ಜನ ಮನದ ನಾಡಿ ಮಿಡಿತ

Advertisement

ನಟ ಪ್ರಕಾಶ್ ರಾಜ್‌ನ ಮತ್ತೊಂದು ಅವಾಂತರ; ಚಂದ್ರಯಾನ-3 ಗೆ ಅವಮಾನ; ವ್ಯಾಪಕ ಅಕ್ರೋಶ

ಬಹುಭಾಷಾ ನಟ ಪ್ರಕಾಶ್ ರಾಜ್ ಅದ್ಭುತ ನಟ ಅನ್ನೋದು ಎಲ್ಲರಿಗೂ ಗೊತ್ತು, ಆದರೆ ಇವರು ಸಿನಿಮಾಗಳಿಗಿಂತ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಬಾರಿ ಸುದ್ದಿಯಾಗುತ್ತಿದ್ದಾರೆ.


ಹೌದು, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಚಂದ್ರಯಾನ-3 ಕೈಗೊಂಡಿದ್ದು, ಇನ್ನೇನು ಎರಡು-ಮೂರು ದಿನಗಳಲ್ಲಿ ಅದು ಪೂರ್ಣಗೊಳ್ಳಲಿದೆ. ಚಂದ್ರಯಾನ-3 ಅಂಗವಾಗಿ ಚಂದ್ರನ ಕಕ್ಷೆ ಸೇರಿದ್ದ ನೌಕೆ ಈಗಾಗಲೇ ಅಲ್ಲಿನ ಫೋಟೋ ಕಳಿಸಿತ್ತು.


ಅದನ್ನು ಇಸ್ರೋ ಕೂಡ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊoಡಿತ್ತು. ಆ. 23ರಂದು ಚಂದ್ರಯಾನ ಚಂದ್ರನ ಮೇಲೆಯನ್ನು ಸ್ಪರ್ಶಿಸಲಿದ್ದು, ಇದಕ್ಕಾಗಿ ವಿಜ್ಞಾನಿಗಳು ಹಾಗೂ ಪ್ರತಿ ಭಾರತೀಯರೂ ಕಾತರದಿಂದ ಕಾಯುತ್ತಿದ್ದಾರೆ.


ಆದರೆ ಈ ಸಮಯದಲ್ಲಿ ಪ್ರಕಾಶ್ ರಾಜ್ ಚಂದ್ರಯಾನವನ್ನೇ ಅಪಹಾಸ್ಯ ಮಾಡುವಂತೆ ತಮ್ಮ ಟ್ವಿಟರ್‌ನಲ್ಲಿ ಒಂದು ಪೋಸ್ಟ್ ಹಂಚಿಕೊoಡಿದ್ದು, ಇದು ಜನರ ಟೀಕೆಗೆ ಕಾರಣವಾಗಿದೆ.
ಇಸ್ರೋ ಮಾಜಿ ಮುಖ್ಯಸ್ಥ ಕೆ.ಶಿವನ್ ಲುಂಗಿ ತೊಟ್ಟು ಎರಡೂ ಕೈಗಳಲ್ಲಿ ಚಹಾವನ್ನು ಬೆರೆಸುವ ಕಾರ್ಟೂನ್ ಫೋಟೋವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊoಡಿರುವ ಪ್ರಕಾಶ್ ರಾಜ್, ತಾಜಾ ಸುದ್ದಿ, ಚಂದ್ರಯಾನದಿoದ ಈಗಷ್ಟೇ ಬಂದ ಮೊದಲ ದೃಶ್ಯ” ಎಂದು ಬರೆದುಕೊಂಡಿದ್ದಾರೆ.


ಈ ಪೋಸ್ಟ್ ವೈರಲ್ ಆಗುತ್ತಿದಂತೆ ಎಲ್ಲರೂ ಪ್ರಕಾಶ್ ರಾಜ್ ವಿರುದ್ಧ ಅಸಮಾಧಾನ ಹೊರ ಹಾಕಿದ್ದು, ಇದು ಇಸ್ರೋಗೆ ಹಾಗೂ ದೇಶಕ್ಕೆ ಮಾಡಿದ ಅಪಮಾನ ಎಂದು ಪ್ರಕಾಶ್ ರಾಜ್ ವಿರುದ್ಧ ನೆಟ್ಟಿಗರು ಕಿಡಿಕಾರಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!