ಮೂಡುಬಿದಿರೆ: ಕಾಡಿನ ಹೂವುಗಳಂತೆ ಸಾಮಾಜಿಕ, ಆರ್ಥಿಕ ಚೈತನ್ಯವಿಲ್ಲದೇ ಬಾಡಿ ಹೋಗಬೇಕಾದ ಕರ್ಣ, ಏಕಲವ್ಯರಂತಹ ಪ್ರತಿಭೆಗಳನ್ನೂ ಪೋಷಿಸಿ ರಾಷ್ಟ್ರ ಮಾನ್ಯತೆ ದೊರಕಿಸಿದ ಶಿಕ್ಷಕರ ಸಾಲಿನಲ್ಲಿ ತಮ್ಮ ಶಿಕ್ಷಕ, ಬಂಗಬೆಟ್ಟು ಗುತ್ತು ಶತಾಯುಷಿ ಸೀತಾರಾಮ ಶೆಟ್ಟಿಯವರು ಗಮನಾರ್ಹರು. ಶಿಸ್ತು, ಸಂಯಮ,ಸದೃಡ ಮನೋಭಾವ, ಬದ್ಧತೆ, ಆತ್ಮ ಸ್ತೈರ್ಯ ಮೊದಲಾದ ಮೌಲ್ಯಗಳನ್ನು ವಿದ್ಯಾರ್ಥಿಗಳಲ್ಲಿ ಬಿತ್ತಿ ಶಿಲೆಯನ್ನು ಶಿಲ್ಪವಾಗಿಸುವಲ್ಲಿ ಅವರ ಪಾತ್ರ ಮಹತ್ವದ್ದು ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ ಹೇಳಿದರು. ಅವರು ರವಿವಾರ ಸಮಾಜ ಮಂದಿರದಲ್ಲಿ ವಿದ್ಯಾರ್ಥಿಗಳು ಮತ್ತು ಅಭಿಮಾನಿಬಳಗ ಹಾಗೂ ಸಮಾಜ ಮಂದಿರ ಸಭಾ (ರಿ.) ವತಿಯಿಂದ ಜರಗಿದ ಸೀತಾರಾಮ ಶೆಟ್ಟಿ ಅವರ ಶತ ಸಂಭ್ರಮ ಆಚರಣೆಯಲ್ಲಿ ಅಭಿನಂದನಾ ಮಾತುಗಳನ್ನಾಡಿದರು.
ಗುರುವನ್ನು ಗೌರವಿಸದವರನ್ನು ಸಮಾಜವೂ ಗುರುತಿಸುವುದಿಲ್ಲ . ಈ ನಿಟ್ಟಿನಲ್ಲಿ ಶಿಕ್ಷಣ, ಜ್ಞಾನಕ್ಕಿಂತ ಸಂತೃಪ್ತಿಯ ಬದುಕು ಕಟ್ಟಿಕೊಳ್ಳುವ ವಿವೇಕ, ಕೀರ್ತಿಗಿಂತ ಬತ್ತದ ಒರತೆಯಂತೆ ನೀಡಿದ ಸ್ಫೂರ್ತಿ ತಮ್ಮೆಲ್ಲರ ಬದುಕನ್ನು ಬೆಳಗಿಸಿದೆ ಎಂದವರು ಹೇಳಿದರು.
ಶತಾಯುಷಿ ಸೀತಾರಾಮ ಶೆಟ್ಟಿಯವರ ಶತ ಸಂಭ್ರಮಕ್ಕೆ ಅವರ ವಿದ್ಯಾರ್ಥಿಗಳು, ಅಭಿಮಾನಿಗಳು ಉತ್ಸಾಹದಿಂದ ಸೇರಿದರು. ತುಂಬಿ ತುಳುಕಿದ ಸಮಾಜ ಮಂದಿರದ ಆವರಣ ಅವರೆಲ್ಲರ ಉತ್ಸಾಹ, ಉತ್ಸವಕ್ಕೆ ಸಾಕ್ಷಿಯಾಯಿತು. ಸಭಾ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಗುರುವಂದನೆಗೆ ಮುಗಿಬಿದ್ದ ವಿದ್ಯಾರ್ಥಿಗಳು,ಸಂಘ ಸಂಸ್ಥೆಗಳ ಪ್ರಮುಖರು, ಹಿತೈಶಿಗಳು ಸಾಲುಗಟ್ಟಿ ನಿಂತು ಗುರುವಂದನೆ ಸಲ್ಲಿಸಿದರು. ಸಹಭೋಜನ, ಆತಿಥ್ಯದ ಜತೆಗೆ ಯಕ್ಷವೈಭವ ಸಾಂಸ್ಕೃತಿಕ ಕಾರ್ಯಕ್ರಮವೂ ಶತ ಸಂಭ್ರಮಕ್ಕೆ ರಂಗೇರಿಸಿತ್ತು.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…