ಉದ್ಯೋಗಕ್ಕಾಗಿ ಸೌದಿ ಅರೇಬಿಯಾಕ್ಕೆ ತೆರಳಿ ಹ್ಯಾಕರ್ಗಳ ಮೋಸದಾಟಕ್ಕೆ ಸಿಲುಕಿ ಜೈಲು ಪಾಲಾಗಿರುವ ಕಡಬ ಮೂಲದ ಊತ್ತೂರು ಗ್ರಾಮದ ಚಂದ್ರಶೇಖರ್ ಅವರ ಬಿಡುಗಡೆಯ ಸಾಧ್ಯತೆಯಿದೆ.
2022ರ ನವೆಂಬರ್ನಿoದ ಸೌದಿಯ ರಿಯಾದ್ನ ಜೈಲಿನಲ್ಲೇ ದಿನ ಕಳೆಯುವ ದುಸ್ಥಿತಿ ಬಂದಿದ್ದು, ಚಂದ್ರಶೇಖರ್ ಅವರ ವಿರುದ್ಧ ವಂಚನೆಯ ದೂರು ನೀಡಿದ ಮಹಿಳೆಗೆ ವಂಚನೆಯಾದ ಮೊತ್ತವನ್ನು ಪಾವತಿಸಿ ಎನ್ಒಸಿ ಪಡೆದು ಅದನ್ನು ಪೊಲೀಸ್ ಹಾಗೂ ಜೈಲಿಗೆ ನೀಡಬೇಕಾಗಿದೆ.
ಈ ಕೆಲಸವನ್ನು ರಿಯಾದ್ನಲ್ಲಿ ಅವರ ಮಿತ್ರರು ಸೇರಿ ಮಾಡುತ್ತಿದ್ದು, ಎನ್ಒಸಿ ಸಿಕ್ಕಿದ ಬಳಿಕ ಬಿಡುಗಡೆಯಾಗುವ ಸಾಧ್ಯತೆಯಿದೆ.
ಅಲ್ಪಾನರ್ ಸೆರಾಮಿಕ್ಸ್ ಎಂಬ ಕಂಪನಿಯಲ್ಲಿ ಉದ್ಯೋಗಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಚಂದ್ರಶೇಖರ್ ಕಳೆದ ವರ್ಷ ಮೊಬೈಲ್ ಮತ್ತು ಸಿಮ್ ಖರೀದಿಗಾಗಿ ರಿಯಾದ್ನಲ್ಲಿರುವ ಮೊಬೈಲ್ ಅಂಗಡಿಯೊAದಕ್ಕೆ ತೆರಳಿದ್ದಾರೆ.
ಈ ಸಂದರ್ಭದಲ್ಲಿ ಚಂದ್ರಶೇಖರ್ ಅವರಿಂದ 2 ಬಾರಿ ತಂಬ್ ಅನ್ನು ಪಡೆಯಲಾಗಿದೆ. ಒಂದು ವಾರದ ಬಳಿಕ ಆ ದೂರವಾಣಿ ಸಂಖ್ಯೆಗೆ ಅರೆಬೀಕ್ ಭಾಷೆಯಲ್ಲಿನ ಸಂದೇಶವೊoದು ಬಂದಿದ್ದು, ಸಂದೇಶವನ್ನು ಕ್ಲಿಕ್ ಮಾಡಿದ ಚಂದ್ರಶೇಖರ್ ಬಳಿ ಸಿಮ್ ಬಗ್ಗೆಗಿನ ಮಾಹಿತಿ ಹಾಗೂ ಓಟಿಪಿ ಯನ್ನು ಕೇಳಿದ್ದಾರೆ. ಓಟಿಪಿ ಹೇಳಿದ ಚಂದ್ರಶೇಖರ್ ಬಳಿಕ ತಮ್ಮ ಕೆಲಸಕ್ಕೆ ತೆರಳಿದ್ದಾರೆ. ಇದರ ಜತೆ ತಮ್ಮ ನಿಶ್ಚಿತಾರ್ಥ ಮತ್ತಿತ್ತರ ಕೆಲಸದಲ್ಲಿ ಮಗ್ನರಾಗಿದ್ದರು. ಈ ನಡುವೆ ಅಚಾನಕ್ ಆಗಿ ಒಂದು ದಿನ ಪೊಲೀಸರು ಏಕಾಏಕಿ ಚಂದ್ರಶೇಖರ್ ಅವರನ್ನು ಬಂಧಿಸಿದ್ದು, ಕುಟುಂಬಕ್ಕೆ ಬರಸಿಡಿಲು ಬಡಿದಂತಾಗುತ್ತದೆ.
ಚoದ್ರಶೇಖರ್ ಅವರಿಗೆ ತಿಳಿಯದಂತೆ ಅಲ್ಲಿ ಬ್ಯಾಂಕ್ವೊoದರಲ್ಲಿ ಅಕೌಂಟ್ ತೆರೆದಿದ್ದು, ಮತ್ತು ಅದೇ ದೇಶದ ಮಹಿಳೆಯೊಬ್ಬರ 22 ಸಾವಿರ ಈ ಖಾತೆಗೆ ಜಮೆಯಾಗಿ ಕೂಡಲೇ ಅದರಿಂದ ಬೇರೆ ಯಾವುದೋ ದೇಶಕ್ಕೆ ವರ್ಗಾವಣೆಯಾಗಿತ್ತು. ಹಣ ಕಳೆದುಕೊಂಡ ಮಹಿಳೆಯು ಚಂದ್ರಶೇಖರ್ ರವರ ಖಾತೆಗೆ ಜಮೆಯಾಗಿರುವುದನ್ನು ಗಮನಿಸಿ ಚಂದ್ರಶೇಖರ್ ಅವರ ಮೇಲೆ ದೂರನ್ನು ನೀಡಿದ್ದಾರೆ. ಹೀಗಾಗಿ ಪೊಲೀಸರು ಚಂದ್ರಶೇಖರ್ ಅವರನ್ನು ಬಂಧಿಸಿದ್ದಾರೆ.
ಹ್ಯಾಕರ್ಗಳ ಕುಕೃತ್ಯದಿಂದ ಚಂದ್ರಶೇಖರ್ ಅವರು ಜೈಲಿನಲ್ಲಿ ಬಂಧಿಯಾಗಿದ್ದಾರೆ. ಮಗನ ಆಗಮನಕ್ಕಾಗಿ ತಾಯಿ ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಅಲ್ಲದೆ ಮಗನನ್ನು ಬಿಡಿಸಿಕೊಳ್ಳಲು ಕಳೆದ 8 ತಿಂಗಳಿoದ ಒದ್ದಾಡುತ್ತಿದ್ದಾರೆ. ಇತ್ತ ಚಂದ್ರಶೇಖರ್ ದುಡಿಯುತ್ತಿದ್ದ ರಿಯಾದ್ ಕಂಪನಿಯೂ ಈ ಬಗ್ಗೆ ಯಾವುದೇ ಮಾಹಿತಿಯನ್ನು ಹಂಚಿಕೊಳ್ಳದೆ ಅನ್ಯಾಯ ಮಾಡಿದೆ ಎಂದು ಚಂದ್ರಶೇಖರ್ ಅವರ ತಾಯಿ ಕಣ್ಣೀರಿಡುತ್ತಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…