ಕರಾವಳಿ

7 ಮುದ್ದು ಪುಟಾಣಿ ಕಂದಮ್ಮಗಳಿಗೆ ರಾಕ್ಷಸಿಯಾದ ನರ್ಸ್..!

ನರ್ಸ್ ಕೆಲಸ ಮಾಡುತ್ತಿದ್ದ ಯುವತಿಯೊಬ್ಬಳು ನವಜಾತ ಶಿಶುಗಳ ಪಾಲಿಗೆ ನರರಾಕ್ಷಸಿಯಾಗಿದ್ದಾಳೆ. ಏನೂ ಅರಿಯದ 7 ಮುಗ್ಧ ಕಂದಮ್ಮಗಳನ್ನ ಕೊಂದು ಸೀರಿಯಲ್ ಕಿಲ್ಲರ್ ಹಣೆಪಟ್ಟಿ ಕಟ್ಟಿಕೊಂಡಿದ್ದಾಳೆ.

ಈ ಮಕ್ಕಳ ಸೀರಿಯಲ್ ಕಿಲ್ಲರ್‌ಗೆ ಭಾರತ ಮೂಲದ ಸಿಬ್ಬಂದಿಯೂ ಒಬ್ಬರು ಸಾಥ್ ನೀಡಿರೋದು ಶಾಕ್ ಉಂಟುಮಾಡಿದೆ. ಇoಗ್ಲೆoಡ್‌ನ ಆಸ್ಪತ್ರೆಯೊಂದರ ಹೆರಿಗೆ ವಾರ್ಡ್ನಲ್ಲಿ ಈ ಲೂಸಿ ಲೆಟ್ಟಿ ಕಾರ್ಯ ನಿರ್ವಹಿಸುತ್ತಿದ್ದಳು. ಈ ವೇಳೆ ಹಲವು ಗರ್ಭಿಣಿಯರಿಗೆ ಹೆರಿಗೆ ಮಾಡಿಸುವ ಕೆಲಸವನ್ನು ಈ ಲೂಸಿ ಮಾಡುತ್ತಿದ್ದಳು. ಆದರೆ ಆ ಮೇಲೆ ಈಕೆಗೆ ಅದೇನಾಗ್ತಿತ್ತೋ ಗೊತ್ತಿಲ್ಲ. ಬಾಣಂತಿಯರು ಮಗುವನ್ನು ಬಿಟ್ಟು ಶೌಚಾಲಯಕ್ಕೆ ಹೋದಾಗ ಯಾರಿಗೂ ತಿಳಿಯಂದoತೆ ಕೊಲೆ ಮಾಡುತ್ತಿದ್ದಳು. ಹೀಗೆ ಈ ಲೂಸಿ ಲೆಟ್ಟಿ ಒಂದಲ್ಲ ಎರಡಲ್ಲ ಬರೋಬ್ಬರಿ 7 ನವಜಾತ ಶಿಶುಗಳನ್ನ ಹತ್ಯೆಮಾಡಿದ್ದಳು. ಸಿರಿಯಲ್ ಮಕ್ಕಳ ಕಿಲ್ಲರ್ ಆಗಿ ಎಲ್ಲರಿಗೂ ಶಾಕ್ ನೀಡಿದ್ದಾಳೆ. ಬಾಳಿ ಬದುಕಬೇಕಿದ್ದ 7 ಮಕ್ಕಳ ಜೀವವನ್ನು ಕಿತ್ತುಕೊಂಡ ಲೂಸಿ ಲೆಟ್ಟಿ ಎಂಬ ರಾಕ್ಷಸಿಗೆ ಲಂಡನ್‌ನ ಮ್ಯಾಂಚೆಸ್ಟರ್ ಕ್ರೌನ್ ಕೋರ್ಟ್ ಜೀವಾವಧಿ ಶಿಕ್ಷೆ ನೀಡಿದೆ. ಕೋರ್ಟ್ ಈ ಬಗ್ಗೆ ತೀರ್ಪು ಪ್ರಕಟಿಸುತ್ತಿದ್ದಂತೆ ಇಂಗ್ಲೆoಡ್ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ.. ಅಲ್ಲದೇ ಪೊಲೀಸರ ವಿಚಾರಣೆ ವೇಳೆ ಲೂಸಿ ಇನ್ನೂ ಹಲವರ ಹತ್ಯೆಗೆ ಪ್ರಯತ್ನಿಸಿದ್ದಾಗಿ ಬಾಯ್ಬಿಟ್ಟಿದ್ದಾಳೆ. ಮಾತ್ರವಲ್ಲದೇ ಈಕೆ ಇನ್ನೂ 6 ಮಕ್ಕಳ ಹತ್ಯೆಗೆ ಸಂಚು ರೂಪಿಸಿದ್ದು ಪೋಷಕರನ್ನ ಬೆಚ್ಚಿ ಬೀಳುವಂತೆ ಮಾಡಿದೆ.ಒಟ್ಟಿನಲ್ಲಿ ನವಜಾತ ಶಿಶುಗಳ ಪಾಲಿಗೆ ಎರಡನೇ ತಾಯಾಗಿ ಆಸ್ಪತ್ರೆ ವಾರ್ಡ್ನಲ್ಲಿ ಮಮತೆ ನೀಡಬೇಕಿದ್ದ ಓರ್ವ ನರ್ಸ್ ನಡೆಸಿರೋ ಕೃತ್ಯ 7 ತಾಯಂದಿರ ಕಣ್ಣೀರಿಗೆ ಕಾರಣವಾಗಿದೆ. ಈ ಘಟನೆ ಬಳಿಕ ಯಾರನ್ನ ನಂಬಬೇಕು ಯಾರನ್ನ ನಂಬಬಾರದು ಅನ್ನೋ ಯಕ್ಷ ಪ್ರಶ್ನೆಯಾಗಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಿಜಾರ್ ಸಮೀಪ ಬಾಡಿಗೆ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಮೂವರು ಗಾಯಗೊಂಡ ಘಟನೆ ನಡೆದಿದೆ. ಘಟನೆಯಲ್ಲಿ ಆಳ್ವಾಸ್ ಕಾಲೇಜಿನ ಕೆಲಸಗಾರ ಶಿವರಾಮ,…

18 hours ago

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ನೀಟ್ ಮರು ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವೇಳೆ ಕೋಚಿಂಗ್ ಸೆಂಟರ್‌ನ ಹಾಸ್ಟೆಲ್‌ನಲ್ಲಿ ತಂಗಿ ಆತ್ಮಹತ್ಯೆ ಮಾಡಿಕೊಂಡಿದ್ದ ದುರಂತ ಮಾಸುವ ಮುನ್ನವೇ,…

18 hours ago

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

ಕೊಲಂಬಿಯಾದ ಪಶ್ಚಿಮ ಭಾಗದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ 111 ಮಂದಿ ಮೃತಪಟ್ಟಿದ್ದಾರೆ. 87ಕ್ಕೂ ಹೆಚ್ಚು ಮಂದಿ…

18 hours ago

ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಶಾಲಾ ಬಸ್; ತಪ್ಪಿದ ಭಾರೀ ಅನಾಹುತ

ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬಸ್ಸೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ವಿಟ್ಲ ಪಡ್ನೂರು ಗ್ರಾಮದ ಪೂರ್ಲಪ್ಪಾಡಿ ಸಮೀಪದ…

18 hours ago

ಮಂಗಳೂರು: ತಲಪಾಡಿಯಲ್ಲಿ ಪಾದಚಾರಿಗೆ ಕಾರು ಡಿಕ್ಕಿ; ಗಂಭೀರ ಗಾಯ

ಪಾದಚಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ತಲಪಾಡಿಯಲ್ಲಿ ನಡೆದಿದೆ. ಗದಗ ನಿವಾಸಿ ಶರಣಪ್ಪ ಗಂಭೀರ…

18 hours ago

ಪರ್ಕಳ: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬುಲೆಟ್; ಯುವಕ ಸಾವು

ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕ…

18 hours ago