ಕರಾವಳಿ

ಕೊರಗ ಸಮುದಾಯಕ್ಕೆ ಸಾಮಾಜಿಕ ಸ್ಪಂದನೆ ಅಗತ್ಯ; ಪತ್ರಕರ್ತ ತಾರಾನಾಥ ಗಟ್ಟಿ ಕಾಪಿಕಾಡ್

ದಕ್ಷಿಣ ಕನ್ನಡ : ತುಳುನಾಡಿನ ಆದಿ ಬುಡಮೂಲ ಕೊರಗ ಸಮುದಾಯವನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಇತರ ಸಮುದಾಯಗಳಿಂದ ಪೂರಕವಾದ ಸಾಮಾಜಿಕ ಸ್ಪಂದನೆ ಸಿಗಬೇಕಾಗಿದೆ ಎಂದು ದ.ಕ.ಜಿಲ್ಲಾ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷ, ಪತ್ರಕರ್ತ ತಾರಾನಾಥ್ ಗಟ್ಟಿ ಕಾಪಿಕಾಡ್  ಹೇಳಿದರು. 

 ಸುರತ್ಕಲ್ ಕುತ್ತೆತ್ತೂರು ಆದಿವಾಸಿ ಭವನದಲ್ಲಿ ದ.ಕ.ಜಿಲ್ಲಾ ಕೊರಗರ ಸಂಘ ಆಯೋಜಿಸಿದ   ಕೊರಗರ ಭೂಮಿ ಹಬ್ಬ ಕಾರ್ಯಕ್ರಮ ದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.‌

 ಮುಖ್ಯವಾಹಿನಿಯಲ್ಲಿ ಸಾಗುವಂತಾಗಲು ಆರ್ಥಿಕ ಹಾಗೂ ಸಾಮಾಜಿಕ ಸ್ಪಂದನೆ ಅಗತ್ಯವಾಗಿದೆ ಎಂದವರು ಅಭಿಪ್ರಾಯಪಟ್ಟರು. 

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ದ.ಕ.ಜಿಲ್ಲಾ ಕೊರಗ ಸಂಘದ ಅಧ್ಯಕ್ಷ ಎಂ.ಸುಂದರ ಕೊರಗ ಅವರು ಮಾತನಾಡಿ,  ಕೊರಗರ ಐತಿಹಾಸಿಕ ಚಳವಳಿಯ ನೆನಪಿನಲ್ಲಿ ಈ ಕೊರಗರ ಭೂಮಿ ಹಬ್ಬವನ್ನು ಆಚರಿಸಲಾಗುತ್ತಿದೆ ಎಂದು ನೆನಪಿಸಿದರು.   

ಕೊರಗ ಸಂಘಟನೆಯ ಮಾಜಿ ಅಧ್ಯಕ್ಷ ಬಾಲರಾಜ್ ಕೋಡಿಕಲ್ ಸಮುದಾಯದ ಚಳವಳಿ  ನಡೆದು ಬಂದ ದಾರಿಯನ್ನು ಉಲ್ಲೇಖಿಸಿ  ಚಳವಳಿ  ಕೊರಗರ ಬದುಕನ್ನು ಬದಲಾಯಿಸಿದ ಮಹತ್ವದ ಮೈಲಿಗಲ್ಲು ಎಂದು ಹೇಳಿದರು. 

ಉಡುಪಿ ಜಿಲ್ಲಾ ಕೊರಗ ಸಂಘದ ಅಧ್ಯಕ್ಷೆ ಗೌರಿ ಕೆಂಜೂರು ಅವರು ಮಾತನಾಡಿ, ಕೊರಗ ಸಮುದಾಯದ  ಹೋರಾಟವು  ಮಹಿಳೆಯರ  ಸಹಭಾಗಿತ್ವದಲ್ಲಿ ಯಶಸ್ವಿಯಾಗಿ ನಡೆದಿತ್ತು ಎಂದು ಹೇಳಿದರು.

ಲೇಖಕ ಬಾಬು ಪಾಂಗಳ ಅವರು ಭೂಮಿ ಹಬ್ಬದ ಸಂದೇಶ ನೀಡಿದರು. ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ಸುರೇಶ್ ಅಡಿಗ , ಸಮಗ್ರ ಗಿರಿಜನ ಯೋಜನಾ ಸಮನ್ವಯಾಧಿಕಾರಿ ಹೇಮಚಂದ್ರ ಅವರು ಶುಭಕೋರಿ ಮಾತನಾಡಿದರು. 

ಬಾಳಾ ಪಂಚಾಯತ್ ಅಧ್ತಕ್ಷ ಶಂಕರ್ ಜೋಗಿ , ಉಪಾಧ್ಯಕ್ಷೆ ಲಕ್ಷ್ಮಿ ಶುಭಕೋರಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಮುದಾಯದ ಗುರಿಕಾರರಾದ ಜಬ್ಬ ಗುರಿಕಾರ ಬಳ್ಕುಂಜ , ನಾರಾಯಣ ಸಿರಿಗೆನ್ನಾರ್ , ರಾಜು ಗುರಿಕಾರ ಕತ್ತಲ್ ಸಾರ್ , ಸಮುದಾಯದ ಹಿರಿಯ ಮಹಿಳೆಯರಾದ ಲಲಿತಾ ಕೃಷ್ಣಾಪುರ, ಸುಮತಿ ಬಂಟ್ವಾಳ ಅವರನ್ನು ಸನ್ಮಾನಿಸಲಾಯಿತು. 

ರಮೇಶ್ ಗುಂಡಾವು ಕಾರ್ಯಕ್ರಮ ನಿರ್ವಹಿಸಿದರು. ಮನೋಜ್ ಕೋಡಿಕಲ್ ಸ್ವಾಗತಿಸಿ ವಂದಿಸಿದರು. 

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…

2 days ago

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…

2 days ago

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…

4 days ago

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

  ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…

4 days ago

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…

4 days ago

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…

5 days ago