ಕರಾವಳಿ

7 ಮುದ್ದು ಪುಟಾಣಿ ಕಂದಮ್ಮಗಳಿಗೆ ರಾಕ್ಷಸಿಯಾದ ನರ್ಸ್..!

ನರ್ಸ್ ಕೆಲಸ ಮಾಡುತ್ತಿದ್ದ ಯುವತಿಯೊಬ್ಬಳು ನವಜಾತ ಶಿಶುಗಳ ಪಾಲಿಗೆ ನರರಾಕ್ಷಸಿಯಾಗಿದ್ದಾಳೆ. ಏನೂ ಅರಿಯದ 7 ಮುಗ್ಧ ಕಂದಮ್ಮಗಳನ್ನ ಕೊಂದು ಸೀರಿಯಲ್ ಕಿಲ್ಲರ್ ಹಣೆಪಟ್ಟಿ ಕಟ್ಟಿಕೊಂಡಿದ್ದಾಳೆ.

ಈ ಮಕ್ಕಳ ಸೀರಿಯಲ್ ಕಿಲ್ಲರ್‌ಗೆ ಭಾರತ ಮೂಲದ ಸಿಬ್ಬಂದಿಯೂ ಒಬ್ಬರು ಸಾಥ್ ನೀಡಿರೋದು ಶಾಕ್ ಉಂಟುಮಾಡಿದೆ. ಇoಗ್ಲೆoಡ್‌ನ ಆಸ್ಪತ್ರೆಯೊಂದರ ಹೆರಿಗೆ ವಾರ್ಡ್ನಲ್ಲಿ ಈ ಲೂಸಿ ಲೆಟ್ಟಿ ಕಾರ್ಯ ನಿರ್ವಹಿಸುತ್ತಿದ್ದಳು. ಈ ವೇಳೆ ಹಲವು ಗರ್ಭಿಣಿಯರಿಗೆ ಹೆರಿಗೆ ಮಾಡಿಸುವ ಕೆಲಸವನ್ನು ಈ ಲೂಸಿ ಮಾಡುತ್ತಿದ್ದಳು. ಆದರೆ ಆ ಮೇಲೆ ಈಕೆಗೆ ಅದೇನಾಗ್ತಿತ್ತೋ ಗೊತ್ತಿಲ್ಲ. ಬಾಣಂತಿಯರು ಮಗುವನ್ನು ಬಿಟ್ಟು ಶೌಚಾಲಯಕ್ಕೆ ಹೋದಾಗ ಯಾರಿಗೂ ತಿಳಿಯಂದoತೆ ಕೊಲೆ ಮಾಡುತ್ತಿದ್ದಳು. ಹೀಗೆ ಈ ಲೂಸಿ ಲೆಟ್ಟಿ ಒಂದಲ್ಲ ಎರಡಲ್ಲ ಬರೋಬ್ಬರಿ 7 ನವಜಾತ ಶಿಶುಗಳನ್ನ ಹತ್ಯೆಮಾಡಿದ್ದಳು. ಸಿರಿಯಲ್ ಮಕ್ಕಳ ಕಿಲ್ಲರ್ ಆಗಿ ಎಲ್ಲರಿಗೂ ಶಾಕ್ ನೀಡಿದ್ದಾಳೆ. ಬಾಳಿ ಬದುಕಬೇಕಿದ್ದ 7 ಮಕ್ಕಳ ಜೀವವನ್ನು ಕಿತ್ತುಕೊಂಡ ಲೂಸಿ ಲೆಟ್ಟಿ ಎಂಬ ರಾಕ್ಷಸಿಗೆ ಲಂಡನ್‌ನ ಮ್ಯಾಂಚೆಸ್ಟರ್ ಕ್ರೌನ್ ಕೋರ್ಟ್ ಜೀವಾವಧಿ ಶಿಕ್ಷೆ ನೀಡಿದೆ. ಕೋರ್ಟ್ ಈ ಬಗ್ಗೆ ತೀರ್ಪು ಪ್ರಕಟಿಸುತ್ತಿದ್ದಂತೆ ಇಂಗ್ಲೆoಡ್ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ.. ಅಲ್ಲದೇ ಪೊಲೀಸರ ವಿಚಾರಣೆ ವೇಳೆ ಲೂಸಿ ಇನ್ನೂ ಹಲವರ ಹತ್ಯೆಗೆ ಪ್ರಯತ್ನಿಸಿದ್ದಾಗಿ ಬಾಯ್ಬಿಟ್ಟಿದ್ದಾಳೆ. ಮಾತ್ರವಲ್ಲದೇ ಈಕೆ ಇನ್ನೂ 6 ಮಕ್ಕಳ ಹತ್ಯೆಗೆ ಸಂಚು ರೂಪಿಸಿದ್ದು ಪೋಷಕರನ್ನ ಬೆಚ್ಚಿ ಬೀಳುವಂತೆ ಮಾಡಿದೆ.ಒಟ್ಟಿನಲ್ಲಿ ನವಜಾತ ಶಿಶುಗಳ ಪಾಲಿಗೆ ಎರಡನೇ ತಾಯಾಗಿ ಆಸ್ಪತ್ರೆ ವಾರ್ಡ್ನಲ್ಲಿ ಮಮತೆ ನೀಡಬೇಕಿದ್ದ ಓರ್ವ ನರ್ಸ್ ನಡೆಸಿರೋ ಕೃತ್ಯ 7 ತಾಯಂದಿರ ಕಣ್ಣೀರಿಗೆ ಕಾರಣವಾಗಿದೆ. ಈ ಘಟನೆ ಬಳಿಕ ಯಾರನ್ನ ನಂಬಬೇಕು ಯಾರನ್ನ ನಂಬಬಾರದು ಅನ್ನೋ ಯಕ್ಷ ಪ್ರಶ್ನೆಯಾಗಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…

6 days ago

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…

6 days ago

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…

6 days ago

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…

6 days ago

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…

6 days ago

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…

6 days ago