ಬಹುಭಾಷಾ ನಟ ಪ್ರಕಾಶ್ ರಾಜ್ ಅದ್ಭುತ ನಟ ಅನ್ನೋದು ಎಲ್ಲರಿಗೂ ಗೊತ್ತು, ಆದರೆ ಇವರು ಸಿನಿಮಾಗಳಿಗಿಂತ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಬಾರಿ ಸುದ್ದಿಯಾಗುತ್ತಿದ್ದಾರೆ.
ಹೌದು, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಚಂದ್ರಯಾನ-3 ಕೈಗೊಂಡಿದ್ದು, ಇನ್ನೇನು ಎರಡು-ಮೂರು ದಿನಗಳಲ್ಲಿ ಅದು ಪೂರ್ಣಗೊಳ್ಳಲಿದೆ. ಚಂದ್ರಯಾನ-3 ಅಂಗವಾಗಿ ಚಂದ್ರನ ಕಕ್ಷೆ ಸೇರಿದ್ದ ನೌಕೆ ಈಗಾಗಲೇ ಅಲ್ಲಿನ ಫೋಟೋ ಕಳಿಸಿತ್ತು.
ಅದನ್ನು ಇಸ್ರೋ ಕೂಡ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊoಡಿತ್ತು. ಆ. 23ರಂದು ಚಂದ್ರಯಾನ ಚಂದ್ರನ ಮೇಲೆಯನ್ನು ಸ್ಪರ್ಶಿಸಲಿದ್ದು, ಇದಕ್ಕಾಗಿ ವಿಜ್ಞಾನಿಗಳು ಹಾಗೂ ಪ್ರತಿ ಭಾರತೀಯರೂ ಕಾತರದಿಂದ ಕಾಯುತ್ತಿದ್ದಾರೆ.
ಆದರೆ ಈ ಸಮಯದಲ್ಲಿ ಪ್ರಕಾಶ್ ರಾಜ್ ಚಂದ್ರಯಾನವನ್ನೇ ಅಪಹಾಸ್ಯ ಮಾಡುವಂತೆ ತಮ್ಮ ಟ್ವಿಟರ್ನಲ್ಲಿ ಒಂದು ಪೋಸ್ಟ್ ಹಂಚಿಕೊoಡಿದ್ದು, ಇದು ಜನರ ಟೀಕೆಗೆ ಕಾರಣವಾಗಿದೆ.
ಇಸ್ರೋ ಮಾಜಿ ಮುಖ್ಯಸ್ಥ ಕೆ.ಶಿವನ್ ಲುಂಗಿ ತೊಟ್ಟು ಎರಡೂ ಕೈಗಳಲ್ಲಿ ಚಹಾವನ್ನು ಬೆರೆಸುವ ಕಾರ್ಟೂನ್ ಫೋಟೋವನ್ನು ಟ್ವಿಟ್ಟರ್ನಲ್ಲಿ ಹಂಚಿಕೊoಡಿರುವ ಪ್ರಕಾಶ್ ರಾಜ್, ತಾಜಾ ಸುದ್ದಿ, ಚಂದ್ರಯಾನದಿoದ ಈಗಷ್ಟೇ ಬಂದ ಮೊದಲ ದೃಶ್ಯ” ಎಂದು ಬರೆದುಕೊಂಡಿದ್ದಾರೆ.
ಈ ಪೋಸ್ಟ್ ವೈರಲ್ ಆಗುತ್ತಿದಂತೆ ಎಲ್ಲರೂ ಪ್ರಕಾಶ್ ರಾಜ್ ವಿರುದ್ಧ ಅಸಮಾಧಾನ ಹೊರ ಹಾಕಿದ್ದು, ಇದು ಇಸ್ರೋಗೆ ಹಾಗೂ ದೇಶಕ್ಕೆ ಮಾಡಿದ ಅಪಮಾನ ಎಂದು ಪ್ರಕಾಶ್ ರಾಜ್ ವಿರುದ್ಧ ನೆಟ್ಟಿಗರು ಕಿಡಿಕಾರಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…