ದಕ್ಷಿಣ ಕನ್ನಡ : ತುಳುನಾಡಿನ ಆದಿ ಬುಡಮೂಲ ಕೊರಗ ಸಮುದಾಯವನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಇತರ ಸಮುದಾಯಗಳಿಂದ ಪೂರಕವಾದ ಸಾಮಾಜಿಕ ಸ್ಪಂದನೆ ಸಿಗಬೇಕಾಗಿದೆ ಎಂದು ದ.ಕ.ಜಿಲ್ಲಾ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷ, ಪತ್ರಕರ್ತ ತಾರಾನಾಥ್ ಗಟ್ಟಿ ಕಾಪಿಕಾಡ್ ಹೇಳಿದರು.
ಸುರತ್ಕಲ್ ಕುತ್ತೆತ್ತೂರು ಆದಿವಾಸಿ ಭವನದಲ್ಲಿ ದ.ಕ.ಜಿಲ್ಲಾ ಕೊರಗರ ಸಂಘ ಆಯೋಜಿಸಿದ ಕೊರಗರ ಭೂಮಿ ಹಬ್ಬ ಕಾರ್ಯಕ್ರಮ ದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಮುಖ್ಯವಾಹಿನಿಯಲ್ಲಿ ಸಾಗುವಂತಾಗಲು ಆರ್ಥಿಕ ಹಾಗೂ ಸಾಮಾಜಿಕ ಸ್ಪಂದನೆ ಅಗತ್ಯವಾಗಿದೆ ಎಂದವರು ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ದ.ಕ.ಜಿಲ್ಲಾ ಕೊರಗ ಸಂಘದ ಅಧ್ಯಕ್ಷ ಎಂ.ಸುಂದರ ಕೊರಗ ಅವರು ಮಾತನಾಡಿ, ಕೊರಗರ ಐತಿಹಾಸಿಕ ಚಳವಳಿಯ ನೆನಪಿನಲ್ಲಿ ಈ ಕೊರಗರ ಭೂಮಿ ಹಬ್ಬವನ್ನು ಆಚರಿಸಲಾಗುತ್ತಿದೆ ಎಂದು ನೆನಪಿಸಿದರು.
ಕೊರಗ ಸಂಘಟನೆಯ ಮಾಜಿ ಅಧ್ಯಕ್ಷ ಬಾಲರಾಜ್ ಕೋಡಿಕಲ್ ಸಮುದಾಯದ ಚಳವಳಿ ನಡೆದು ಬಂದ ದಾರಿಯನ್ನು ಉಲ್ಲೇಖಿಸಿ ಚಳವಳಿ ಕೊರಗರ ಬದುಕನ್ನು ಬದಲಾಯಿಸಿದ ಮಹತ್ವದ ಮೈಲಿಗಲ್ಲು ಎಂದು ಹೇಳಿದರು.
ಉಡುಪಿ ಜಿಲ್ಲಾ ಕೊರಗ ಸಂಘದ ಅಧ್ಯಕ್ಷೆ ಗೌರಿ ಕೆಂಜೂರು ಅವರು ಮಾತನಾಡಿ, ಕೊರಗ ಸಮುದಾಯದ ಹೋರಾಟವು ಮಹಿಳೆಯರ ಸಹಭಾಗಿತ್ವದಲ್ಲಿ ಯಶಸ್ವಿಯಾಗಿ ನಡೆದಿತ್ತು ಎಂದು ಹೇಳಿದರು.
ಲೇಖಕ ಬಾಬು ಪಾಂಗಳ ಅವರು ಭೂಮಿ ಹಬ್ಬದ ಸಂದೇಶ ನೀಡಿದರು. ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ಸುರೇಶ್ ಅಡಿಗ , ಸಮಗ್ರ ಗಿರಿಜನ ಯೋಜನಾ ಸಮನ್ವಯಾಧಿಕಾರಿ ಹೇಮಚಂದ್ರ ಅವರು ಶುಭಕೋರಿ ಮಾತನಾಡಿದರು.
ಬಾಳಾ ಪಂಚಾಯತ್ ಅಧ್ತಕ್ಷ ಶಂಕರ್ ಜೋಗಿ , ಉಪಾಧ್ಯಕ್ಷೆ ಲಕ್ಷ್ಮಿ ಶುಭಕೋರಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಮುದಾಯದ ಗುರಿಕಾರರಾದ ಜಬ್ಬ ಗುರಿಕಾರ ಬಳ್ಕುಂಜ , ನಾರಾಯಣ ಸಿರಿಗೆನ್ನಾರ್ , ರಾಜು ಗುರಿಕಾರ ಕತ್ತಲ್ ಸಾರ್ , ಸಮುದಾಯದ ಹಿರಿಯ ಮಹಿಳೆಯರಾದ ಲಲಿತಾ ಕೃಷ್ಣಾಪುರ, ಸುಮತಿ ಬಂಟ್ವಾಳ ಅವರನ್ನು ಸನ್ಮಾನಿಸಲಾಯಿತು.
ರಮೇಶ್ ಗುಂಡಾವು ಕಾರ್ಯಕ್ರಮ ನಿರ್ವಹಿಸಿದರು. ಮನೋಜ್ ಕೋಡಿಕಲ್ ಸ್ವಾಗತಿಸಿ ವಂದಿಸಿದರು.
ಮಿಜಾರ್ ಸಮೀಪ ಬಾಡಿಗೆ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಮೂವರು ಗಾಯಗೊಂಡ ಘಟನೆ ನಡೆದಿದೆ. ಘಟನೆಯಲ್ಲಿ ಆಳ್ವಾಸ್ ಕಾಲೇಜಿನ ಕೆಲಸಗಾರ ಶಿವರಾಮ,…
ನೀಟ್ ಮರು ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವೇಳೆ ಕೋಚಿಂಗ್ ಸೆಂಟರ್ನ ಹಾಸ್ಟೆಲ್ನಲ್ಲಿ ತಂಗಿ ಆತ್ಮಹತ್ಯೆ ಮಾಡಿಕೊಂಡಿದ್ದ ದುರಂತ ಮಾಸುವ ಮುನ್ನವೇ,…
ಕೊಲಂಬಿಯಾದ ಪಶ್ಚಿಮ ಭಾಗದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ 111 ಮಂದಿ ಮೃತಪಟ್ಟಿದ್ದಾರೆ. 87ಕ್ಕೂ ಹೆಚ್ಚು ಮಂದಿ…
ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬಸ್ಸೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ವಿಟ್ಲ ಪಡ್ನೂರು ಗ್ರಾಮದ ಪೂರ್ಲಪ್ಪಾಡಿ ಸಮೀಪದ…
ಪಾದಚಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ತಲಪಾಡಿಯಲ್ಲಿ ನಡೆದಿದೆ. ಗದಗ ನಿವಾಸಿ ಶರಣಪ್ಪ ಗಂಭೀರ…
ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕ…