ಯಕ್ಷಗಾನ ಒಂದು ಶ್ರೇಷ್ಠ ಕಲೆ, ಎಲ್ಲಾ ಪ್ರಕಾರದ ಕಲೆಗಳ ಸಮ್ಮಿಲನವೇ ಯಕ್ಷಗಾನ. ಇಂದು ಅದು ಜಾಗತಿಕ ಕಲೆಯಾಗಿ ಮೇಳೈಸುತ್ತಿದೆ ಎಂದು ಯಕ್ಷ ದ್ರುವ ಪಟ್ಲ ಫೌಂಡೇಷನ್ನ ಸ್ಪಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಹೇಳಿದ್ದಾರೆ.
ಇವರು ಯಕ್ಷ ದ್ರುವ – ಯಕ್ಷ ಶಿಕ್ಷಣ ಅಭಿಯಾನದಡಿ, ಶ್ರೀರಾಮ ಪ್ರೌಢ ಶಾಲೆ ಅರ್ಕುಳ ಫರಂಗಿಪೇಟೆಯಲ್ಲಿ ನಾಟ್ಯ ತರಬೇತಿ ಶಿಕ್ಷಣ ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಶ್ರೀರಾಮ ವಿದ್ಯಾ ಸಂಸ್ಥೆ ಅರ್ಕುಳ ಫರಂಗಿಪೇಟೆಯ ಶಾಲಾಡಳಿತ ಮಂಡಳಿ ಅಧ್ಯಕ್ಷರಾದ ಅರ್ಕುಳ ಬೀಡು ವಜ್ರನಾಭ ಶೆಟ್ಟಿ , ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಎ ಕೆ ಜಯರಾಮ ಶೇಕ, ನಿವೃತ್ತ ಮುಖ್ಯ ಶಿಕ್ಷಕರಾದ ದೇವದಾಸ್ ಕೆ ಆರ್ , ರೋಟರಿ ಕ್ಲಬ್ ಫರಂಗಿಪೇಟೆಯ ಕೋಶಾಧಿಕಾರಿ ದಿನೇಶ್ ಶೆಟ್ಟಿ ಕೊಟ್ಟಿಂಜ, ಯಕ್ಷ ದ್ರುವ – ಯಕ್ಷ ಶಿಕ್ಷಣದ ಶಿಕ್ಷಕರಾದ ಅನ್ವೇಶ್ ಶೆಟ್ಟಿ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಶೈಲಜಾ, ಪ್ರೌಢ ಶಾಲಾ ಮುಖ್ಯ ಶಿಕ್ಷಕ ಜಯ ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಮಿಜಾರ್ ಸಮೀಪ ಬಾಡಿಗೆ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಮೂವರು ಗಾಯಗೊಂಡ ಘಟನೆ ನಡೆದಿದೆ. ಘಟನೆಯಲ್ಲಿ ಆಳ್ವಾಸ್ ಕಾಲೇಜಿನ ಕೆಲಸಗಾರ ಶಿವರಾಮ,…
ನೀಟ್ ಮರು ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವೇಳೆ ಕೋಚಿಂಗ್ ಸೆಂಟರ್ನ ಹಾಸ್ಟೆಲ್ನಲ್ಲಿ ತಂಗಿ ಆತ್ಮಹತ್ಯೆ ಮಾಡಿಕೊಂಡಿದ್ದ ದುರಂತ ಮಾಸುವ ಮುನ್ನವೇ,…
ಕೊಲಂಬಿಯಾದ ಪಶ್ಚಿಮ ಭಾಗದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ 111 ಮಂದಿ ಮೃತಪಟ್ಟಿದ್ದಾರೆ. 87ಕ್ಕೂ ಹೆಚ್ಚು ಮಂದಿ…
ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬಸ್ಸೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ವಿಟ್ಲ ಪಡ್ನೂರು ಗ್ರಾಮದ ಪೂರ್ಲಪ್ಪಾಡಿ ಸಮೀಪದ…
ಪಾದಚಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ತಲಪಾಡಿಯಲ್ಲಿ ನಡೆದಿದೆ. ಗದಗ ನಿವಾಸಿ ಶರಣಪ್ಪ ಗಂಭೀರ…
ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕ…