ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯತಂತ್ರದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಕರ್ನಾಟಕ ಕೇಡರ್ನ ಮಾಜಿ ಐಎಎಸ್ ಅಧಿಕಾರಿ, ಸಸಿಕಾಂತ್ ಸೆಂಥಿಲ್ ಅವರು ತಮಿಳುನಾಡು ಕಾಂಗ್ರೆಸ್ ಘಟಕದ ಮುಖ್ಯಸ್ಥರಾಗುವ ಸಾಧ್ಯತೆಗಳು ಹೆಚ್ಚಿವೆ.ಇವರು 2017 ರಂದು ದ.ಕ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.ಪ್ರಸಕ್ತ ಪಕ್ಷದ ಅಧ್ಯಕ್ಷ ಸ್ಥಾನದಲ್ಲಿರುವ ಕೆ.ಎಸ್.ಅಳಗಿರಿ ಅವರ ಅಧಿಕಾರಾವಧಿ ಈಗಾಗಲೇ ಪೂರ್ಣಗೊಂಡಿದೆ. ಆದಾಗ್ಯೂ, ಪಕ್ಷದ ಮೇಲಿನ ಅವರ ನಿಷ್ಠೆಯನ್ನು ಗೌರವಿಸಿ 2024ರ ಲೋಕಸಭೆ ಚುನಾವಣೆವರೆಗೂ ಅವರನ್ನೇ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಸಲು ಹೈ ಕಮಾಂಡ್ ನಿರ್ಧರಿಸಿದೆ. ಏತನ್ಮಧ್ಯೆ, ತಮಿಳು ನಾಡು ಕಾಂಗ್ರೆಸ್ ಸಮಿತಿಯನ್ನು ಮೂರು ವಿಭಾಗಗಳನ್ನಾಗಿ ವಿಭಜಿಸಲಾಗಿದ್ದು, ಮೊದಲನೇ ವಿಭಾಗವನ್ನು ಅಳಗಿರಿ, 2ನೇ ವಿಭಾಗವನ್ನು ಸಿಎಲ್ಪಿ ನಾಯಕ ಸೆಲ್ವಪೆರು ತುಂಗೈ ಮುನ್ನಡೆಸುತ್ತಿದ್ದಾರೆ. ಮೂರನೇ ವಿಭಾಗದ ಉಮೇದುವಾರಿಕೆ ಯನ್ನು ಸೆಂಥಿಲ್ ಅವರಿಗೆ ನೀಡುವ ಪ್ರಸ್ತಾಪವಿದೆ.
ಮಿಜಾರ್ ಸಮೀಪ ಬಾಡಿಗೆ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಮೂವರು ಗಾಯಗೊಂಡ ಘಟನೆ ನಡೆದಿದೆ. ಘಟನೆಯಲ್ಲಿ ಆಳ್ವಾಸ್ ಕಾಲೇಜಿನ ಕೆಲಸಗಾರ ಶಿವರಾಮ,…
ನೀಟ್ ಮರು ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವೇಳೆ ಕೋಚಿಂಗ್ ಸೆಂಟರ್ನ ಹಾಸ್ಟೆಲ್ನಲ್ಲಿ ತಂಗಿ ಆತ್ಮಹತ್ಯೆ ಮಾಡಿಕೊಂಡಿದ್ದ ದುರಂತ ಮಾಸುವ ಮುನ್ನವೇ,…
ಕೊಲಂಬಿಯಾದ ಪಶ್ಚಿಮ ಭಾಗದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ 111 ಮಂದಿ ಮೃತಪಟ್ಟಿದ್ದಾರೆ. 87ಕ್ಕೂ ಹೆಚ್ಚು ಮಂದಿ…
ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬಸ್ಸೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ವಿಟ್ಲ ಪಡ್ನೂರು ಗ್ರಾಮದ ಪೂರ್ಲಪ್ಪಾಡಿ ಸಮೀಪದ…
ಪಾದಚಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ತಲಪಾಡಿಯಲ್ಲಿ ನಡೆದಿದೆ. ಗದಗ ನಿವಾಸಿ ಶರಣಪ್ಪ ಗಂಭೀರ…
ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕ…