ಜನ ಮನದ ನಾಡಿ ಮಿಡಿತ

Advertisement

ಸಂಪಿಗೆ ಚರ್ಚ್ ನಲ್ಲಿ ರಕ್ತದಾನ ಶಿಬಿರ : 50 ಯುನಿಟ್ ರಕ್ತ ಸಂಗ್ರಹ

ಮೂಡುಬಿದಿರೆ: ಪವಿತ್ರಾತ್ಮ ದೇವಾಲಯ ಸಂಪಿಗೆ, ಭಾರತೀಯ ಕ್ಯಾಥೋಲಿಕ್ ಯುವ ಸಂಚಲನ ಘಟಕ, ಕ್ಯಾಥೋಲಿಕ್ ಸಭಾ ಸಂಪಿಗೆ ಮತ್ತು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಬ್ಲಡ್ ಬ್ಯಾಂಕ್ & ರೆಡ್ ಕ್ರಾಸ್ ಮಂಗಳೂರು ಇವುಗಳ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ ಸಂಪಿಗೆ ಚರ್ಚ್ ಸಭಾ ಭವನದಲ್ಲಿ ಭಾನುವಾರ ನಡೆಯಿತು.

ಸಂಪಿಗೆ ಹೋಲಿ ಸ್ಪಿರೀಟ್ ಚರ್ಚ್ನ ಧರ್ಮಗುರು ವಿನ್ಸೆಂಟ್ ಡಿ’ಸೋಜಾ ಅಧ್ಯಕ್ಷತೆಯನ್ನು ವಹಿಸಿ ಶಿಬಿರವನ್ನು ಉದ್ಘಾಟಿಸಿ, ಇನ್ನೊಬ್ಬರ ಜೀವವನ್ನು ಉಳಿಸುವ ರಕ್ತವನ್ನು ದಾನ ಮಾಡುವುದು ಒಂದು ಉತ್ತಮ ಕಾರ್ಯವಾಗಿದೆ ಎಂದು ಶ್ಲಾಘಿಸಿದರು.

ಮಂಗಳೂರು ಲೇಡಿಗೋಷನ್ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ನಾಗಭೂಷಣ್, ಚರ್ಚ್ನ ಕಥೋಲಿಕ್ ಸಭಾದ ಅಧ್ಯಕ್ಷ ರಿಚಾರ್ಡ್ ಖರ್ಡೋಜಾ, ಪಾಲನಾ ಮಂಡಳಿಯ ಉಪಾಧ್ಯಕ್ಷ ವಿಲ್ಫ್ರೆಡ್ ಮಸ್ಕಿತ್, ಕಾರ್ಯದರ್ಶಿ ರೋಶನ್ ಫೆರ್ನಾಂಡಿಸ್, ಭಾರತೀಯ ಕಥೋಲಿಕ್ ಯುವ ಸಂಚಲನದ ಸಚೇತಕ ವಿಪಿನ್ ಕುಮಾರ್ ಫೆರ್ನಾಂಡಿಸ್, ಅಧ್ಯಕ್ಷ ಜೋಯ್ಸನ್ ಅಬ್ರೆವೋ, ಮೂಡುಬಿದಿರೆ ವಲಯ ಕಥೋಲಿಕ್ ಯುವ ಸಂಚಲನದ ಅಧ್ಯಕ್ಷ ಬ್ರೆಂಡನ್ ಕುಟಿನ್ಹಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಇನ್ನೂ ರಕ್ತದಾನ ಶಿಬಿರದಲ್ಲಿ 50 ಯುನಿಟ್ ರಕ್ತ ಸಂಗ್ರಹವಾಗಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!