ಕರಾವಳಿ

ಕೊರಗ ಸಮುದಾಯಕ್ಕೆ ಸಾಮಾಜಿಕ ಸ್ಪಂದನೆ ಅಗತ್ಯ; ಪತ್ರಕರ್ತ ತಾರಾನಾಥ ಗಟ್ಟಿ ಕಾಪಿಕಾಡ್

ದಕ್ಷಿಣ ಕನ್ನಡ : ತುಳುನಾಡಿನ ಆದಿ ಬುಡಮೂಲ ಕೊರಗ ಸಮುದಾಯವನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಇತರ ಸಮುದಾಯಗಳಿಂದ ಪೂರಕವಾದ ಸಾಮಾಜಿಕ ಸ್ಪಂದನೆ ಸಿಗಬೇಕಾಗಿದೆ ಎಂದು ದ.ಕ.ಜಿಲ್ಲಾ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷ, ಪತ್ರಕರ್ತ ತಾರಾನಾಥ್ ಗಟ್ಟಿ ಕಾಪಿಕಾಡ್  ಹೇಳಿದರು. 

 ಸುರತ್ಕಲ್ ಕುತ್ತೆತ್ತೂರು ಆದಿವಾಸಿ ಭವನದಲ್ಲಿ ದ.ಕ.ಜಿಲ್ಲಾ ಕೊರಗರ ಸಂಘ ಆಯೋಜಿಸಿದ   ಕೊರಗರ ಭೂಮಿ ಹಬ್ಬ ಕಾರ್ಯಕ್ರಮ ದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.‌

 ಮುಖ್ಯವಾಹಿನಿಯಲ್ಲಿ ಸಾಗುವಂತಾಗಲು ಆರ್ಥಿಕ ಹಾಗೂ ಸಾಮಾಜಿಕ ಸ್ಪಂದನೆ ಅಗತ್ಯವಾಗಿದೆ ಎಂದವರು ಅಭಿಪ್ರಾಯಪಟ್ಟರು. 

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ದ.ಕ.ಜಿಲ್ಲಾ ಕೊರಗ ಸಂಘದ ಅಧ್ಯಕ್ಷ ಎಂ.ಸುಂದರ ಕೊರಗ ಅವರು ಮಾತನಾಡಿ,  ಕೊರಗರ ಐತಿಹಾಸಿಕ ಚಳವಳಿಯ ನೆನಪಿನಲ್ಲಿ ಈ ಕೊರಗರ ಭೂಮಿ ಹಬ್ಬವನ್ನು ಆಚರಿಸಲಾಗುತ್ತಿದೆ ಎಂದು ನೆನಪಿಸಿದರು.   

ಕೊರಗ ಸಂಘಟನೆಯ ಮಾಜಿ ಅಧ್ಯಕ್ಷ ಬಾಲರಾಜ್ ಕೋಡಿಕಲ್ ಸಮುದಾಯದ ಚಳವಳಿ  ನಡೆದು ಬಂದ ದಾರಿಯನ್ನು ಉಲ್ಲೇಖಿಸಿ  ಚಳವಳಿ  ಕೊರಗರ ಬದುಕನ್ನು ಬದಲಾಯಿಸಿದ ಮಹತ್ವದ ಮೈಲಿಗಲ್ಲು ಎಂದು ಹೇಳಿದರು. 

ಉಡುಪಿ ಜಿಲ್ಲಾ ಕೊರಗ ಸಂಘದ ಅಧ್ಯಕ್ಷೆ ಗೌರಿ ಕೆಂಜೂರು ಅವರು ಮಾತನಾಡಿ, ಕೊರಗ ಸಮುದಾಯದ  ಹೋರಾಟವು  ಮಹಿಳೆಯರ  ಸಹಭಾಗಿತ್ವದಲ್ಲಿ ಯಶಸ್ವಿಯಾಗಿ ನಡೆದಿತ್ತು ಎಂದು ಹೇಳಿದರು.

ಲೇಖಕ ಬಾಬು ಪಾಂಗಳ ಅವರು ಭೂಮಿ ಹಬ್ಬದ ಸಂದೇಶ ನೀಡಿದರು. ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ಸುರೇಶ್ ಅಡಿಗ , ಸಮಗ್ರ ಗಿರಿಜನ ಯೋಜನಾ ಸಮನ್ವಯಾಧಿಕಾರಿ ಹೇಮಚಂದ್ರ ಅವರು ಶುಭಕೋರಿ ಮಾತನಾಡಿದರು. 

ಬಾಳಾ ಪಂಚಾಯತ್ ಅಧ್ತಕ್ಷ ಶಂಕರ್ ಜೋಗಿ , ಉಪಾಧ್ಯಕ್ಷೆ ಲಕ್ಷ್ಮಿ ಶುಭಕೋರಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಮುದಾಯದ ಗುರಿಕಾರರಾದ ಜಬ್ಬ ಗುರಿಕಾರ ಬಳ್ಕುಂಜ , ನಾರಾಯಣ ಸಿರಿಗೆನ್ನಾರ್ , ರಾಜು ಗುರಿಕಾರ ಕತ್ತಲ್ ಸಾರ್ , ಸಮುದಾಯದ ಹಿರಿಯ ಮಹಿಳೆಯರಾದ ಲಲಿತಾ ಕೃಷ್ಣಾಪುರ, ಸುಮತಿ ಬಂಟ್ವಾಳ ಅವರನ್ನು ಸನ್ಮಾನಿಸಲಾಯಿತು. 

ರಮೇಶ್ ಗುಂಡಾವು ಕಾರ್ಯಕ್ರಮ ನಿರ್ವಹಿಸಿದರು. ಮನೋಜ್ ಕೋಡಿಕಲ್ ಸ್ವಾಗತಿಸಿ ವಂದಿಸಿದರು. 

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಡಾ. ಮಮತಾ ಪಿ. ಶೆಟ್ಟಿ..!

ಮಾಧ್ಯಮ ಲೋಕದಲ್ಲಿ ಅಚ್ಚಳಿಯದ ಸಾಧನೆಯನ್ನು ಮಾಡಿ 2025 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಮಾಧ್ಯಮ ಆಡಳಿತ…

3 hours ago

ಮಂಗಳೂರು: ಮಾಧ್ಯಮ ಮಿತ್ರ ನಾಗರಾಜ್ ಅನಾರೋಗ್ಯದಿಂದ ನಿಧನ

ಮಾಧ್ಯಮ ಲೋಕದಲ್ಲಿ ಸುದೀರ್ಘ ದುಡಿಮೆ ಮತ್ತು ತನ್ನ ಕಲಾತ್ಮಕ ಕ್ಯಾಮರಾ ಕೌಶಲ್ಯದಿಂದ ಜನಮನ ಸೆಳೆದಿದ್ದ ನಾಗರಾಜ್ ಇಂದು ನಿಧನರಾಗಿದ್ದಾರೆ. ಆರ್ಥಿಕ…

1 day ago

ಆಂಬ್ಯುಲೆನ್ಸ್ ವಾಹನವೊಂದಕ್ಕೆ ಸೈಡ್ ಬಿಡದ ಸ್ಕೂಟರ್ ಸವಾರನ ಬಂಧನ

ಆಂಬ್ಯುಲೆನ್ಸ್ ವಾಹನವೊಂದಕ್ಕೆ ಸೈಡ್ ಬಿಡದೆ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಸ್ಕೂಟರ್ ಸವಾರನೋರ್ವನನ್ನು ಪೋಲೀಸರು ಬಂಧಿಸಿದ್ದಾರೆ. ಪುತ್ತೂರು ಬೆಟ್ಟಂಪಾಡಿ ನಿವಾಸಿ…

1 day ago

ಮಂಗಳೂರು: ಝಕರಿಯಾ ಜೋಕಟ್ಟೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಅನಿವಾಸಿ ಭಾರತೀಯ ಉದ್ಯಮಿ, ಸಮಾಜ ಸೇವಕ ಝಕರಿಯಾ ಜೋಕಟ್ಟೆ ಅವರಿಗೆ ಹೊರನಾಡ ಕನ್ನಡಿಗ ವಿಭಾಗದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ…

2 days ago

ಮಂಗಳೂರು: ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆ….!

ಪಾಣೆಮಂಗಳೂರು ಹಳೆ ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆಯಾಗಿದೆ. ಪಾಣೆಮಂಗಳೂರು ಹಳೆ ಸೇತುವೆಯ ಬಳಿ ಇಲೆಕ್ಟಿಕ್ ಆಟೋ…

2 days ago

ಮಂಗಳೂರು: ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ದಂಪತಿಯ ಬಂಧನ..!

ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಹಲವಾರು ಮಂದಿಯಿಂದ ಕೋಟ್ಯಾಂತರ ಹಣ ಪಡೆದು ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ದಂಪತಿಯನ್ನು ಕಾವೂರು…

2 days ago