ಮುಲ್ಕಿ: ಲಯನ್ಸ್ ಇಂಟರ್ನ್ಯಾಷನಲ್317ಡಿ ವತಿಯಿಂದ ಶಿಕ್ಷಕರಿಗೆ ಎರಡು ದಿನಗಳ ತರಬೇತಿ ಕಾರ್ಯಾಗಾರ (ಎಸ್ ಎಫ್ ಎ) ಮುಲ್ಕಿ ಲಯನ್ಸ್ ಸೌಧದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಲ್ಕಿ ಲಯನ್ಸ್ ಕ್ಲಬ್ ಅಧ್ಯಕ್ಷೆ ಶೀತಲ್ ಸುಶೀಲ್ ವಹಿಸಿದ್ದರು.
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಮಾಜೀ ರಾಜ್ಯಪಾಲ ಡಾ. ಹರಿಕೃಷ್ಣ ಪುನರೂರು ಮಾತನಾಡಿ ವಿದ್ಯಾರ್ಥಿಗಳು ಡ್ರಗ್ಸ್ ಮತ್ತಿತರ ದುಷ್ಟ ಚಟಗಳಿಂದ ದೂರವಿದ್ದರೆ ದೇಶದ ಅಭಿವೃದ್ಧಿ ಸಾಧ್ಯವಾಗಿದ್ದು, ಭವ್ಯ ಭಾರತ ನಿರ್ಮಾಣ ಶಿಕ್ಷಕರಿಂದ ಸಾಧ್ಯ ಎಂದರು.
ಲಯನ್ ರಾಜ್ಯಪಾಲ ಮೆಲ್ವಿನ್ ಡಿಸೋಜಾ ಮಾತನಾಡಿ ಎಳವೆಯಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಸಮಾಜದಲ್ಲಿ ಉನ್ನತ ಸ್ಥಾನಕ್ಕಾಗಿ ಶ್ರಮಿಸುತ್ತಿರುವ ಶಿಕ್ಷಕರ ಪಾತ್ರ ಮಹತ್ವದ್ದು, ಮಹಿಳೆಯರಿಗೆ ಸಮಾನತೆಯ ಮೂಲಕ ನಾಯಕತ್ವ ನೀಡಿದರೆ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಖಂಡಿತ ಎಂದರು.
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಲಯನ್ ಮಾಜೀ ರಾಜ್ಯಪಾಲರಾದ ಕವಿತಾ ಶಾಸ್ತ್ರಿ, ಕ್ಯಾಬಿನೆಟ್ ಸೆಕ್ರೆಟರಿ ಸುಧಾಕರ ಶೆಟ್ಟಿ, ಆರ್.ಸಿ. ಉಷಾ ಮನೋಜ್, ಝಡ್ ಸಿ ಸುಜಿತ್ ಸಾಲ್ಯಾನ್, ಮಂದಾಕಿನಿ, ಮಾಜೀ ಅಧ್ಯಕ್ಷೆ ನೀರಜಾ ಅಗರ್ವಾಲ್, ಶೋಭಾ ಸುಜಿತ್, ಲಿಯೋ ಸಿಯಾ ಸುಶೀಲ್, ಕವನ್ ಕುಬೆವೂರು, ಕಿಶೋರ್ ಶೆಟ್ಟಿ ಬಪ್ಪನಾಡು ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕಾರ್ಯಗಾರದಲ್ಲಿ ಭಾಗವಹಿಸಿದ ಶಿಕ್ಷಕಿಯರನ್ನು ಗೌರವಿಸಲಾಯಿತು.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…