ವಿಟ್ಲದ ಕುಖ್ಯಾತ ಕ್ರಿಮಿನಲ್ ಸಾಧಿಕ್ನನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಕ್ರಿಮಿನಲ್ ಸಾಧಿಕ್ನಿಂದ ಸಿಸಿಬಿ ತಂಡ 50 ಗ್ರಾಂ ತೂಕದ 2,50,000 ರೂ. ಮೌಲ್ಯದ ಎಂಡಿಎoಎ ಮಾದಕ ವಸ್ತು, ಕಾರು, ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪನ ಸಹಿತ 3,60,500 ರೂ.. ಮೌಲ್ಯದ ಸೊತ್ತು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸಾದಿಕ್ ವಿರುದ್ಧ ಈ ಹಿಂದೆ ವಿಟ್ಲ ಪೊಲೀಸ್ ಠಾಣೆಯಲ್ಲಿ 5 ಹಲ್ಲೆ ಬೆದರಿಕೆ ಪ್ರಕರಣಗಳು, 4 ಕೊಲೆಯತ್ನ, ಪ್ರಕರಣಗಳು, ಪುತ್ತೂರು ನಗರ ಠಾಣೆಯಲ್ಲಿ 2 ಕೊಲೆಯತ್ನ ಪ್ರಕರಣಗಳು, ಉಪ್ಪಿನಂಗoಡಿ ಠಾಣೆಯಲ್ಲಿ ಮಾನಭಂಗ ಮತ್ತು ಅಪಹರಣ ಪ್ರಕರಣ, ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಹಲ್ಲೆ, ಪ್ರಕರಣ, ಮಂಗಳೂರು ಕಾವೂರು ಠಾಣೆಯಲ್ಲಿ ದರೋಡೆ ಪ್ರಕರಣ, ಬೆಂಗಳೂರು ಹೆಬ್ಬಾಳ ಠಾಣೆಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ ಸೇರಿದಂತೆ ಈತನ ವಿರುದ್ಧ ಈವರೆಗೆ 17 ಪ್ರಕರಣಗಳು ದಾಖಲಾಗಿವೆ.ನಗರ ಹಾಗೂ ಕೇರಳದ ವಿವಿಧೆಡೆ ಕಾರಿನಲ್ಲಿ ಮಾದಕ ವಸ್ತು ಎಂಡಿಎoಎಯನ್ನಿಟ್ಟುಕೊoಡು ಮಾರಾಟ ಮಾಡುತ್ತಿದ್ದ ಆರೋಪಿ ವಿಟ್ಲದ ವಸತಿ ಸಮುಚ್ಚಯದಲ್ಲಿ ವಾಸವಾಗಿದ್ದ ಹಸನ್ ಸಾದಿಕ್ ಯಾನೆ ಬ್ಲೇಡ್ ಸಾಧಿಕ್ ಬಂಧನವಾಗಿದೆ. ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಎಸಿಪಿ ಪಿ.ಎ. ಹಗಡ, ಪೊಲೀಸ್ ನಿರೀಕ್ಷಕ ಶ್ಯಾಮ್ ಸುಂದರ್ ಹೆಚ್.ಎಂ, ಎಸ್ಟ್ ಗಳಾದ ರಾಜೇಂದ್ರ ಬಿ ನರೇಂದ್ರ ಶರಣಪ್ಪ ಭಂಡಾರಿ ಸುದೀಪ್ ಎಂ.ವಿ.ಮತ್ತು ಬಿ ತಂಡ ಭಾಗವಹಿಸಿದ್ದು ಈತನ ಸಹಚರರಿಗಾಗಿ ತೀವ್ರ ಶೋಧ ಮುಂದುವರಿದಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…