ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಮಂಚಿ – ಕೊಳ್ನಾಡು ಸರಕಾರಿ ಪ್ರೌಢಶಾಲೆಯಲ್ಲಿ ಯಕ್ಷ ಧ್ರುವ ಯಕ್ಷ ಶಿಕ್ಷಣದ ಉದ್ಘಾಟನೆ

ಯಕ್ಷ ಧ್ರುವ ಪಟ್ಲ ಫೌಂಡೇಶನ್ ( ರಿ ) ಮಂಗಳೂರು ಇದರ ಸಹಯೋಗದೊಂದಿಗೆ ಯಕ್ಷ ಧ್ರುವ – ಯಕ್ಷ ಶಿಕ್ಷಣ ಎನ್ನುವ ಯಕ್ಷಗಾನ. ನಾಟ್ಯ ತರಬೇತಿ ಶಿಕ್ಷಣವನ್ನು ಸರಕಾರಿ ಪ್ರೌಢಶಾಲೆ ಮಂಚಿ – ಕೊಳ್ನಾಡು ಇಲ್ಲಿ ಸಂಯೋಜನೆ ಮಾಡಲಾಯಿತು. ಯಕ್ಷಗಾನ ನಾಟ್ಯ ತರಬೇತಿ ಶಿಕ್ಷಣದ ಉದ್ಘಾಟನೆ.ಯನ್ನು ಮಂಗಳೂರು ಮಹಾನಗರ ಪಾಲಿಕೆಯ ಉಪ ಆಯುಕ್ತರು ಹಾಗೂ ಹಿರಿಯ ವಿದ್ಯಾರ್ಥಿಯಾಗಿರುವ ರೇಖಾ ಜೆ ಶೆಟ್ಟಿ ನೆರವೇರಿಸಿ, “ಪ್ರಸ್ತುತ ಕಾಲಘಟ್ಟದಲ್ಲಿ ಅವಕಾಶಗಳು ಹೆಚ್ಚು – ಹೆಚ್ಚು ಸೃಷ್ಟಿಯಾಗುತ್ತಾ ಇದೆ. ವಿದ್ಯಾರ್ಥಿಗಳು ಸರ್ವತೋಮುಖ ಅಭಿವೃದ್ಧಿಯತ್ತ ಮುಖ ಮಾಡಿದ್ದು ಅವಕಾಶಗಳನ್ನು ಬಳಸಿಕೊಳ್ಳುವಲ್ಲಿ ಆಸಕ್ತರಾಗಬೇಕು” ಎಂದರು.

ಯಕ್ಷ ಧ್ರುವ ಪಟ್ಲ ಫೌಂಡೇಶನ್ ಸ್ಥಾಪಕ ಅಧ್ಯಕ್ಷರಾದ ಸತೀಶ್ ಪಟ್ಲ ಮಾತನಾಡಿ, “ಯಕ್ಷಗಾನ ಎನ್ನುವುದು ಒಬ್ಬ ವ್ಯಕ್ತಿಯಲ್ಲಿ ಸಂಸ್ಕಾರ ತುಂಬುವ ಕಲೆ. ಸರ್ವಧರ್ಮೀಯರು ಇಷ್ಟಪಡುವ ಯಕ್ಷಗಾನವು ಎಲ್ಲಾ ಜಾತಿಯ ಕಲಾವಿದರನ್ನು ಒಲಿಸಿಕೊಂಡಿದೆ. ವಿದೇಶಿಗರಿಗಿರುವ ಯಕ್ಷಗಾನದ ಮೇಲಿನ ಒಲವು ತನ್ನ ಮೇಲೆ ವಿಶೇಷವಾದ ಪ್ರಭಾವ ಬೀರಿದೆ. ಈ ಕಾರಣದಿಂದ ನಮ್ಮೂರಿನ ಸರಕಾರಿ ಶಾಲೆಯ ಮಕ್ಕಳಿಗೆ ಯಕ್ಷಗಾನ ನಾಟ್ಯ ತರಗತಿ ಅಭಿಯಾನವನ್ನು ಆರಂಭ ಮಾಡಿದ್ದೇವೆ” ಎಂದರು. ಈ ಸಂದರ್ಭದಲ್ಲಿ ತಮ್ಮ ಸುಮಧುರ ಕಂಠದಿಂದ ಹಾಡನ್ನು ಹಾಡಿ ನೆರೆದ ಎಲ್ಲರನ್ನು ರಂಜಿಸಿದರು.

ಹಿರಿಯ ವಿದ್ಯಾರ್ಥಿ ಹಾಗೂ ಯಕ್ಷಗಾನ ಕಲಾವಿದ ಪುಷ್ಪರಾಜ ಕುಕ್ಕಾಜೆ ಮಾತನಾಡಿ, “ಯಕ್ಷಗಾನ ಎನ್ನುವುದು ರಾತ್ರಿ ಶಾಲೆ ಇದ್ದಂತೆ. ಶಾಲಾ ಶಿಕ್ಷಣವು ಅಕ್ಷರ ಜ್ಞಾನವನ್ನು ಕಲಿಸಿದರೆ. ಯಕ್ಷ ಶಿಕ್ಷಣವು ಒಟ್ಟು ಬದುಕಿನ ಸಿದ್ದಾಂತವನ್ನು ಕಲಿಸುತ್ತದೆ” ಎಂದರು.

ಮಂಚಿ ಕೊಳ್ನಾಡು ಪ್ರೌಢಶಾಲೆಯ ಅಂದಾಜು 85 ವಿದ್ಯಾರ್ಥಿಗಳು ಯಕ್ಷಗಾನ ಯಕ್ಷಧ್ರುವ ನಾಟ್ಯ ತರಬೇತಿಯಲ್ಲಿ ಪಾಲ್ಗೊಂಡಿದ್ದು ಅಶ್ವತ್ಥ್ ಮಂಜನಾಡಿ ಇವರು ಯಕ್ಷಗಾನದ ಗುರುಗಳಾಗಿ ತರಬೇತಿಯನ್ನು ನೀಡುತ್ತಿದ್ದಾರೆ.

ಈ ಸಭಾ ಕಾರ್ಯಕ್ರಮದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಕಾರ್ಯದರ್ಶಿಯಾಗಿರುವ ಪುರುಷೋತ್ತಮ ಭಂಡಾರಿ, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಪ್ರವೀಣ್ ಕೊಟ್ಟಾರಿ ಇವರು ಉಪಸ್ಥಿತರಿದ್ದರು.

ಮಂಚಿ ಕೊಳ್ನಾಡು ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ರಾಮ್ ಪ್ರಸಾದ್ ರೈ ತಿರುವಾಜೆ ಸ್ವಾಗತಿಸಿ, ಮುಖ್ಯೋಪಾಧ್ಯಾಯರಾದ ಶ್ರೀಮತಿ ಸುಶೀಲಾ ವಿಟ್ಲ ವಂದಿಸಿದರು. ಕನ್ನಡ ಭಾಷಾ ಶಿಕ್ಷಕಿ ಶ್ರೀಮತಿ ವಿಜಯಲಕ್ಷ್ಮಿ ಕಟೀಲು ಕಾರ್ಯಕ್ರಮ ನಿರ್ವಹಿಸಿದರು.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!