ಜನ ಮನದ ನಾಡಿ ಮಿಡಿತ

Advertisement

ಸಿಬಿಐ ಖೆಡ್ಡಾಗೆ ಬಿದ್ದ ವಿಟ್ಲದ ಕುಖ್ಯಾತ ಕ್ರಿಮಿನಲ್ ಬ್ಲೇಡ್ ಸಾಧಿಕ್; 3,65,500 ಮೌಲ್ಯದ ಸೊತ್ತು ವಶಕ್ಕೆ..!

ವಿಟ್ಲದ ಕುಖ್ಯಾತ ಕ್ರಿಮಿನಲ್ ಸಾಧಿಕ್‌ನನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಕ್ರಿಮಿನಲ್ ಸಾಧಿಕ್‌ನಿಂದ ಸಿಸಿಬಿ ತಂಡ 50 ಗ್ರಾಂ ತೂಕದ 2,50,000 ರೂ. ಮೌಲ್ಯದ ಎಂಡಿಎoಎ ಮಾದಕ ವಸ್ತು, ಕಾರು, ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪನ ಸಹಿತ 3,60,500 ರೂ.. ಮೌಲ್ಯದ ಸೊತ್ತು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಾದಿಕ್ ವಿರುದ್ಧ ಈ ಹಿಂದೆ ವಿಟ್ಲ ಪೊಲೀಸ್ ಠಾಣೆಯಲ್ಲಿ 5 ಹಲ್ಲೆ ಬೆದರಿಕೆ ಪ್ರಕರಣಗಳು, 4 ಕೊಲೆಯತ್ನ, ಪ್ರಕರಣಗಳು, ಪುತ್ತೂರು ನಗರ ಠಾಣೆಯಲ್ಲಿ 2 ಕೊಲೆಯತ್ನ ಪ್ರಕರಣಗಳು, ಉಪ್ಪಿನಂಗoಡಿ ಠಾಣೆಯಲ್ಲಿ ಮಾನಭಂಗ ಮತ್ತು ಅಪಹರಣ ಪ್ರಕರಣ, ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಹಲ್ಲೆ, ಪ್ರಕರಣ, ಮಂಗಳೂರು ಕಾವೂರು ಠಾಣೆಯಲ್ಲಿ ದರೋಡೆ ಪ್ರಕರಣ, ಬೆಂಗಳೂರು ಹೆಬ್ಬಾಳ ಠಾಣೆಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ ಸೇರಿದಂತೆ ಈತನ ವಿರುದ್ಧ ಈವರೆಗೆ 17 ಪ್ರಕರಣಗಳು ದಾಖಲಾಗಿವೆ.ನಗರ ಹಾಗೂ ಕೇರಳದ ವಿವಿಧೆಡೆ ಕಾರಿನಲ್ಲಿ ಮಾದಕ ವಸ್ತು ಎಂಡಿಎoಎಯನ್ನಿಟ್ಟುಕೊoಡು ಮಾರಾಟ ಮಾಡುತ್ತಿದ್ದ ಆರೋಪಿ ವಿಟ್ಲದ ವಸತಿ ಸಮುಚ್ಚಯದಲ್ಲಿ ವಾಸವಾಗಿದ್ದ ಹಸನ್ ಸಾದಿಕ್ ಯಾನೆ ಬ್ಲೇಡ್ ಸಾಧಿಕ್ ಬಂಧನವಾಗಿದೆ. ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಎಸಿಪಿ ಪಿ.ಎ. ಹಗಡ, ಪೊಲೀಸ್ ನಿರೀಕ್ಷಕ ಶ್ಯಾಮ್ ಸುಂದರ್ ಹೆಚ್.ಎಂ, ಎಸ್ಟ್ ಗಳಾದ ರಾಜೇಂದ್ರ ಬಿ ನರೇಂದ್ರ ಶರಣಪ್ಪ ಭಂಡಾರಿ ಸುದೀಪ್ ಎಂ.ವಿ.ಮತ್ತು ಬಿ ತಂಡ ಭಾಗವಹಿಸಿದ್ದು ಈತನ ಸಹಚರರಿಗಾಗಿ ತೀವ್ರ ಶೋಧ ಮುಂದುವರಿದಿದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!