ಮೂಡುಬಿದಿರೆ: ಕಾಡಿನ ಹೂವುಗಳಂತೆ ಸಾಮಾಜಿಕ, ಆರ್ಥಿಕ ಚೈತನ್ಯವಿಲ್ಲದೇ ಬಾಡಿ ಹೋಗಬೇಕಾದ ಕರ್ಣ, ಏಕಲವ್ಯರಂತಹ ಪ್ರತಿಭೆಗಳನ್ನೂ ಪೋಷಿಸಿ ರಾಷ್ಟ್ರ ಮಾನ್ಯತೆ ದೊರಕಿಸಿದ ಶಿಕ್ಷಕರ ಸಾಲಿನಲ್ಲಿ ತಮ್ಮ ಶಿಕ್ಷಕ, ಬಂಗಬೆಟ್ಟು ಗುತ್ತು ಶತಾಯುಷಿ ಸೀತಾರಾಮ ಶೆಟ್ಟಿಯವರು ಗಮನಾರ್ಹರು. ಶಿಸ್ತು, ಸಂಯಮ,ಸದೃಡ ಮನೋಭಾವ, ಬದ್ಧತೆ, ಆತ್ಮ ಸ್ತೈರ್ಯ ಮೊದಲಾದ ಮೌಲ್ಯಗಳನ್ನು ವಿದ್ಯಾರ್ಥಿಗಳಲ್ಲಿ ಬಿತ್ತಿ ಶಿಲೆಯನ್ನು ಶಿಲ್ಪವಾಗಿಸುವಲ್ಲಿ ಅವರ ಪಾತ್ರ ಮಹತ್ವದ್ದು ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ ಹೇಳಿದರು. ಅವರು ರವಿವಾರ ಸಮಾಜ ಮಂದಿರದಲ್ಲಿ ವಿದ್ಯಾರ್ಥಿಗಳು ಮತ್ತು ಅಭಿಮಾನಿಬಳಗ ಹಾಗೂ ಸಮಾಜ ಮಂದಿರ ಸಭಾ (ರಿ.) ವತಿಯಿಂದ ಜರಗಿದ ಸೀತಾರಾಮ ಶೆಟ್ಟಿ ಅವರ ಶತ ಸಂಭ್ರಮ ಆಚರಣೆಯಲ್ಲಿ ಅಭಿನಂದನಾ ಮಾತುಗಳನ್ನಾಡಿದರು.
ಗುರುವನ್ನು ಗೌರವಿಸದವರನ್ನು ಸಮಾಜವೂ ಗುರುತಿಸುವುದಿಲ್ಲ . ಈ ನಿಟ್ಟಿನಲ್ಲಿ ಶಿಕ್ಷಣ, ಜ್ಞಾನಕ್ಕಿಂತ ಸಂತೃಪ್ತಿಯ ಬದುಕು ಕಟ್ಟಿಕೊಳ್ಳುವ ವಿವೇಕ, ಕೀರ್ತಿಗಿಂತ ಬತ್ತದ ಒರತೆಯಂತೆ ನೀಡಿದ ಸ್ಫೂರ್ತಿ ತಮ್ಮೆಲ್ಲರ ಬದುಕನ್ನು ಬೆಳಗಿಸಿದೆ ಎಂದವರು ಹೇಳಿದರು.
ಶತಾಯುಷಿ ಸೀತಾರಾಮ ಶೆಟ್ಟಿಯವರ ಶತ ಸಂಭ್ರಮಕ್ಕೆ ಅವರ ವಿದ್ಯಾರ್ಥಿಗಳು, ಅಭಿಮಾನಿಗಳು ಉತ್ಸಾಹದಿಂದ ಸೇರಿದರು. ತುಂಬಿ ತುಳುಕಿದ ಸಮಾಜ ಮಂದಿರದ ಆವರಣ ಅವರೆಲ್ಲರ ಉತ್ಸಾಹ, ಉತ್ಸವಕ್ಕೆ ಸಾಕ್ಷಿಯಾಯಿತು. ಸಭಾ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಗುರುವಂದನೆಗೆ ಮುಗಿಬಿದ್ದ ವಿದ್ಯಾರ್ಥಿಗಳು,ಸಂಘ ಸಂಸ್ಥೆಗಳ ಪ್ರಮುಖರು, ಹಿತೈಶಿಗಳು ಸಾಲುಗಟ್ಟಿ ನಿಂತು ಗುರುವಂದನೆ ಸಲ್ಲಿಸಿದರು. ಸಹಭೋಜನ, ಆತಿಥ್ಯದ ಜತೆಗೆ ಯಕ್ಷವೈಭವ ಸಾಂಸ್ಕೃತಿಕ ಕಾರ್ಯಕ್ರಮವೂ ಶತ ಸಂಭ್ರಮಕ್ಕೆ ರಂಗೇರಿಸಿತ್ತು.
ಮಿಜಾರ್ ಸಮೀಪ ಬಾಡಿಗೆ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಮೂವರು ಗಾಯಗೊಂಡ ಘಟನೆ ನಡೆದಿದೆ. ಘಟನೆಯಲ್ಲಿ ಆಳ್ವಾಸ್ ಕಾಲೇಜಿನ ಕೆಲಸಗಾರ ಶಿವರಾಮ,…
ನೀಟ್ ಮರು ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವೇಳೆ ಕೋಚಿಂಗ್ ಸೆಂಟರ್ನ ಹಾಸ್ಟೆಲ್ನಲ್ಲಿ ತಂಗಿ ಆತ್ಮಹತ್ಯೆ ಮಾಡಿಕೊಂಡಿದ್ದ ದುರಂತ ಮಾಸುವ ಮುನ್ನವೇ,…
ಕೊಲಂಬಿಯಾದ ಪಶ್ಚಿಮ ಭಾಗದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ 111 ಮಂದಿ ಮೃತಪಟ್ಟಿದ್ದಾರೆ. 87ಕ್ಕೂ ಹೆಚ್ಚು ಮಂದಿ…
ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬಸ್ಸೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ವಿಟ್ಲ ಪಡ್ನೂರು ಗ್ರಾಮದ ಪೂರ್ಲಪ್ಪಾಡಿ ಸಮೀಪದ…
ಪಾದಚಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ತಲಪಾಡಿಯಲ್ಲಿ ನಡೆದಿದೆ. ಗದಗ ನಿವಾಸಿ ಶರಣಪ್ಪ ಗಂಭೀರ…
ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕ…