ಜನ ಮನದ ನಾಡಿ ಮಿಡಿತ

Advertisement

ಶಿಕ್ಷಕ ಸೀತಾರಾಮ ಶೆಟ್ಟರ ಶತ ಸಂಭ್ರಮ ಆಚರಣೆ


ಮೂಡುಬಿದಿರೆ: ಕಾಡಿನ ಹೂವುಗಳಂತೆ ಸಾಮಾಜಿಕ, ಆರ್ಥಿಕ ಚೈತನ್ಯವಿಲ್ಲದೇ ಬಾಡಿ ಹೋಗಬೇಕಾದ ಕರ್ಣ, ಏಕಲವ್ಯರಂತಹ ಪ್ರತಿಭೆಗಳನ್ನೂ ಪೋಷಿಸಿ ರಾಷ್ಟ್ರ ಮಾನ್ಯತೆ ದೊರಕಿಸಿದ ಶಿಕ್ಷಕರ ಸಾಲಿನಲ್ಲಿ ತಮ್ಮ ಶಿಕ್ಷಕ, ಬಂಗಬೆಟ್ಟು ಗುತ್ತು ಶತಾಯುಷಿ ಸೀತಾರಾಮ ಶೆಟ್ಟಿಯವರು ಗಮನಾರ್ಹರು. ಶಿಸ್ತು, ಸಂಯಮ,ಸದೃಡ ಮನೋಭಾವ, ಬದ್ಧತೆ, ಆತ್ಮ ಸ್ತೈರ್ಯ ಮೊದಲಾದ ಮೌಲ್ಯಗಳನ್ನು ವಿದ್ಯಾರ್ಥಿಗಳಲ್ಲಿ ಬಿತ್ತಿ ಶಿಲೆಯನ್ನು ಶಿಲ್ಪವಾಗಿಸುವಲ್ಲಿ ಅವರ ಪಾತ್ರ ಮಹತ್ವದ್ದು ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ ಹೇಳಿದರು. ಅವರು ರವಿವಾರ ಸಮಾಜ ಮಂದಿರದಲ್ಲಿ ವಿದ್ಯಾರ್ಥಿಗಳು ಮತ್ತು ಅಭಿಮಾನಿಬಳಗ ಹಾಗೂ ಸಮಾಜ ಮಂದಿರ ಸಭಾ (ರಿ.) ವತಿಯಿಂದ ಜರಗಿದ ಸೀತಾರಾಮ ಶೆಟ್ಟಿ ಅವರ ಶತ ಸಂಭ್ರಮ ಆಚರಣೆಯಲ್ಲಿ ಅಭಿನಂದನಾ ಮಾತುಗಳನ್ನಾಡಿದರು.


ಗುರುವನ್ನು ಗೌರವಿಸದವರನ್ನು ಸಮಾಜವೂ ಗುರುತಿಸುವುದಿಲ್ಲ . ಈ ನಿಟ್ಟಿನಲ್ಲಿ ಶಿಕ್ಷಣ, ಜ್ಞಾನಕ್ಕಿಂತ ಸಂತೃಪ್ತಿಯ ಬದುಕು ಕಟ್ಟಿಕೊಳ್ಳುವ ವಿವೇಕ, ಕೀರ್ತಿಗಿಂತ ಬತ್ತದ ಒರತೆಯಂತೆ ನೀಡಿದ ಸ್ಫೂರ್ತಿ ತಮ್ಮೆಲ್ಲರ ಬದುಕನ್ನು ಬೆಳಗಿಸಿದೆ ಎಂದವರು ಹೇಳಿದರು.
ಶತಾಯುಷಿ ಸೀತಾರಾಮ ಶೆಟ್ಟಿಯವರ ಶತ ಸಂಭ್ರಮಕ್ಕೆ ಅವರ ವಿದ್ಯಾರ್ಥಿಗಳು, ಅಭಿಮಾನಿಗಳು ಉತ್ಸಾಹದಿಂದ ಸೇರಿದರು. ತುಂಬಿ ತುಳುಕಿದ ಸಮಾಜ ಮಂದಿರದ ಆವರಣ ಅವರೆಲ್ಲರ ಉತ್ಸಾಹ, ಉತ್ಸವಕ್ಕೆ ಸಾಕ್ಷಿಯಾಯಿತು. ಸಭಾ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಗುರುವಂದನೆಗೆ ಮುಗಿಬಿದ್ದ ವಿದ್ಯಾರ್ಥಿಗಳು,ಸಂಘ ಸಂಸ್ಥೆಗಳ ಪ್ರಮುಖರು, ಹಿತೈಶಿಗಳು ಸಾಲುಗಟ್ಟಿ ನಿಂತು ಗುರುವಂದನೆ ಸಲ್ಲಿಸಿದರು. ಸಹಭೋಜನ, ಆತಿಥ್ಯದ ಜತೆಗೆ ಯಕ್ಷವೈಭವ ಸಾಂಸ್ಕೃತಿಕ ಕಾರ್ಯಕ್ರಮವೂ ಶತ ಸಂಭ್ರಮಕ್ಕೆ ರಂಗೇರಿಸಿತ್ತು.

Leave a Reply

Your email address will not be published. Required fields are marked *

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಶಾಲಾ ಬಸ್; ತಪ್ಪಿದ ಭಾರೀ ಅನಾಹುತ

ಮಂಗಳೂರು: ತಲಪಾಡಿಯಲ್ಲಿ ಪಾದಚಾರಿಗೆ ಕಾರು ಡಿಕ್ಕಿ; ಗಂಭೀರ ಗಾಯ

ಪರ್ಕಳ: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬುಲೆಟ್; ಯುವಕ ಸಾವು

ಬಂಟ್ವಾಳ: ಬಂಟ್ವಾಳ ಪುರಸಭೆಯ ಹೊಸ ಜೆಸಿಬಿಗೆ ತ್ಯಾಜ್ಯ ವಿಲೇವಾರಿ ಕಾರ್ಯಕ್ಕೆ ಚಾಲನೆ

ವಾಮದಪದವು: ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ…!

ಮಂಗಳೂರು: ಪುದು ಗ್ರಾಮ ಪಂಚಾಯಿತಿಯಲ್ಲಿ ವಿಶಿಷ್ಟ ‘ಆಟಿಡೊಂಜಿ ದಿನ’ ಆಚರಣೆ

error: Content is protected !!