ಈತನ ಪರಿಸ್ಥಿತಿ ಈಗ ಹೇಗಿದೆ ಗೊತ್ತಾ..? ಎಂಥೆ೦ಥಾ ವಿಚಿತ್ರ ಮನುಷ್ಯರು ಇರ್ತಾರೆ ನೋಡಿ..
ವ್ಯಕ್ತಿಯೊಬ್ಬರು 8 ವರ್ಷಗಳ ಹಿಂದೆ ನುಂಗಿದ್ದ ನೈಲ್ ಕಟ್ಟರ್ ಅನ್ನು ಯಶಸ್ವಿ ಶಸ್ತ್ರ ಚಿಕಿತ್ಸೆ ಮೂಲಕ ಮಣಿಪಾಲ್ ವೈದ್ಯರು ಹೊರ ತೆಗೆದಿದ್ದಾರೆ.
ಸರ್ಜಾಪುರದ 40 ವರ್ಷದ ನಿವಾಸಿಯೊಬ್ಬರು ಮದ್ಯಪಾನ ಅಮಲಿನಲ್ಲಿ ನೈಲ್ ಕಟ್ಟರ್ ಅನ್ನು 8 ವರ್ಷಗಳ ಹಿಂದೆ ನುಂಗಿದ್ದರು. ಇದನ್ನು ನುಂಗಿರುವುದೇ ವ್ಯಕ್ತಿ ಮರೆತು ಹೋಗಿದ್ದರು. ಮೊದ ಮೊದಲು ಇದು ಅಷ್ಟಾಗಿ ನೋವು ಕಾಣಿಸಿಕೊಂಡಿಲ್ಲ. ಆದ್ರೆ ಈಗೀಗ ಅದರ ನೋವು ವಿಪರೀತವಾಗಿತ್ತು. ಹೀಗಾಗಿ ಸ್ಥಳೀಯ ಕ್ಲಿನಿಕ್ಗೆ ದಾಖಲಾಗಿ ತಪಾಸಣೆ ಮಾಡಿಸಿಕೊಂಡಿದ್ದರು. ಆಗ ಸ್ಕ್ಯಾನಿಂಗ್ ವೇಳೆ ಹೊಟ್ಟೆಯಲ್ಲಿ ಏನೋ ಸಾಧನ ಇರುವುದು ಗೊತ್ತಾಗಿದೆ.ಇದರಿಂದ ಹೊಟ್ಟೆ ಒಳಗೆ ಏನೋ ಇದೆಯೆಂದು ಹೆಚ್ಚಿನ ಚಿಕಿತ್ಸೆ ಪಡೆಯಲು ವ್ಯಕ್ತಿ ತಕ್ಷಣ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯ ಡಾ.U. ಲೋಹಿತ್ ನೇತೃತ್ವದ ವೈದ್ಯರ ತಂಡ ಲ್ಯಾಪ್ರೋಸ್ಕೋಫಿಕ್ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸುವ ಮೂಲಕ ನೈಲ್ ಕಟ್ಟರ್ ಅನ್ನು ಹೊರ ತೆಗೆದಿದ್ದಾರೆ. ಸದ್ಯ ಆರೋಗ್ಯವಾಗಿರುವ ವ್ಯಕ್ತಿಯು ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…