ಉದ್ಯೋಗಕ್ಕಾಗಿ ಸೌದಿ ಅರೇಬಿಯಾಕ್ಕೆ ತೆರಳಿ ಹ್ಯಾಕರ್ಗಳ ಮೋಸದಾಟಕ್ಕೆ ಸಿಲುಕಿ ಜೈಲು ಪಾಲಾಗಿರುವ ಕಡಬ ಮೂಲದ ಊತ್ತೂರು ಗ್ರಾಮದ ಚಂದ್ರಶೇಖರ್ ಅವರ ಬಿಡುಗಡೆಯ ಸಾಧ್ಯತೆಯಿದೆ.
2022ರ ನವೆಂಬರ್ನಿoದ ಸೌದಿಯ ರಿಯಾದ್ನ ಜೈಲಿನಲ್ಲೇ ದಿನ ಕಳೆಯುವ ದುಸ್ಥಿತಿ ಬಂದಿದ್ದು, ಚಂದ್ರಶೇಖರ್ ಅವರ ವಿರುದ್ಧ ವಂಚನೆಯ ದೂರು ನೀಡಿದ ಮಹಿಳೆಗೆ ವಂಚನೆಯಾದ ಮೊತ್ತವನ್ನು ಪಾವತಿಸಿ ಎನ್ಒಸಿ ಪಡೆದು ಅದನ್ನು ಪೊಲೀಸ್ ಹಾಗೂ ಜೈಲಿಗೆ ನೀಡಬೇಕಾಗಿದೆ.
ಈ ಕೆಲಸವನ್ನು ರಿಯಾದ್ನಲ್ಲಿ ಅವರ ಮಿತ್ರರು ಸೇರಿ ಮಾಡುತ್ತಿದ್ದು, ಎನ್ಒಸಿ ಸಿಕ್ಕಿದ ಬಳಿಕ ಬಿಡುಗಡೆಯಾಗುವ ಸಾಧ್ಯತೆಯಿದೆ.
ಅಲ್ಪಾನರ್ ಸೆರಾಮಿಕ್ಸ್ ಎಂಬ ಕಂಪನಿಯಲ್ಲಿ ಉದ್ಯೋಗಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಚಂದ್ರಶೇಖರ್ ಕಳೆದ ವರ್ಷ ಮೊಬೈಲ್ ಮತ್ತು ಸಿಮ್ ಖರೀದಿಗಾಗಿ ರಿಯಾದ್ನಲ್ಲಿರುವ ಮೊಬೈಲ್ ಅಂಗಡಿಯೊAದಕ್ಕೆ ತೆರಳಿದ್ದಾರೆ.
ಈ ಸಂದರ್ಭದಲ್ಲಿ ಚಂದ್ರಶೇಖರ್ ಅವರಿಂದ 2 ಬಾರಿ ತಂಬ್ ಅನ್ನು ಪಡೆಯಲಾಗಿದೆ. ಒಂದು ವಾರದ ಬಳಿಕ ಆ ದೂರವಾಣಿ ಸಂಖ್ಯೆಗೆ ಅರೆಬೀಕ್ ಭಾಷೆಯಲ್ಲಿನ ಸಂದೇಶವೊoದು ಬಂದಿದ್ದು, ಸಂದೇಶವನ್ನು ಕ್ಲಿಕ್ ಮಾಡಿದ ಚಂದ್ರಶೇಖರ್ ಬಳಿ ಸಿಮ್ ಬಗ್ಗೆಗಿನ ಮಾಹಿತಿ ಹಾಗೂ ಓಟಿಪಿ ಯನ್ನು ಕೇಳಿದ್ದಾರೆ. ಓಟಿಪಿ ಹೇಳಿದ ಚಂದ್ರಶೇಖರ್ ಬಳಿಕ ತಮ್ಮ ಕೆಲಸಕ್ಕೆ ತೆರಳಿದ್ದಾರೆ. ಇದರ ಜತೆ ತಮ್ಮ ನಿಶ್ಚಿತಾರ್ಥ ಮತ್ತಿತ್ತರ ಕೆಲಸದಲ್ಲಿ ಮಗ್ನರಾಗಿದ್ದರು. ಈ ನಡುವೆ ಅಚಾನಕ್ ಆಗಿ ಒಂದು ದಿನ ಪೊಲೀಸರು ಏಕಾಏಕಿ ಚಂದ್ರಶೇಖರ್ ಅವರನ್ನು ಬಂಧಿಸಿದ್ದು, ಕುಟುಂಬಕ್ಕೆ ಬರಸಿಡಿಲು ಬಡಿದಂತಾಗುತ್ತದೆ.
ಚoದ್ರಶೇಖರ್ ಅವರಿಗೆ ತಿಳಿಯದಂತೆ ಅಲ್ಲಿ ಬ್ಯಾಂಕ್ವೊoದರಲ್ಲಿ ಅಕೌಂಟ್ ತೆರೆದಿದ್ದು, ಮತ್ತು ಅದೇ ದೇಶದ ಮಹಿಳೆಯೊಬ್ಬರ 22 ಸಾವಿರ ಈ ಖಾತೆಗೆ ಜಮೆಯಾಗಿ ಕೂಡಲೇ ಅದರಿಂದ ಬೇರೆ ಯಾವುದೋ ದೇಶಕ್ಕೆ ವರ್ಗಾವಣೆಯಾಗಿತ್ತು. ಹಣ ಕಳೆದುಕೊಂಡ ಮಹಿಳೆಯು ಚಂದ್ರಶೇಖರ್ ರವರ ಖಾತೆಗೆ ಜಮೆಯಾಗಿರುವುದನ್ನು ಗಮನಿಸಿ ಚಂದ್ರಶೇಖರ್ ಅವರ ಮೇಲೆ ದೂರನ್ನು ನೀಡಿದ್ದಾರೆ. ಹೀಗಾಗಿ ಪೊಲೀಸರು ಚಂದ್ರಶೇಖರ್ ಅವರನ್ನು ಬಂಧಿಸಿದ್ದಾರೆ.
ಹ್ಯಾಕರ್ಗಳ ಕುಕೃತ್ಯದಿಂದ ಚಂದ್ರಶೇಖರ್ ಅವರು ಜೈಲಿನಲ್ಲಿ ಬಂಧಿಯಾಗಿದ್ದಾರೆ. ಮಗನ ಆಗಮನಕ್ಕಾಗಿ ತಾಯಿ ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಅಲ್ಲದೆ ಮಗನನ್ನು ಬಿಡಿಸಿಕೊಳ್ಳಲು ಕಳೆದ 8 ತಿಂಗಳಿoದ ಒದ್ದಾಡುತ್ತಿದ್ದಾರೆ. ಇತ್ತ ಚಂದ್ರಶೇಖರ್ ದುಡಿಯುತ್ತಿದ್ದ ರಿಯಾದ್ ಕಂಪನಿಯೂ ಈ ಬಗ್ಗೆ ಯಾವುದೇ ಮಾಹಿತಿಯನ್ನು ಹಂಚಿಕೊಳ್ಳದೆ ಅನ್ಯಾಯ ಮಾಡಿದೆ ಎಂದು ಚಂದ್ರಶೇಖರ್ ಅವರ ತಾಯಿ ಕಣ್ಣೀರಿಡುತ್ತಿದ್ದಾರೆ.
ಮಿಜಾರ್ ಸಮೀಪ ಬಾಡಿಗೆ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಮೂವರು ಗಾಯಗೊಂಡ ಘಟನೆ ನಡೆದಿದೆ. ಘಟನೆಯಲ್ಲಿ ಆಳ್ವಾಸ್ ಕಾಲೇಜಿನ ಕೆಲಸಗಾರ ಶಿವರಾಮ,…
ನೀಟ್ ಮರು ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವೇಳೆ ಕೋಚಿಂಗ್ ಸೆಂಟರ್ನ ಹಾಸ್ಟೆಲ್ನಲ್ಲಿ ತಂಗಿ ಆತ್ಮಹತ್ಯೆ ಮಾಡಿಕೊಂಡಿದ್ದ ದುರಂತ ಮಾಸುವ ಮುನ್ನವೇ,…
ಕೊಲಂಬಿಯಾದ ಪಶ್ಚಿಮ ಭಾಗದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ 111 ಮಂದಿ ಮೃತಪಟ್ಟಿದ್ದಾರೆ. 87ಕ್ಕೂ ಹೆಚ್ಚು ಮಂದಿ…
ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬಸ್ಸೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ವಿಟ್ಲ ಪಡ್ನೂರು ಗ್ರಾಮದ ಪೂರ್ಲಪ್ಪಾಡಿ ಸಮೀಪದ…
ಪಾದಚಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ತಲಪಾಡಿಯಲ್ಲಿ ನಡೆದಿದೆ. ಗದಗ ನಿವಾಸಿ ಶರಣಪ್ಪ ಗಂಭೀರ…
ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕ…