್ಚಿ, ಪಂಚಾಯತ್ ವಿಟ್ಲ ಠಾಣೆಗೆ ದೂರು ನೀಡಿದರು.
ಆ ವಾಹನವನ್ನು ಬಿಡಿಸಿಕೊಂಡು ಬಂದು ಈಗ ಮತ್ತೆ ಕಾಸರಗೋಡು ಆಸ್ಪತ್ರೆಯಿಂದ ತ್ಯಾಜ್ಯವನ್ನು ತುಂಬಿ ಕರ್ನಾಟಕ ಬರುತ್ತಿರುವುದನ್ನು ಗಮನಿಸಿದ ಸಾರ್ವಜನಿಕರು ವಾಹನವನ್ನು ಬೆನ್ನಟ್ಟಿ ಬಂದಿಸಿದ್ದಾರೆನ್ನಲಾಗಿದೆ.
ಉಕ್ಕುಡದಲ್ಲಿ ವಾಹನವನ್ನು ಸಾರ್ವಜನಿಕರು ತಡೆಗಟ್ಟಿ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಹಲವು ಬಾರಿ ತ್ಯಾಜ್ಯವನ್ನು ತಂದಿರುವುದಾಗಿ ಚಾಲಕ ಸಾರ್ವಜನಿಕರಿಗೆ ತಿಳಿಸಿದ್ದಾರೆ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…