ಜನ ಮನದ ನಾಡಿ ಮಿಡಿತ

Advertisement

8 ವರ್ಷಗಳ ಹಿಂದೆ ನೈಲ್ ಕಟ್ಟರ್ ನುಂಗಿದ್ದ ಭೂಪ..!

ಈತನ ಪರಿಸ್ಥಿತಿ ಈಗ ಹೇಗಿದೆ ಗೊತ್ತಾ..? ಎಂಥೆ೦ಥಾ ವಿಚಿತ್ರ ಮನುಷ್ಯರು ಇರ್ತಾರೆ ನೋಡಿ..

ವ್ಯಕ್ತಿಯೊಬ್ಬರು 8 ವರ್ಷಗಳ ಹಿಂದೆ ನುಂಗಿದ್ದ ನೈಲ್ ಕಟ್ಟರ್ ಅನ್ನು ಯಶಸ್ವಿ ಶಸ್ತ್ರ ಚಿಕಿತ್ಸೆ ಮೂಲಕ ಮಣಿಪಾಲ್ ವೈದ್ಯರು ಹೊರ ತೆಗೆದಿದ್ದಾರೆ.

ಸರ್ಜಾಪುರದ 40 ವರ್ಷದ ನಿವಾಸಿಯೊಬ್ಬರು ಮದ್ಯಪಾನ ಅಮಲಿನಲ್ಲಿ ನೈಲ್ ಕಟ್ಟರ್ ಅನ್ನು 8 ವರ್ಷಗಳ ಹಿಂದೆ ನುಂಗಿದ್ದರು. ಇದನ್ನು ನುಂಗಿರುವುದೇ ವ್ಯಕ್ತಿ ಮರೆತು ಹೋಗಿದ್ದರು. ಮೊದ ಮೊದಲು ಇದು ಅಷ್ಟಾಗಿ ನೋವು ಕಾಣಿಸಿಕೊಂಡಿಲ್ಲ. ಆದ್ರೆ ಈಗೀಗ ಅದರ ನೋವು ವಿಪರೀತವಾಗಿತ್ತು. ಹೀಗಾಗಿ ಸ್ಥಳೀಯ ಕ್ಲಿನಿಕ್ಗೆ ದಾಖಲಾಗಿ ತಪಾಸಣೆ ಮಾಡಿಸಿಕೊಂಡಿದ್ದರು. ಆಗ ಸ್ಕ್ಯಾನಿಂಗ್ ವೇಳೆ ಹೊಟ್ಟೆಯಲ್ಲಿ ಏನೋ ಸಾಧನ ಇರುವುದು ಗೊತ್ತಾಗಿದೆ.ಇದರಿಂದ ಹೊಟ್ಟೆ ಒಳಗೆ ಏನೋ ಇದೆಯೆಂದು ಹೆಚ್ಚಿನ ಚಿಕಿತ್ಸೆ ಪಡೆಯಲು ವ್ಯಕ್ತಿ ತಕ್ಷಣ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯ ಡಾ.U. ಲೋಹಿತ್ ನೇತೃತ್ವದ ವೈದ್ಯರ ತಂಡ ಲ್ಯಾಪ್ರೋಸ್ಕೋಫಿಕ್ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸುವ ಮೂಲಕ ನೈಲ್ ಕಟ್ಟರ್ ಅನ್ನು ಹೊರ ತೆಗೆದಿದ್ದಾರೆ. ಸದ್ಯ ಆರೋಗ್ಯವಾಗಿರುವ ವ್ಯಕ್ತಿಯು ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!