ಕರಾವಳಿ

ಪೆರ್ಲದಲ್ಲಿ ರಾಷ್ಟ್ರೀಯ ಭಾವೈಕ್ಯತಾ ಕಾವ್ಯ ಲಹರಿ – 2023

ಪೆರ್ಲ: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನೇತಾಜಿ ಸಾರ್ವಜನಿಕ ಗ್ರಂಥಾಲಯದ ಆಯೋಜನೆಯಲ್ಲಿ ‘ರಾಷ್ಟ್ರೀಯ ಭಾವೈಕ್ಯತಾ ಕಾವ್ಯಲಹರಿ -2023’ ಎಂಬ ವಿಶಿಷ್ಟ ಕಾರ್ಯಕ್ರಮವು ಜರಗಿತು.
‘ಎಣ್ಮಕಜೆ ಗ್ರಾಮ ಪಂಚಾಯತ್ ಹಾಲ್’ನಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಂಜೇಶ್ವರ ತಾಲೂಕು ಲೈಬ್ರರಿ ಕೌನ್ಸಿಲ್ ಕಾರ್ಯದರ್ಶಿ ಕಮಲಾಕ್ಷ ಡಿ ಸಾಮಾಜಿಕ ಪರಿವರ್ತನೆ ಆಗಬೇಕಾಗಿದೆ. ಬಾಲ್ಯದಿಂದಲೇ ಅದಕ್ಕೆ ತಕ್ಕುದಾದ ಪರಿಸರ ನಿರ್ಮಾಣವಾಗಬೇಕು. ಸಾಹಿತ್ಯ, ಓದು, ಬೆಳವಣಿಗೆಗೆ ಸಹಕಾರಿ. ಅದಕ್ಕಾಗಿ ಭಾವಿ ಜನಾಂಗವನ್ನು ಗ್ರಂಥಾಲಯಗಳತ್ತ ಆಕರ್ಷಿಸಬೇಕು ಎಂದು ಕರೆನೀಡಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸಾಹಿತಿ, ಕೇಂದ್ರೀಯ ವಿದ್ಯಾಲಯದ ವಿಶ್ರಾಂತ ಮುಖ್ಯೋಪಾಧ್ಯಾಯರಾದ ಎಸ್ ಎನ್ ಭಟ್ ಸೈಪಂಗಲ್ಲು ಸ್ವಾತಂತ್ರ್ಯಕ್ಕಾಗಿ ತಮ್ಮ ಬದುಕನ್ನೇ ಪಣವಾಗಿಟ್ಟ ಚೇತನಗಳನ್ನು ಸ್ಮರಿಸಬೇಕಾದುದು ನಮ್ಮೆಲ್ಲರ ಜವಾಬ್ದಾರಿ. ಇಂದು ನಾವು ಸ್ವತಂತ್ರ ಭಾರತದಲ್ಲಿ ಭಾವೈಕ್ಯತೆಯಿಂದ ಬದುಕುತ್ತಿದ್ದೇವೆಂದರೆ ಅದಕ್ಕೆ ಅವರೆಲ್ಲರ ತ್ಯಾಗ, ಬಲಿದಾನಗಳೇ ಕಾರಣ ಎಂದು ನುಡಿದರು.


ಮುಖ್ಯ ಅತಿಥಿಯಾಗಿ ಮಾತನಾಡಿದ ಕಾಸರಗೋಡು ಪಬ್ಲಿಕ್ ಪ್ರಾಸಿಕ್ಯೂಟರ್ ಚಂದ್ರಮೋಹನ್ ಕಾಟುಕುಕ್ಕೆ ವಿದ್ಯಾಭ್ಯಾಸ ಮನುಷ್ಯನನ್ನು ಅಳೆಯುವ ಮಾನದಂಡ ಅಲ್ಲ. ಬರಹದ ಮೂಲಕ ವ್ಯಕ್ತಿಗಳನ್ನು ಬದಲಾಯಿಸಲು ಸಾಧ್ಯವಿದೆ. ಆಮೂಲಕ ಒಂದು ಒಳ್ಳೆಯ ಸಮಾಜವನ್ನು ಕಟ್ಟಬಹುದು ಎಂದು ಅಭಿಪ್ರಾಯಪಟ್ಟರು.
ಬಳಿಕ ಆನಂದ ರೈ ಅಡ್ಕಸ್ಥಳ ಚಾಲನೆ ನೀಡಿದ ಕಾವ್ಯಲಹರಿಯಲ್ಲಿ ನವ್ಯಶ್ರೀ ಸ್ವರ್ಗ, ಮೇಘಶ್ರೀ ಪುತ್ತಿಗೆ, ಹಿತೇಶ್ ಕುಮಾರ್ ಎ. ನೀರ್ಚಾಲು, ಚಂದ್ರಕಲಾ ನೀರಾಳ, ರಂಜಿತಾ ಪಿ. ಪಟ್ಟಾಜೆ, ಶ್ರೀನಿವಾಸ ನಾಯ್ಕ್ ಪೆರಿಕ್ಕಾನ, ಜನಾರ್ದನ ನಾಯ್ಕ್ ಬೊಟ್ಟಾರಿ, ಸುಜಿತ್ ಕುಮಾರ್ ಬೇಕೂರು, ನಿರ್ಮಲಾ ಶೇಷಪ್ಪ ಖಂಡಿಗೆ, ಪ್ರಿಯಾ ಬಾಯಾರ್ ಮೊದಲಾದವರು ಸ್ವರಚಿತ ಕವನಗಳನ್ನು ವಾಚಿಸಿದರು.


ಬದಿಯಡ್ಕ ಅಂಬೇಡ್ಕರ್ ವಿಚಾರ ವೇದಿಕೆಯ ಅಧ್ಯಕ್ಷರಾದ ರಾಮ ಪಟ್ಟಾಜೆ, ಸಮತಾ ಸಾಹಿತ್ಯ ವೇದಿಕೆ ಸಂಚಾಲಕ ಸುಂದರ ಬಾರಡ್ಕ ಮೊದಲಾದವರು ಉಪಸ್ಥಿತರಿದ್ದರು.
ಜಿಲ್ಲಾ ಲೈಬ್ರರಿ ಕೌನ್ಸಿಲ್ ಸದಸ್ಯರಾದ ಉದಯ ಸಾರಂಗ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ನೇತಾಜಿ ಸಾರ್ವಜನಿಕ ಗ್ರಂಥಾಲಯ ಅಧ್ಯಕ್ಷರಾದ ರಾಮಕೃಷ್ಣ ರೈ ಕುದ್ವ ವಂದಿಸಿ, ಕಾರ್ಯದರ್ಶಿ ವನಜಾಕ್ಷಿ ಪಿ ಚೆಂಬ್ರಕಾನ ನಿರೂಪಿಸಿದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…

16 hours ago

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…

16 hours ago

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…

17 hours ago

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…

1 day ago

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…

1 day ago

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…

2 days ago