ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..! ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!
Advertisement

ಬಿಸಿರೋಡಿನಲ್ಲಿ ಅಮೃತ್ ಭಾರತ್ ರೈಲ್ವೆ ನಿಲ್ದಾಣದ ಅಭಿವೃದ್ದಿಗಾಗಿ 26.18 ಕೋಟಿ ರೂ ಅನುದಾನ ಬಿಡುಗಡೆ; ಸಂಸದ ಕಟೀಲ್

ಬಂಟ್ವಾಳ: ಬಿಸಿರೋಡಿನಲ್ಲಿ ಅಮೃತ್ ಭಾರತ್ ರೈಲ್ವೆ ನಿಲ್ದಾಣದ ಅಭಿವೃದ್ದಿಗಾಗಿ 26.18 ಕೋಟಿ ರೂ ಅನುದಾನ ಬಿಡುಗಡೆ ಮಾಡಲಾಗಿದೆ. ಈ ಮೂಲಕ ಸುಸಜ್ಜಿತವಾದ ರೈಲ್ವೆ ನಿಲ್ದಾಣವಾಗಿ ಮಾರ್ಪಾಡು ಮಾಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಅನುದಾನ ಬಿಡುಗಡೆ ಮಾಡಿದ್ದು,ಶೀಘ್ರವಾಗಿ ಕಾಮಗಾರಿ ಪ್ರಾರಂಭವಾಗಲಿದೆ ಎಂದು ಮಂಗಳೂರು ಸಂಸದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ತಿಳಿಸಿದರು.

ಅವರು ಬಿಸಿರೋಡಿನ ರೈಲ್ವೆ ನಿಲ್ದಾಣಕ್ಕೆ ಬೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮದವರ ಜೊತೆ ಮಾತನಾಡಿ ಈ ವಿಚಾರವನ್ನು ತಿಳಿಸಿದರು. ನಮ್ಮ ಬೇಡಿಕೆಯಂತೆ ಜಿಲ್ಲೆಯ ಮೂರು ರೈಲ್ವೆ ನಿಲ್ದಾಗಳನ್ನು ಅಭಿವೃದ್ಧಿ ಪಡಿಸಲು ಅನುದಾನ ಮಂಜೂರು ಮಾಡಿದ್ದಾರೆ. ಇದರಲ್ಲಿ ಈಗಾಗಲೇ ಮಂಗಳೂರಿನ ರೈಲ್ವೆ ನಿಲ್ದಾಣವನ್ನು ಅಭಿವೃದ್ಧಿಯ ಹಿನ್ನೆಲೆಯಲ್ಲಿ ಶಿಲ್ಯಾನ್ಯಾಸ ಕಾರ್ಯಕ್ರಮ ಮಾಡಲಾಗಿದೆ. ಬಂಟ್ವಾಳದ ಈ ರೈಲ್ವೆ ನಿಲ್ದಾಣದ ಅಭಿವೃದ್ಧಿಗೆ 26.18 ಕೋಟಿ ರೂ ಅನುದಾನವನ್ನು ಕೇಂದ್ರ ಸರಕಾರ ಬಿಡುಗಡೆ ಮಾಡಿದೆ. ಇದರ ಮಾಸ್ಟರ್ ಪ್ಲಾನ್ ಕೂಡ ತಯಾರಿಸಿದೆ. ಸಂಪೂರ್ಣವಾಗಿ ಹೊಸ ಪರಿವರ್ತನೆಗೊಂಡು, ಮೂಲಭೂತ ಸೌಕರ್ಯಗಳಿಗೆ ಶುಚಿತ್ವ ಆದ್ಯತೆ ಕೊಟ್ಟು ಜನರ ಇಚ್ಛೆಯಂತೆ ವ್ಯವಸ್ಥೆಯನ್ನು ಅಭಿವೃದ್ಧಿ ಪಡಿಸುವುದಕ್ಕಾಗಿ ಹಣ ಬಿಡುಗಡೆ ಮಾಡಿದ್ದಾರೆ.

ಜಿಲ್ಲೆಗೆ ವಂದೆ ಭಾರತ್ ರೈಲ್ವೆ ಯ ಬೇಡಿಕೆ ಇದ್ದು, ಪುತ್ತೂರುವರೆಗೆ ಇರುವ ರೈಲನ್ನು ಸುಬ್ರಹ್ಮಣ್ಯ ವರೆಗೆ ವಿಸ್ತರಣೆ ಮಾಡಬೇಕು ಎಂದು ರೈಲ್ವೆ ಸಚಿವರಿಗೆ ಮನವಿ ಮಾಡಿದ್ದೇನೆ.ರೈಲ್ವೆ ಸಂಬAಧಿಸಿದAತೆ ಸಂಪೂರ್ಣ ಅಭಿವೃದ್ಧಿ ಗೆ ಸರಕಾರ ಬದ್ದವಾಗಿದೆ. ರಾಜೇಶ್ ನಾಯ್ಕ್ ಶಾಸಕರಾದ ಬಳಿಕ ಬಂಟ್ವಾಳದ ಸಮಸ್ಯೆಗಳಿಗೆ ಕೇಂದ್ರದಿoದ ಆಗಬೇಕಾದ ಪರಿಹಾರಗಳನ್ನು ಮಾಡಿಕೊಡುವಂತೆ ಮನವಿ ಮಾಡಿದ್ದರು.ಅದರಂತೆ ಬಹುತೇಕ ಎಲ್ಲಾ ಸಮಸ್ಯೆಗಳಿಗೆ ಆದ್ಯತೆಯ ಮೇಲೆ ಕೇಂದ್ರದ ಮೂಲಕ ಅನುದಾನವನ್ನು ನೀಡಲಾಗಿದೆ ಎಂದು ಅವರು ತಿಳಿಸಿದರು.ಮಳೆಗಾಲದಲ್ಲಿ ಮಳೆ ನೀರು ಬೀಳದಂತೆ ಮೇಲ್ಚಾವಣಿ ನಿರ್ಮಾಣ, ಎರಡು ಸುಸಜ್ಜಿತ ಪ್ಲಾಟ್ ಫಾರಂ ನಿರ್ಮಾಣ , ಸುಸಜ್ಜಿತ ಕಟ್ಟಡ ನಿರ್ಮಾಣ, ಸರ್ಕ್ಯೂಲೇಟ್ ಏರಿಯಾ , ಪಾರ್ಕಿಂಗ್, ಪಾರ್ಕ್, ರಸ್ತೆ, ಶೌಚಾಲಯ, ಕ್ಯಾಂಟೀನ್ ಸಹಿತ ರೈಲ್ವೆ ಇಲಾಖೆಯ ಸಂಪೂರ್ಣ ವಾದ ಅಭಿವೃದ್ಧಿ ಮಾಡಲಾಗುತ್ತದೆ ಎಂದು ಅವರು ಹೇಳಿದರು .ಕಟ್ಟಡದ ಮುಂಭಾಗದಲ್ಲಿ ಗ್ರಾನೈಟ್ ಹಾಕಿ ಸ್ವಚ್ಛ ಮಾಡಲಾಗುತ್ತದೆ ಎಂದು ಅವರು ಹೇಳಿದರು.ಪ್ಲಾಟ್ ಫಾರಂ ನಿಂದ ಇನ್ನೊಂದು ಪ್ಲಾಟ್ ಫಾರಂಗೆ ಹೋಗಲು ಲಿಪ್ಟ್ ಹಾಗೂ ಎಕ್ಸೀಲೇಟರ್ ಸಿಸ್ಟಮ್ ವ್ಯವಸ್ಥೆ ಮಾಡಲಾಗುತ್ತದೆ.ಪ್ರಯಾಣಿಕರಿಗೆ ನಿಲ್ಲುವ ದೃಷ್ಟಿಯಿಂದ ಉತ್ತಮ ರೂಮ್ ಮತ್ತು ಅದಕ್ಕೆ ಎ.ಸಿ.ವ್ಯವಸ್ಥೆ ಮಾಡಲಾಗುತ್ತದೆ ಎಂದುರೈಲ್ವೆ ಇಲಾಖೆಯ ಡೆಪ್ಯೂಟಿ ಚೀಫ್ ಇಂಜಿನಿಯರ್ ರಾಮಸುಬ್ಬಯ್ಯ ರೆಡ್ಡಿ ಹೇಳಿದರು. ಈ ಸಂದರ್ಭದಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಮಾಜಿ ಶಾಸಕರಾದ ರುಕ್ಮಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ, ಪ್ರಮುಖರಾದ ಸುಲೋಚನ ಜಿ.ಕೆ.ಭಟ್, ಹರಿಕೃಷ್ಣ ಬಂಟ್ವಾಳ, ದೇವದಾಸ ಶೆಟ್ಟಿ, ದೇವಪ್ಪ ಪೂಜಾರಿ, ರವೀಶ್ ಶೆಟ್ಟಿ ಕರ್ಕಳ, ಸುದರ್ಶನ ಬಜ, ಇಲಾಖೆಯ ಎಕ್ಸಿಕ್ಯೂಟಿವ್ ಇಂಜಿನಿಯರ್ ಸಾವನ್ ಕುಮಾರ್ ಹಾಗೂ ಡೆಪ್ಯೂಟಿ ಅಪರೇಷನ್ ಮ್ಯಾನೇಜರ್ ಸರವಣ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

error: Content is protected !!