‘777 ಚಾರ್ಲಿ’ ಸಿನಿಮಾ ಮೂಲಕ ಮನುಷ್ಯ ಮತ್ತು ಶ್ವಾನ ಭಾಂದವ್ಯವನ್ನು ಪರದೆ ಮೇಲೆ ತಂದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಇದೀಗ ತನ್ನ ಪ್ರೀತಿಯನ್ನು ನೀಲಿ ಸಮುದ್ರದಾಚೆಗೆ ಹೇಳಲು ಹೊರಟಿದ್ದಾರೆ.
‘ಪ್ರೇಕ್ಷಕರಿಗೆ ‘ಸಪ್ತ ಸಾಗರದಾಚೆಗೆ ಎಲ್ಲೋ’ ಸಿನಿಮಾ ಮೂಲಕ ಮನು ಮತ್ತು ಪ್ರಿಯಾಳ ಅದ್ಭುತವಾದ ಪ್ರೇಮವನ್ನು ತೋರ್ಪಡಿಸಲು ಮುಂದಾಗಿದ್ದಾರೆ. ಹಾಗಾಗಿ ಸಿನಿಮಾದ ಟ್ರೈಲರ್ ಅನ್ನು ಚಿತ್ರತಂಡ ನಿನ್ನೆ ರಿಲೀಸ್ ಮಾಡಿದೆ.
ಗೋಧಿ ಬಣ್ಣ ಸಾಧಾರಣ ಮೈಕಟ್ಟು, ಕವಲುದಾರಿ ಸಿನಿಮಾವನ್ನ ಪ್ರೇಕ್ಷಕರ ಮನದಾಳಕ್ಕೆ ತಂದುಬಿಟ್ಟಿದ್ದ ಹೇಮಂತ್ ರಾವ್ ಈ ಸಿನಿಮಾವನ್ನು ನಿರ್ದೇಶಿಸಿದ್ದಾರೆ. ‘ಕತ್ತೆ ನಂಗೆ ಮೊನ್ನೆ ಎಷ್ಟು ಒಳ್ಳೆ ಕನಸು ಬಿತ್ತು ಗೊತ್ತಾ’ ಎಂದು ಹೇಳುವ ಪ್ರಿಯಾಳ ಮಾತಿನಿಂದ ಆರಂಭವಾಗುವ ಟ್ರೈಲರ್, ಮನುವಿನ ಪ್ರೀತಿಯ ಬುತ್ತಿಯನ್ನು ಪರದೆಯ ಮೇಲೆ ಬಿತ್ತರಿಸುವಲ್ಲಿ ಹೇಮಂತ್ ರಾವ್ ಕೆಲಸ ಮಾಡಿದ್ದಾರೆ. ಸದ್ಯ ಮಾಡಿರುವ 2 ಸಿನಿಮಾಗಳಿಂತ ಭಿನ್ನ ಸಿನಿಮಾವನ್ನು ಪ್ರೇಕ್ಷಕರ ಮುಂದಿರಿಸುವ ಕನಸನ್ನ ಹೇಮಂತ್ ಕಟ್ಟಿಕೊಂಡಿದ್ದಾರೆ. ಅಂದಹಾಗೆಯೇ ಈ ಸಿನಿಮಾ ಸೆಪ್ಟೆಂಬರ್ 1 ರಂದು ರಿಲೀಸ್ ಆಗಲಿದೆ.
ಚಿತ್ರತಂಡ 2 ಅವತರಣಿಕೆಯಲ್ಲಿ ಸಿನಿಮಾ ರಿಲೀಸ್ ಮಾಡಲಿದೆ. ಹಾಗಾಗಿ ಮೊದಲ ಪಾರ್ಟ್ ಸೆಪ್ಟೆಂಬರ್ನಲ್ಲಿ ಬಿಡುಗಡೆಯಾಗಲಿದೆ. ಈ ಬಾರಿ ರಕ್ಷಿತ್ಗೆ ನಾಯಕಿಯಾಗಿ ರುಕ್ಮಿಣಿ ವಸಂತ್ ಅವರು ಪ್ರಿಯ ಪಾತ್ರದಲ್ಲಿ ನಟಿಸಿದ್ದಾರೆ. ಮಾತ್ರವಲ್ಲದೆ ಟೋಬಿ ಚಿತ್ರದ ನಾಯಕಿ ಚೈತ್ರಾ ಆಚಾರ್ ಕೂಡ ಈ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದಾರೆ.ಅದ್ಬೈತ ಗುರುಮೂರ್ತಿ ಕ್ಯಾಮೆರಾ ಕೈಚಳದಲ್ಲಿ ‘ಸಪ್ತ ಸಾದರದಾಚೆ ಎಲ್ಲೋ’ ಸಿನಿಮಾ ಮೂಡಿ ಬಂದಿದೆ. ಚರಣ್ ರಾಜ್ ಸಂಗೀತ ಸಂಯೋಜನೆಯೊAದಿಗೆ ಸಮುದ್ರದ ಅಲೆಗಳು ಕೇಳಲಾರಂಭಿಸುತ್ತದೆ.
ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…
ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…
ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…
ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…
ಬೆಂಗಳೂರಿನ ಖ್ಯಾತ ಚಲನಚಿತ್ರ ನಟಿಯಾಗಿರುವ ಬಿಂದ್ಯರಾಮ್ (ರಚಿತರಾಮ್) ಅವರು ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ್ದಾರೆ. ಬೆಂಜನಪದವಿನ…
ದಕ್ಷಿಣ ಕನ್ನಡ ಜಿಲ್ಲೆಯ ನಿನ್ನೆ ಸುರಿದ ಧಾರಾಕಾರ ಮಳೆಯ ಪರಿಣಾಮ ಬಂಟ್ವಾಳ ತಾಲೂಕಿನ ಹಲವು ಭಾಗಗಳಲ್ಲಿ ಸಿಡಿಲು ಬಡಿದು ಅಪಾರ…