ವಿಶೇಷ ವರದಿ

ಮಹಾಗನಿ ಮರ ರೈತನಿಗೆ ವರ, ಭಯವಿಲ್ಲ ರೋಗ ಉತ್ತಮ ಲಾಭ

ದಕ್ಷಿಣ ಕನ್ನಡ : ಕೃಷಿ ವಲಯದಲ್ಲಿ ಇತ್ತೀಚೆಗೆ ಹೊಸ ಹೊಸ ಸಂಶೋಧನೆಗಳು ಬರಲಾರಂಬಿಸಿವೆ, ಕೃಷಿಗೆ ಸಂಬಂಧಿಸಿದ ಹೊಸ ತಳಿ  ಹೊಸ ಬೇಸಾಯ ಕ್ರಮ, ಆಧುನಿಕ ಯಂತ್ರೋಪಕರಣಗಳ  ಬಳಕೆ ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳ ಸಹಕಾರ, ಸರ್ಕಾರದ ಹೊಸ ಹೊಸ ಯೋಜನೆಗಳು ಇವುಗಳೆಲ್ಲದರ ಸಹಾಯದಿಂದ ಕೃಷಿ ವಲಯ ಅಭಿವೃದ್ಧಿಯತ್ತ ಸಾಗುತ್ತಿದೆ.

  ಕೃಷಿಯಲ್ಲಿ ಸಾಂಪ್ರದಾಯಿಕ ಕೃಷಿ, ಆಧುನಿಕ ಕೃಷಿ, ಆಹಾರ ಉತ್ಪಾದನೆ ಮತ್ತು ವಾಣಿಜ್ಯಬೆಳೆಗಳು,ತೋಟಗಾರಿಕೆ ಮತ್ತು ಅರಣ್ಯ ಉತ್ಪತ್ತಿ, ಸಾವಯವ ಕೃಷಿಮತ್ತು ಆಧುನಿಕ ಕೃಷಿ, ಹಣ್ಣು ಹಂಪಲು ಮತ್ತು ದ್ವಿದಳ ಧಾನ್ಯಗಳು ಹೀಗೆ ಹತ್ತು ಹಲವು ವಿಧಗಳು.

          ಇಲ್ಲಿ ನಾವು ಹೇಳ್ತಾ ಇರೋದು ಮಹಾಗನಿ ಎಂಬ ವಾಣಿಜ್ಯ ಬೆಳೆ ಬಗ್ಗೆ ಮಹಾಗನಿ  ಮರ, ಬೀಜಗಳು ಮತ್ತು ಎಲೆಗಳು ಸೇರಿದಂತೆ  ಎಲ್ಲವನ್ನೂ ಬಳಸಲಾಗುತ್ತದೆ. ಒಳ್ಳೆ ಮಾರುಕಟ್ಟೆ ಇದೆ.

 ಇದರ  ಒಂದು ಮರದಿಂದ ನೀವು 30 ರಿಂದ 40  ಘನ ಅಡಿಗಳಷ್ಟು ಮರವನ್ನು ಪಡೆಯಬಹುದು. ಈ ಮೂಲಕ ನೀವು ಉತ್ತಮ ಲಾಭ  ಪಡೆಯಬಹುದು.

ಮಹೋಗಾನಿ ಮರದ ಬೆಲೆಯನ್ನು ಅದರ ಮರದ ಬಣ್ಣದಿಂದ ನಿರ್ಧರಿಸಲಾಗುತ್ತದೆ. ಅದರ ಮರದ ಬಣ್ಣವು ಕೆಂಪು ಮತ್ತು ಕಂದು ಬಣ್ಣಕ್ಕೆ ಇರುತ್ತದೆ. ಕೆಂಪು ಬಣ್ಣದ ಮರದ ಬೆಲೆ ಹೆಚ್ಚು, ಕಂದು ಬಣ್ಣದ ಮರದ ಬೆಲೆ ಸ್ವಲ್ಪ ಕಡಿಮೆ. ವಿಶೇಷವೆಂದರೆ, ಕಡಿಮೆ ನೀರು ಇರುವ ಬಂಜರು  ಸ್ಥಳಗಳಲ್ಲಿಯೂ ನೀವು ಈ ಮರವನ್ನು ಬೆಳೆಸಬಹುದು.

  ಮಹಾಗನಿ  ಮರ, ಎಲೆಗಳು ಮತ್ತು ಬೀಜಗಳು ತುಂಬಾ ಉಪಯುಕ್ತವಾಗಿವೆ. ಈ ಕಾರಣದಿಂದಾಗಿ ಈ ಮರವನ್ನು ಅಮೂಲ್ಯವೆಂದು ಪರಿಗಣಿಸಲಾಗಿದೆ. ಇದರ ಮರವು  ಗರಿಷ್ಠ  ತಾಪಮಾನ ತಡೆದುಕೊಳ್ಳಬಲ್ಲದು. ಆದ್ದರಿಂದ ಬಿಸಿಲು ಪ್ರದೇಶದಲ್ಲೂ ಬೆಳೆಯಬಹುದಾಗಿದೆ.

ಮರವು ತುಂಬಾ ಉತ್ತಮವಾಗಿದ್ದು, ಪೀಠೋಪಕರಣಗಳನ್ನು  ತಯಾರಿಸಲಾಗುತ್ತದೆ. ಇದರ ಎಲೆಗಳನ್ನು ಕ್ಯಾನ್ಸರ್, ರಕ್ತದೊತ್ತಡ ಮತ್ತು ಅಸ್ತಮಾ ಇತ್ಯಾದಿಗಳಿಗೆ ಔಷಧಿಗಳನ್ನು ತಯಾರಿಸಲು ಬಳಸಲಾಗುತ್ತದೆ. ಇದಲ್ಲದೆ, ಇದರ ಎಲೆಗಳು ಮತ್ತು ಬೀಜಗಳನ್ನು ಸೊಳ್ಳೆಗಳನ್ನು ಕೊಲ್ಲಲು ಬಳಸುವ ಔಷಧಿಗಳಲ್ಲಿ ಬಳಸಲಾಗುತ್ತದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…

1 day ago

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…

1 day ago

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…

1 day ago

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…

1 day ago

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…

2 days ago

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…

2 days ago