ಜನ ಮನದ ನಾಡಿ ಮಿಡಿತ

Advertisement

7 ಮುದ್ದು ಪುಟಾಣಿ ಕಂದಮ್ಮಗಳಿಗೆ ರಾಕ್ಷಸಿಯಾದ ನರ್ಸ್..!

ನರ್ಸ್ ಕೆಲಸ ಮಾಡುತ್ತಿದ್ದ ಯುವತಿಯೊಬ್ಬಳು ನವಜಾತ ಶಿಶುಗಳ ಪಾಲಿಗೆ ನರರಾಕ್ಷಸಿಯಾಗಿದ್ದಾಳೆ. ಏನೂ ಅರಿಯದ 7 ಮುಗ್ಧ ಕಂದಮ್ಮಗಳನ್ನ ಕೊಂದು ಸೀರಿಯಲ್ ಕಿಲ್ಲರ್ ಹಣೆಪಟ್ಟಿ ಕಟ್ಟಿಕೊಂಡಿದ್ದಾಳೆ.

ಈ ಮಕ್ಕಳ ಸೀರಿಯಲ್ ಕಿಲ್ಲರ್‌ಗೆ ಭಾರತ ಮೂಲದ ಸಿಬ್ಬಂದಿಯೂ ಒಬ್ಬರು ಸಾಥ್ ನೀಡಿರೋದು ಶಾಕ್ ಉಂಟುಮಾಡಿದೆ. ಇoಗ್ಲೆoಡ್‌ನ ಆಸ್ಪತ್ರೆಯೊಂದರ ಹೆರಿಗೆ ವಾರ್ಡ್ನಲ್ಲಿ ಈ ಲೂಸಿ ಲೆಟ್ಟಿ ಕಾರ್ಯ ನಿರ್ವಹಿಸುತ್ತಿದ್ದಳು. ಈ ವೇಳೆ ಹಲವು ಗರ್ಭಿಣಿಯರಿಗೆ ಹೆರಿಗೆ ಮಾಡಿಸುವ ಕೆಲಸವನ್ನು ಈ ಲೂಸಿ ಮಾಡುತ್ತಿದ್ದಳು. ಆದರೆ ಆ ಮೇಲೆ ಈಕೆಗೆ ಅದೇನಾಗ್ತಿತ್ತೋ ಗೊತ್ತಿಲ್ಲ. ಬಾಣಂತಿಯರು ಮಗುವನ್ನು ಬಿಟ್ಟು ಶೌಚಾಲಯಕ್ಕೆ ಹೋದಾಗ ಯಾರಿಗೂ ತಿಳಿಯಂದoತೆ ಕೊಲೆ ಮಾಡುತ್ತಿದ್ದಳು. ಹೀಗೆ ಈ ಲೂಸಿ ಲೆಟ್ಟಿ ಒಂದಲ್ಲ ಎರಡಲ್ಲ ಬರೋಬ್ಬರಿ 7 ನವಜಾತ ಶಿಶುಗಳನ್ನ ಹತ್ಯೆಮಾಡಿದ್ದಳು. ಸಿರಿಯಲ್ ಮಕ್ಕಳ ಕಿಲ್ಲರ್ ಆಗಿ ಎಲ್ಲರಿಗೂ ಶಾಕ್ ನೀಡಿದ್ದಾಳೆ. ಬಾಳಿ ಬದುಕಬೇಕಿದ್ದ 7 ಮಕ್ಕಳ ಜೀವವನ್ನು ಕಿತ್ತುಕೊಂಡ ಲೂಸಿ ಲೆಟ್ಟಿ ಎಂಬ ರಾಕ್ಷಸಿಗೆ ಲಂಡನ್‌ನ ಮ್ಯಾಂಚೆಸ್ಟರ್ ಕ್ರೌನ್ ಕೋರ್ಟ್ ಜೀವಾವಧಿ ಶಿಕ್ಷೆ ನೀಡಿದೆ. ಕೋರ್ಟ್ ಈ ಬಗ್ಗೆ ತೀರ್ಪು ಪ್ರಕಟಿಸುತ್ತಿದ್ದಂತೆ ಇಂಗ್ಲೆoಡ್ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ.. ಅಲ್ಲದೇ ಪೊಲೀಸರ ವಿಚಾರಣೆ ವೇಳೆ ಲೂಸಿ ಇನ್ನೂ ಹಲವರ ಹತ್ಯೆಗೆ ಪ್ರಯತ್ನಿಸಿದ್ದಾಗಿ ಬಾಯ್ಬಿಟ್ಟಿದ್ದಾಳೆ. ಮಾತ್ರವಲ್ಲದೇ ಈಕೆ ಇನ್ನೂ 6 ಮಕ್ಕಳ ಹತ್ಯೆಗೆ ಸಂಚು ರೂಪಿಸಿದ್ದು ಪೋಷಕರನ್ನ ಬೆಚ್ಚಿ ಬೀಳುವಂತೆ ಮಾಡಿದೆ.ಒಟ್ಟಿನಲ್ಲಿ ನವಜಾತ ಶಿಶುಗಳ ಪಾಲಿಗೆ ಎರಡನೇ ತಾಯಾಗಿ ಆಸ್ಪತ್ರೆ ವಾರ್ಡ್ನಲ್ಲಿ ಮಮತೆ ನೀಡಬೇಕಿದ್ದ ಓರ್ವ ನರ್ಸ್ ನಡೆಸಿರೋ ಕೃತ್ಯ 7 ತಾಯಂದಿರ ಕಣ್ಣೀರಿಗೆ ಕಾರಣವಾಗಿದೆ. ಈ ಘಟನೆ ಬಳಿಕ ಯಾರನ್ನ ನಂಬಬೇಕು ಯಾರನ್ನ ನಂಬಬಾರದು ಅನ್ನೋ ಯಕ್ಷ ಪ್ರಶ್ನೆಯಾಗಿದೆ.

Leave a Reply

Your email address will not be published. Required fields are marked *

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

error: Content is protected !!