ಜನ ಮನದ ನಾಡಿ ಮಿಡಿತ

Advertisement

ಇದು ಇಂಡೋ-ಪಾಕ್ ಜೋಡಿ; ಮದುವೆ ಆಗಿದ್ದು ಮಾತ್ರ ವಿಡಿಯೋ ಕಾಲ್‌ನಲ್ಲಿ; ಹೇಗೆ ಅಂತೀರಾ ಇಲ್ಲಿದೆ ಸ್ಟೋರಿ..?!

ಇಂಡೋ, ಪಾಕ್ ವಧು- ವರರ ಸರಳವಾಗಿ ವಿವಾಹ ಮಾಡಿಕೊಂಡಿದ್ದಾರೆ.
ರಾಜಸ್ಥಾನದ ಜೋಧ್‌ಪುರ ಮೂಲದ ಅರ್ಬಾಜ್ ಪಾಕಿಸ್ತಾನದ ಮೂಲದ ವಧು ಅಮೀನಾ ಅವರೊಂದಿಗೆ ವಿವಾಹವಾಗಿದ್ದಾರೆ.
ಎರಡೂ ಕುಟುಂಬದವರ ಸಹಮತದೊಂದಿಗೆ ಈ ವಿವಾಹ ನೆರವೇರಿದೆ. ವಿಶೇಷವೆಂದರೆ ವರ್ಚುವಲ್ ಮೂಲಕ ( ವಿಡಿಯೊ ಕಾಲ್) ವಿವಾಹ ಕಾರ್ಯಕ್ರಮ ನೆರವೇರಿದೆ.
ಲೈವ್ ಹಿಂದೂಸ್ತಾನ್ ವರದಿ ಮಾಡಿರುವ ಪ್ರಕಾರ ಅರ್ಬಾಜ್ ಹಾಗೂ ಅಮೀನಾ ಅವರ ಕುಟುಂಬ ಸಂಬAಧಿಗಳಾಗಿದ್ದಾರೆ. ಈ ಹಿಂದೆ ಅರ್ಬಾಜ್ ಅವರ ಕುಟುಂಬದ ವ್ಯಕ್ತಿಯೊಬ್ಬರು ಪಾಕಿಸ್ತಾನದಲ್ಲಿರುವ ಅಮೀನಾ ಅವರ ಕುಟುಂಬದ ಯುವತಿಯನ್ನು ಮದುವೆಯಾಗಿದ್ದಾರೆ.

“ನನ್ನ ಮೊಮ್ಮಗ ಚಾರ್ಟಡ್ ಅಕೌಂಟೆAಟ್ ಆಗಿದ್ದಾರೆ. ಪಾಕ್ ಮೂಲದ ಯುವತಿಯನ್ನು ವಿವಾಹವಾಗಿರುವ ಅವರ ಸಂತೋಷವನ್ನು ಅಮೀನಾ ಅವರ ಕುಟುಂಬದವರು ನೋಡಿ, ನನ್ನ ಮಗನನ್ನು ಅಮೀನಾ ಅವರಿಗೆ ಕೊಟ್ಟು ಮದುವೆ ಮಾಡಿಸಿ ಎಂದು ಕೇಳಿಕೊಂಡಿದ್ದಾರೆ. ಅದಕ್ಕೆ ನಾವು ಒಪ್ಪಿ, ಈ ಮದುವೆಯನ್ನು ಮಾಡಿಸಿದ್ದೇವೆ” ಎಂದು ಅರ್ಬಾಜ್ ಅವರ ತಂದೆ ಮೊಹಮ್ಮದ್ ಅಫ್ಜಲ್ ಅವರು ಹೇಳುತ್ತಾರೆ.

ಅರ್ಬಾಜ್ ಅವರ ಮದುವೆ ದಿಬ್ಬಣ ಜೋಧ್‌ಪುರದ ಓಸ್ವಾಲ್ ಸಮಾಜ ಭವನಕ್ಕೆ ತೆರಳಿ, ಅಲ್ಲಿ ವರ್ಚುವಲ್ ಮೂಲಕ ಪಾಕ್ ನಲ್ಲಿರುವ ಅಮೀನಾ ಅವರೊಂದಿಗೆ ನಿಕಾ ಮಾಡಿಕೊಂಡಿದ್ದಾರೆ. ಅತ್ತ ಕಡೆಯ ಮೌಲ್ವಿ, ಇತ್ತ ಗಂಡಿನ ಕಡೆಯ ಮೌಲ್ವಿಗಳು ವಿವಾಹವನ್ನು ನೆರವೇರಿಸಿದ್ದಾರೆ.

ಈ ವರ್ಚುವಲ್ ಮದುವೆಗೂ ಮುನ್ನ ಅಮೀನಾ ಅವರು ವೀಸಾಕ್ಕಾಗಿ ಸರ್ಜಿ ಸಲ್ಲಿಸಿದ್ದರು. ಆದರೆ ಅದು ವಿಫಲವಾದ ಕಾರಣ. ವರ್ಚುವಲ್ ವಿವಾಹ ನೆರವೇರಿದೆ. ನಾನು ಪಾಕ್ ಗೆ ತೆರಳಿ ವಿವಾಹವಾಗಿಲ್ಲ. ಹಾಗೆ ಮಾಡಿದ್ದರೆ ಅದು ಮಾನ್ಯ ಆಗುತ್ತಿರಲಿಲ್ಲ. ನಮ್ಮ ವಿವಾಹದ ಪ್ರಮಾಣ ಪತ್ರವನ್ನು ಮೌಲ್ವಿಗಳಿಂದ ಪಡೆದುಕೊಂಡಿದ್ದೇವೆ. ಅಮೀನಾ ಅವರ ಭಾರತೀಯ ವೀಸಾ ಆದ ಬಳಿಕ ನಾವು ಮತ್ತೆ ಮರುಮದುವೆ ಆಗಲಿದ್ದೇವೆ ಎಂದು ವೃತ್ತಿಯಲ್ಲಿ ಡಿಟಿಪಿ ಆಪರೇಟರ್ ಆಗಿರುವ ಅರ್ಬಾಜ್ ಹೇಳುತ್ತಾರೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!