‘777 ಚಾರ್ಲಿ’ ಸಿನಿಮಾ ಮೂಲಕ ಮನುಷ್ಯ ಮತ್ತು ಶ್ವಾನ ಭಾಂದವ್ಯವನ್ನು ಪರದೆ ಮೇಲೆ ತಂದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಇದೀಗ ತನ್ನ ಪ್ರೀತಿಯನ್ನು ನೀಲಿ ಸಮುದ್ರದಾಚೆಗೆ ಹೇಳಲು ಹೊರಟಿದ್ದಾರೆ.
‘ಪ್ರೇಕ್ಷಕರಿಗೆ ‘ಸಪ್ತ ಸಾಗರದಾಚೆಗೆ ಎಲ್ಲೋ’ ಸಿನಿಮಾ ಮೂಲಕ ಮನು ಮತ್ತು ಪ್ರಿಯಾಳ ಅದ್ಭುತವಾದ ಪ್ರೇಮವನ್ನು ತೋರ್ಪಡಿಸಲು ಮುಂದಾಗಿದ್ದಾರೆ. ಹಾಗಾಗಿ ಸಿನಿಮಾದ ಟ್ರೈಲರ್ ಅನ್ನು ಚಿತ್ರತಂಡ ನಿನ್ನೆ ರಿಲೀಸ್ ಮಾಡಿದೆ.
ಗೋಧಿ ಬಣ್ಣ ಸಾಧಾರಣ ಮೈಕಟ್ಟು, ಕವಲುದಾರಿ ಸಿನಿಮಾವನ್ನ ಪ್ರೇಕ್ಷಕರ ಮನದಾಳಕ್ಕೆ ತಂದುಬಿಟ್ಟಿದ್ದ ಹೇಮಂತ್ ರಾವ್ ಈ ಸಿನಿಮಾವನ್ನು ನಿರ್ದೇಶಿಸಿದ್ದಾರೆ. ‘ಕತ್ತೆ ನಂಗೆ ಮೊನ್ನೆ ಎಷ್ಟು ಒಳ್ಳೆ ಕನಸು ಬಿತ್ತು ಗೊತ್ತಾ’ ಎಂದು ಹೇಳುವ ಪ್ರಿಯಾಳ ಮಾತಿನಿಂದ ಆರಂಭವಾಗುವ ಟ್ರೈಲರ್, ಮನುವಿನ ಪ್ರೀತಿಯ ಬುತ್ತಿಯನ್ನು ಪರದೆಯ ಮೇಲೆ ಬಿತ್ತರಿಸುವಲ್ಲಿ ಹೇಮಂತ್ ರಾವ್ ಕೆಲಸ ಮಾಡಿದ್ದಾರೆ. ಸದ್ಯ ಮಾಡಿರುವ 2 ಸಿನಿಮಾಗಳಿಂತ ಭಿನ್ನ ಸಿನಿಮಾವನ್ನು ಪ್ರೇಕ್ಷಕರ ಮುಂದಿರಿಸುವ ಕನಸನ್ನ ಹೇಮಂತ್ ಕಟ್ಟಿಕೊಂಡಿದ್ದಾರೆ. ಅಂದಹಾಗೆಯೇ ಈ ಸಿನಿಮಾ ಸೆಪ್ಟೆಂಬರ್ 1 ರಂದು ರಿಲೀಸ್ ಆಗಲಿದೆ.
ಚಿತ್ರತಂಡ 2 ಅವತರಣಿಕೆಯಲ್ಲಿ ಸಿನಿಮಾ ರಿಲೀಸ್ ಮಾಡಲಿದೆ. ಹಾಗಾಗಿ ಮೊದಲ ಪಾರ್ಟ್ ಸೆಪ್ಟೆಂಬರ್ನಲ್ಲಿ ಬಿಡುಗಡೆಯಾಗಲಿದೆ. ಈ ಬಾರಿ ರಕ್ಷಿತ್ಗೆ ನಾಯಕಿಯಾಗಿ ರುಕ್ಮಿಣಿ ವಸಂತ್ ಅವರು ಪ್ರಿಯ ಪಾತ್ರದಲ್ಲಿ ನಟಿಸಿದ್ದಾರೆ. ಮಾತ್ರವಲ್ಲದೆ ಟೋಬಿ ಚಿತ್ರದ ನಾಯಕಿ ಚೈತ್ರಾ ಆಚಾರ್ ಕೂಡ ಈ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದಾರೆ.ಅದ್ಬೈತ ಗುರುಮೂರ್ತಿ ಕ್ಯಾಮೆರಾ ಕೈಚಳದಲ್ಲಿ ‘ಸಪ್ತ ಸಾದರದಾಚೆ ಎಲ್ಲೋ’ ಸಿನಿಮಾ ಮೂಡಿ ಬಂದಿದೆ. ಚರಣ್ ರಾಜ್ ಸಂಗೀತ ಸಂಯೋಜನೆಯೊAದಿಗೆ ಸಮುದ್ರದ ಅಲೆಗಳು ಕೇಳಲಾರಂಭಿಸುತ್ತದೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…