ಮೂಡುಬಿದಿರೆ: ಕಳೆದ ಆರು ವರ್ಷಗಳ ಹಿಂದೆ ಆರಂಭಗೊoಡಿರುವ ‘ಹ್ಯುಮಾನಿಟಿ ಟ್ರಸ್ಟ್’ (ರಿ) ಬೆಳ್ಮಣ್ ಇದರ 1000ನೇ ಪ್ರಾಜೆಕ್ಟ್ ‘ಉಚಿತ ವಸತಿ ಯೋಜನೆ”ಯ 20 ಬಾಡಿಗೆ ರಹಿತ ಮನೆಗಳು ಆ.27ರಂದು ಪಡುಮಾರ್ನಾಡಿನಲ್ಲಿ ಉದ್ಘಾಟನೆಗೊಳ್ಳಲಿವೆ ಎಂದು ಹ್ಯುಮಾನಿಟಿ ಟ್ರಸ್ಟ್ ನ ಅಧ್ಯಕ್ಷ ರೋಶನ್ ಬೆಳ್ಮಣ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಮೂಡುಬಿದಿರೆ ತಾಲೂಕಿನ ಪಡುಮಾರ್ನಾಡಿನಲ್ಲಿ ದಾನ ರೂಪದಲ್ಲಿ ದೊರೆತ ಸಂಸ್ಥೆಯ ಸ್ವಂತ 36 ಸೆಂಟ್ಸ್ ಜಾಗದಲ್ಲಿ 20 ಬಾಡಿಗೆ ರಹಿತ ಮನೆಗಳು ಸಜ್ಜಾಗಿವೆ.
ವಸತಿ ವಂಚಿತ ಹಾಗೂ ಅಶಕ್ತ 20 ಕುಟುಂಬಗಳಿಗೆ ಇಲ್ಲಿ ಆಸರೆ ಮತ್ತು ಇನ್ನಿತರ ಹಲವು ಸೌಲಭ್ಯಗಳು ಅವರ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ಮತ್ತು ಅವರನ್ನು ಸ್ವಾವಲಂಬಿಯಾಗಲು ಪ್ರೋತ್ಸಾಹ ನೀಡಲಾಗುವುದು. 11 ತಿಂಗಳ ಬಾಡಿಗೆ ಕರಾರಿನಂತೆ ಬಾಡಿಗೆ ಇಲ್ಲದೆ ಮನೆಗಳನ್ನು ವಾಸಿಸಲು ಅವರಿಗೆ ನೀಡಿ ಪರಿಸ್ಥಿತಿಯ ಅನುಗುಣವಾಗಿ ಇಂತಿಷ್ಟೇ ವರ್ಷ ಅವರಿಗೆ ಬದುಕು ಕಟ್ಟಿಕೊಳ್ಳಲು ಅವಕಾಶ ದೊರೆಯಲಿದೆ.
20 ಕುಟುಂಬಗಳ ಪೈಕಿ ಈಗಾಗಲೇ 2 ಕುಟುಂಬಗಳ ಆಯ್ಕೆ ಈಗಾಗಲೇ ನಡೆದಿದ್ದು ಅವರು ವಾಸ್ತವ್ಯವನ್ನು ಆರಂಭಿಸಿದ್ದಾರೆ. ಉಳಿದಂತೆ 18 ಕುಟುಂಬಗಳ ಆಯ್ಕೆಯನ್ನು ಸಂಸ್ಥೆಯ ನಿಯಮದಂತೆ ನಡೆಯಲಿದೆ.
ಹ್ಯುಮಾನಿಟಿ ಸಂಸ್ಥೆಯು ಕರ್ನಾಟಕ ರಾಜ್ಯಾದ್ಯಂತ ಅಶಕ್ತರಿಗೆ, ವಸತಿಗಾಗಿ, ಅನಾರೋಗ್ಯಕ್ಕಾಗಿ, ಶಿಕ್ಷಣಕ್ಕಾಗಿ ಹಾಗೂ ಇನ್ನಿತರ ಸಹಾಯ ನೀಡಿದ ಮೊತ್ತವು ಈಗಾಗಲೇ 10 ಕೋಟಿಯನ್ನು ದಾಟಿದೆ ಎಂದ ಅವರು ಆ.27ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ ಉಚಿತ ವಸತಿಯ ಲೋಕಾರ್ಪಣೆಯ ಸಭಾ ಕಾರ್ಯಕ್ರಮವು ಬನ್ನಡ್ಕದ ಪಾಂಚಜನ್ಯ ಸಭಾಂಗಣದಲ್ಲಿ ನಡೆಯಲಿದೆ.
ರಾಜ್ಯದ ಮಾಜಿ ಲೋಕಾಯುಕ್ತ ಜಸ್ಡೀಸ್ ಎನ್.ಸಂತೋಷ್ ಹೆಗ್ಡೆ ಉಚಿತ ಮನೆಗಳನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ‘ವಿಜಯ ಟೈಮ್ಸ್’ನ ವ್ಯವಸ್ಥಾಪಕ ನಿರ್ದೇಶಕಿ ವಿಜಯಲಕ್ಷ್ಮೀ ಶಿಬರೂರು ಮುಖ್ಯ ಅತಿಥಿಯಾಗಿ, ದೈಜಿವಲ್ಡ್ ಮೀಡಿಯಾ’ದ ಸಂಸ್ಥಾಪಕ ವಾಲ್ಟರ್ ನಂದಳಿಕೆ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆಂದು ತಿಳಿಸಿದರು.
ಇನ್ನೂ ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಟ್ರಸ್ಟಿಗಳಾದ ರೂಪಾ ಬಲ್ಲಾಳ್, ಪ್ರಶಾಂತ್ ಫ್ಯ್ರಾಂಕ್, ಲೋಯ್ಡ್ ರೇಗೋ ಉಪಸ್ಥಿತರಿದ್ದರು.
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…
ಮಚ್ಚಿನ ಗ್ರಾಮ ಪಾಳ್ಯರ ಎಂಬಲ್ಲಿ ಪಿಕಪ್ ವಾಹನ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರು ಚಿಕಿತ್ಸೆ…
ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ…
ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ…