ಈತನ ಪರಿಸ್ಥಿತಿ ಈಗ ಹೇಗಿದೆ ಗೊತ್ತಾ..? ಎಂಥೆ೦ಥಾ ವಿಚಿತ್ರ ಮನುಷ್ಯರು ಇರ್ತಾರೆ ನೋಡಿ..
ವ್ಯಕ್ತಿಯೊಬ್ಬರು 8 ವರ್ಷಗಳ ಹಿಂದೆ ನುಂಗಿದ್ದ ನೈಲ್ ಕಟ್ಟರ್ ಅನ್ನು ಯಶಸ್ವಿ ಶಸ್ತ್ರ ಚಿಕಿತ್ಸೆ ಮೂಲಕ ಮಣಿಪಾಲ್ ವೈದ್ಯರು ಹೊರ ತೆಗೆದಿದ್ದಾರೆ.
ಸರ್ಜಾಪುರದ 40 ವರ್ಷದ ನಿವಾಸಿಯೊಬ್ಬರು ಮದ್ಯಪಾನ ಅಮಲಿನಲ್ಲಿ ನೈಲ್ ಕಟ್ಟರ್ ಅನ್ನು 8 ವರ್ಷಗಳ ಹಿಂದೆ ನುಂಗಿದ್ದರು. ಇದನ್ನು ನುಂಗಿರುವುದೇ ವ್ಯಕ್ತಿ ಮರೆತು ಹೋಗಿದ್ದರು. ಮೊದ ಮೊದಲು ಇದು ಅಷ್ಟಾಗಿ ನೋವು ಕಾಣಿಸಿಕೊಂಡಿಲ್ಲ. ಆದ್ರೆ ಈಗೀಗ ಅದರ ನೋವು ವಿಪರೀತವಾಗಿತ್ತು. ಹೀಗಾಗಿ ಸ್ಥಳೀಯ ಕ್ಲಿನಿಕ್ಗೆ ದಾಖಲಾಗಿ ತಪಾಸಣೆ ಮಾಡಿಸಿಕೊಂಡಿದ್ದರು. ಆಗ ಸ್ಕ್ಯಾನಿಂಗ್ ವೇಳೆ ಹೊಟ್ಟೆಯಲ್ಲಿ ಏನೋ ಸಾಧನ ಇರುವುದು ಗೊತ್ತಾಗಿದೆ.ಇದರಿಂದ ಹೊಟ್ಟೆ ಒಳಗೆ ಏನೋ ಇದೆಯೆಂದು ಹೆಚ್ಚಿನ ಚಿಕಿತ್ಸೆ ಪಡೆಯಲು ವ್ಯಕ್ತಿ ತಕ್ಷಣ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯ ಡಾ.U. ಲೋಹಿತ್ ನೇತೃತ್ವದ ವೈದ್ಯರ ತಂಡ ಲ್ಯಾಪ್ರೋಸ್ಕೋಫಿಕ್ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸುವ ಮೂಲಕ ನೈಲ್ ಕಟ್ಟರ್ ಅನ್ನು ಹೊರ ತೆಗೆದಿದ್ದಾರೆ. ಸದ್ಯ ಆರೋಗ್ಯವಾಗಿರುವ ವ್ಯಕ್ತಿಯು ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…