ಇಂಡೋ, ಪಾಕ್ ವಧು- ವರರ ಸರಳವಾಗಿ ವಿವಾಹ ಮಾಡಿಕೊಂಡಿದ್ದಾರೆ.
ರಾಜಸ್ಥಾನದ ಜೋಧ್ಪುರ ಮೂಲದ ಅರ್ಬಾಜ್ ಪಾಕಿಸ್ತಾನದ ಮೂಲದ ವಧು ಅಮೀನಾ ಅವರೊಂದಿಗೆ ವಿವಾಹವಾಗಿದ್ದಾರೆ.
ಎರಡೂ ಕುಟುಂಬದವರ ಸಹಮತದೊಂದಿಗೆ ಈ ವಿವಾಹ ನೆರವೇರಿದೆ. ವಿಶೇಷವೆಂದರೆ ವರ್ಚುವಲ್ ಮೂಲಕ ( ವಿಡಿಯೊ ಕಾಲ್) ವಿವಾಹ ಕಾರ್ಯಕ್ರಮ ನೆರವೇರಿದೆ.
ಲೈವ್ ಹಿಂದೂಸ್ತಾನ್ ವರದಿ ಮಾಡಿರುವ ಪ್ರಕಾರ ಅರ್ಬಾಜ್ ಹಾಗೂ ಅಮೀನಾ ಅವರ ಕುಟುಂಬ ಸಂಬAಧಿಗಳಾಗಿದ್ದಾರೆ. ಈ ಹಿಂದೆ ಅರ್ಬಾಜ್ ಅವರ ಕುಟುಂಬದ ವ್ಯಕ್ತಿಯೊಬ್ಬರು ಪಾಕಿಸ್ತಾನದಲ್ಲಿರುವ ಅಮೀನಾ ಅವರ ಕುಟುಂಬದ ಯುವತಿಯನ್ನು ಮದುವೆಯಾಗಿದ್ದಾರೆ.
“ನನ್ನ ಮೊಮ್ಮಗ ಚಾರ್ಟಡ್ ಅಕೌಂಟೆAಟ್ ಆಗಿದ್ದಾರೆ. ಪಾಕ್ ಮೂಲದ ಯುವತಿಯನ್ನು ವಿವಾಹವಾಗಿರುವ ಅವರ ಸಂತೋಷವನ್ನು ಅಮೀನಾ ಅವರ ಕುಟುಂಬದವರು ನೋಡಿ, ನನ್ನ ಮಗನನ್ನು ಅಮೀನಾ ಅವರಿಗೆ ಕೊಟ್ಟು ಮದುವೆ ಮಾಡಿಸಿ ಎಂದು ಕೇಳಿಕೊಂಡಿದ್ದಾರೆ. ಅದಕ್ಕೆ ನಾವು ಒಪ್ಪಿ, ಈ ಮದುವೆಯನ್ನು ಮಾಡಿಸಿದ್ದೇವೆ” ಎಂದು ಅರ್ಬಾಜ್ ಅವರ ತಂದೆ ಮೊಹಮ್ಮದ್ ಅಫ್ಜಲ್ ಅವರು ಹೇಳುತ್ತಾರೆ.
ಅರ್ಬಾಜ್ ಅವರ ಮದುವೆ ದಿಬ್ಬಣ ಜೋಧ್ಪುರದ ಓಸ್ವಾಲ್ ಸಮಾಜ ಭವನಕ್ಕೆ ತೆರಳಿ, ಅಲ್ಲಿ ವರ್ಚುವಲ್ ಮೂಲಕ ಪಾಕ್ ನಲ್ಲಿರುವ ಅಮೀನಾ ಅವರೊಂದಿಗೆ ನಿಕಾ ಮಾಡಿಕೊಂಡಿದ್ದಾರೆ. ಅತ್ತ ಕಡೆಯ ಮೌಲ್ವಿ, ಇತ್ತ ಗಂಡಿನ ಕಡೆಯ ಮೌಲ್ವಿಗಳು ವಿವಾಹವನ್ನು ನೆರವೇರಿಸಿದ್ದಾರೆ.
ಈ ವರ್ಚುವಲ್ ಮದುವೆಗೂ ಮುನ್ನ ಅಮೀನಾ ಅವರು ವೀಸಾಕ್ಕಾಗಿ ಸರ್ಜಿ ಸಲ್ಲಿಸಿದ್ದರು. ಆದರೆ ಅದು ವಿಫಲವಾದ ಕಾರಣ. ವರ್ಚುವಲ್ ವಿವಾಹ ನೆರವೇರಿದೆ. ನಾನು ಪಾಕ್ ಗೆ ತೆರಳಿ ವಿವಾಹವಾಗಿಲ್ಲ. ಹಾಗೆ ಮಾಡಿದ್ದರೆ ಅದು ಮಾನ್ಯ ಆಗುತ್ತಿರಲಿಲ್ಲ. ನಮ್ಮ ವಿವಾಹದ ಪ್ರಮಾಣ ಪತ್ರವನ್ನು ಮೌಲ್ವಿಗಳಿಂದ ಪಡೆದುಕೊಂಡಿದ್ದೇವೆ. ಅಮೀನಾ ಅವರ ಭಾರತೀಯ ವೀಸಾ ಆದ ಬಳಿಕ ನಾವು ಮತ್ತೆ ಮರುಮದುವೆ ಆಗಲಿದ್ದೇವೆ ಎಂದು ವೃತ್ತಿಯಲ್ಲಿ ಡಿಟಿಪಿ ಆಪರೇಟರ್ ಆಗಿರುವ ಅರ್ಬಾಜ್ ಹೇಳುತ್ತಾರೆ.
ಮಂಗಳೂರು ಮುಂಬೈ, ಉಡುಪಿ, ಬೆಂಗಳೂರು, ಕಾರ್ಕಳದಲ್ಲಿ ಯುವತಿಯರನ್ನು ನಂಬಿಸಿ ಕೈಕೊಟ್ಟ ಭೂಪನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ. ಮ್ಯಾಟ್ರಿಮನಿ ಸೈಟ್ನಲ್ಲಿ ನಂಬಿಸಿ ಉಂಡೂ…
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…