ಈತನ ಪರಿಸ್ಥಿತಿ ಈಗ ಹೇಗಿದೆ ಗೊತ್ತಾ..? ಎಂಥೆ೦ಥಾ ವಿಚಿತ್ರ ಮನುಷ್ಯರು ಇರ್ತಾರೆ ನೋಡಿ..
ವ್ಯಕ್ತಿಯೊಬ್ಬರು 8 ವರ್ಷಗಳ ಹಿಂದೆ ನುಂಗಿದ್ದ ನೈಲ್ ಕಟ್ಟರ್ ಅನ್ನು ಯಶಸ್ವಿ ಶಸ್ತ್ರ ಚಿಕಿತ್ಸೆ ಮೂಲಕ ಮಣಿಪಾಲ್ ವೈದ್ಯರು ಹೊರ ತೆಗೆದಿದ್ದಾರೆ.
ಸರ್ಜಾಪುರದ 40 ವರ್ಷದ ನಿವಾಸಿಯೊಬ್ಬರು ಮದ್ಯಪಾನ ಅಮಲಿನಲ್ಲಿ ನೈಲ್ ಕಟ್ಟರ್ ಅನ್ನು 8 ವರ್ಷಗಳ ಹಿಂದೆ ನುಂಗಿದ್ದರು. ಇದನ್ನು ನುಂಗಿರುವುದೇ ವ್ಯಕ್ತಿ ಮರೆತು ಹೋಗಿದ್ದರು. ಮೊದ ಮೊದಲು ಇದು ಅಷ್ಟಾಗಿ ನೋವು ಕಾಣಿಸಿಕೊಂಡಿಲ್ಲ. ಆದ್ರೆ ಈಗೀಗ ಅದರ ನೋವು ವಿಪರೀತವಾಗಿತ್ತು. ಹೀಗಾಗಿ ಸ್ಥಳೀಯ ಕ್ಲಿನಿಕ್ಗೆ ದಾಖಲಾಗಿ ತಪಾಸಣೆ ಮಾಡಿಸಿಕೊಂಡಿದ್ದರು. ಆಗ ಸ್ಕ್ಯಾನಿಂಗ್ ವೇಳೆ ಹೊಟ್ಟೆಯಲ್ಲಿ ಏನೋ ಸಾಧನ ಇರುವುದು ಗೊತ್ತಾಗಿದೆ.ಇದರಿಂದ ಹೊಟ್ಟೆ ಒಳಗೆ ಏನೋ ಇದೆಯೆಂದು ಹೆಚ್ಚಿನ ಚಿಕಿತ್ಸೆ ಪಡೆಯಲು ವ್ಯಕ್ತಿ ತಕ್ಷಣ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯ ಡಾ.U. ಲೋಹಿತ್ ನೇತೃತ್ವದ ವೈದ್ಯರ ತಂಡ ಲ್ಯಾಪ್ರೋಸ್ಕೋಫಿಕ್ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸುವ ಮೂಲಕ ನೈಲ್ ಕಟ್ಟರ್ ಅನ್ನು ಹೊರ ತೆಗೆದಿದ್ದಾರೆ. ಸದ್ಯ ಆರೋಗ್ಯವಾಗಿರುವ ವ್ಯಕ್ತಿಯು ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…