ದಕ್ಷಿಣ ಕನ್ನಡ : ತುಳುನಾಡಿನ ಆದಿ ಬುಡಮೂಲ ಕೊರಗ ಸಮುದಾಯವನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಇತರ ಸಮುದಾಯಗಳಿಂದ ಪೂರಕವಾದ ಸಾಮಾಜಿಕ ಸ್ಪಂದನೆ ಸಿಗಬೇಕಾಗಿದೆ ಎಂದು ದ.ಕ.ಜಿಲ್ಲಾ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷ, ಪತ್ರಕರ್ತ ತಾರಾನಾಥ್ ಗಟ್ಟಿ ಕಾಪಿಕಾಡ್ ಹೇಳಿದರು.
ಸುರತ್ಕಲ್ ಕುತ್ತೆತ್ತೂರು ಆದಿವಾಸಿ ಭವನದಲ್ಲಿ ದ.ಕ.ಜಿಲ್ಲಾ ಕೊರಗರ ಸಂಘ ಆಯೋಜಿಸಿದ ಕೊರಗರ ಭೂಮಿ ಹಬ್ಬ ಕಾರ್ಯಕ್ರಮ ದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಮುಖ್ಯವಾಹಿನಿಯಲ್ಲಿ ಸಾಗುವಂತಾಗಲು ಆರ್ಥಿಕ ಹಾಗೂ ಸಾಮಾಜಿಕ ಸ್ಪಂದನೆ ಅಗತ್ಯವಾಗಿದೆ ಎಂದವರು ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ದ.ಕ.ಜಿಲ್ಲಾ ಕೊರಗ ಸಂಘದ ಅಧ್ಯಕ್ಷ ಎಂ.ಸುಂದರ ಕೊರಗ ಅವರು ಮಾತನಾಡಿ, ಕೊರಗರ ಐತಿಹಾಸಿಕ ಚಳವಳಿಯ ನೆನಪಿನಲ್ಲಿ ಈ ಕೊರಗರ ಭೂಮಿ ಹಬ್ಬವನ್ನು ಆಚರಿಸಲಾಗುತ್ತಿದೆ ಎಂದು ನೆನಪಿಸಿದರು.
ಕೊರಗ ಸಂಘಟನೆಯ ಮಾಜಿ ಅಧ್ಯಕ್ಷ ಬಾಲರಾಜ್ ಕೋಡಿಕಲ್ ಸಮುದಾಯದ ಚಳವಳಿ ನಡೆದು ಬಂದ ದಾರಿಯನ್ನು ಉಲ್ಲೇಖಿಸಿ ಚಳವಳಿ ಕೊರಗರ ಬದುಕನ್ನು ಬದಲಾಯಿಸಿದ ಮಹತ್ವದ ಮೈಲಿಗಲ್ಲು ಎಂದು ಹೇಳಿದರು.
ಉಡುಪಿ ಜಿಲ್ಲಾ ಕೊರಗ ಸಂಘದ ಅಧ್ಯಕ್ಷೆ ಗೌರಿ ಕೆಂಜೂರು ಅವರು ಮಾತನಾಡಿ, ಕೊರಗ ಸಮುದಾಯದ ಹೋರಾಟವು ಮಹಿಳೆಯರ ಸಹಭಾಗಿತ್ವದಲ್ಲಿ ಯಶಸ್ವಿಯಾಗಿ ನಡೆದಿತ್ತು ಎಂದು ಹೇಳಿದರು.
ಲೇಖಕ ಬಾಬು ಪಾಂಗಳ ಅವರು ಭೂಮಿ ಹಬ್ಬದ ಸಂದೇಶ ನೀಡಿದರು. ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ಸುರೇಶ್ ಅಡಿಗ , ಸಮಗ್ರ ಗಿರಿಜನ ಯೋಜನಾ ಸಮನ್ವಯಾಧಿಕಾರಿ ಹೇಮಚಂದ್ರ ಅವರು ಶುಭಕೋರಿ ಮಾತನಾಡಿದರು.
ಬಾಳಾ ಪಂಚಾಯತ್ ಅಧ್ತಕ್ಷ ಶಂಕರ್ ಜೋಗಿ , ಉಪಾಧ್ಯಕ್ಷೆ ಲಕ್ಷ್ಮಿ ಶುಭಕೋರಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಮುದಾಯದ ಗುರಿಕಾರರಾದ ಜಬ್ಬ ಗುರಿಕಾರ ಬಳ್ಕುಂಜ , ನಾರಾಯಣ ಸಿರಿಗೆನ್ನಾರ್ , ರಾಜು ಗುರಿಕಾರ ಕತ್ತಲ್ ಸಾರ್ , ಸಮುದಾಯದ ಹಿರಿಯ ಮಹಿಳೆಯರಾದ ಲಲಿತಾ ಕೃಷ್ಣಾಪುರ, ಸುಮತಿ ಬಂಟ್ವಾಳ ಅವರನ್ನು ಸನ್ಮಾನಿಸಲಾಯಿತು.
ರಮೇಶ್ ಗುಂಡಾವು ಕಾರ್ಯಕ್ರಮ ನಿರ್ವಹಿಸಿದರು. ಮನೋಜ್ ಕೋಡಿಕಲ್ ಸ್ವಾಗತಿಸಿ ವಂದಿಸಿದರು.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…