ಮೂಡುಬಿದಿರೆ: ಪವಿತ್ರಾತ್ಮ ದೇವಾಲಯ ಸಂಪಿಗೆ, ಭಾರತೀಯ ಕ್ಯಾಥೋಲಿಕ್ ಯುವ ಸಂಚಲನ ಘಟಕ, ಕ್ಯಾಥೋಲಿಕ್ ಸಭಾ ಸಂಪಿಗೆ ಮತ್ತು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಬ್ಲಡ್ ಬ್ಯಾಂಕ್ & ರೆಡ್ ಕ್ರಾಸ್ ಮಂಗಳೂರು ಇವುಗಳ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ ಸಂಪಿಗೆ ಚರ್ಚ್ ಸಭಾ ಭವನದಲ್ಲಿ ಭಾನುವಾರ ನಡೆಯಿತು.
ಸಂಪಿಗೆ ಹೋಲಿ ಸ್ಪಿರೀಟ್ ಚರ್ಚ್ನ ಧರ್ಮಗುರು ವಿನ್ಸೆಂಟ್ ಡಿ’ಸೋಜಾ ಅಧ್ಯಕ್ಷತೆಯನ್ನು ವಹಿಸಿ ಶಿಬಿರವನ್ನು ಉದ್ಘಾಟಿಸಿ, ಇನ್ನೊಬ್ಬರ ಜೀವವನ್ನು ಉಳಿಸುವ ರಕ್ತವನ್ನು ದಾನ ಮಾಡುವುದು ಒಂದು ಉತ್ತಮ ಕಾರ್ಯವಾಗಿದೆ ಎಂದು ಶ್ಲಾಘಿಸಿದರು.
ಮಂಗಳೂರು ಲೇಡಿಗೋಷನ್ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ನಾಗಭೂಷಣ್, ಚರ್ಚ್ನ ಕಥೋಲಿಕ್ ಸಭಾದ ಅಧ್ಯಕ್ಷ ರಿಚಾರ್ಡ್ ಖರ್ಡೋಜಾ, ಪಾಲನಾ ಮಂಡಳಿಯ ಉಪಾಧ್ಯಕ್ಷ ವಿಲ್ಫ್ರೆಡ್ ಮಸ್ಕಿತ್, ಕಾರ್ಯದರ್ಶಿ ರೋಶನ್ ಫೆರ್ನಾಂಡಿಸ್, ಭಾರತೀಯ ಕಥೋಲಿಕ್ ಯುವ ಸಂಚಲನದ ಸಚೇತಕ ವಿಪಿನ್ ಕುಮಾರ್ ಫೆರ್ನಾಂಡಿಸ್, ಅಧ್ಯಕ್ಷ ಜೋಯ್ಸನ್ ಅಬ್ರೆವೋ, ಮೂಡುಬಿದಿರೆ ವಲಯ ಕಥೋಲಿಕ್ ಯುವ ಸಂಚಲನದ ಅಧ್ಯಕ್ಷ ಬ್ರೆಂಡನ್ ಕುಟಿನ್ಹಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಇನ್ನೂ ರಕ್ತದಾನ ಶಿಬಿರದಲ್ಲಿ 50 ಯುನಿಟ್ ರಕ್ತ ಸಂಗ್ರಹವಾಗಿದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…