ಬಹುಭಾಷಾ ನಟ ಪ್ರಕಾಶ್ ರಾಜ್ ಅದ್ಭುತ ನಟ ಅನ್ನೋದು ಎಲ್ಲರಿಗೂ ಗೊತ್ತು, ಆದರೆ ಇವರು ಸಿನಿಮಾಗಳಿಗಿಂತ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಬಾರಿ ಸುದ್ದಿಯಾಗುತ್ತಿದ್ದಾರೆ.
ಹೌದು, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಚಂದ್ರಯಾನ-3 ಕೈಗೊಂಡಿದ್ದು, ಇನ್ನೇನು ಎರಡು-ಮೂರು ದಿನಗಳಲ್ಲಿ ಅದು ಪೂರ್ಣಗೊಳ್ಳಲಿದೆ. ಚಂದ್ರಯಾನ-3 ಅಂಗವಾಗಿ ಚಂದ್ರನ ಕಕ್ಷೆ ಸೇರಿದ್ದ ನೌಕೆ ಈಗಾಗಲೇ ಅಲ್ಲಿನ ಫೋಟೋ ಕಳಿಸಿತ್ತು.
ಅದನ್ನು ಇಸ್ರೋ ಕೂಡ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊoಡಿತ್ತು. ಆ. 23ರಂದು ಚಂದ್ರಯಾನ ಚಂದ್ರನ ಮೇಲೆಯನ್ನು ಸ್ಪರ್ಶಿಸಲಿದ್ದು, ಇದಕ್ಕಾಗಿ ವಿಜ್ಞಾನಿಗಳು ಹಾಗೂ ಪ್ರತಿ ಭಾರತೀಯರೂ ಕಾತರದಿಂದ ಕಾಯುತ್ತಿದ್ದಾರೆ.
ಆದರೆ ಈ ಸಮಯದಲ್ಲಿ ಪ್ರಕಾಶ್ ರಾಜ್ ಚಂದ್ರಯಾನವನ್ನೇ ಅಪಹಾಸ್ಯ ಮಾಡುವಂತೆ ತಮ್ಮ ಟ್ವಿಟರ್ನಲ್ಲಿ ಒಂದು ಪೋಸ್ಟ್ ಹಂಚಿಕೊoಡಿದ್ದು, ಇದು ಜನರ ಟೀಕೆಗೆ ಕಾರಣವಾಗಿದೆ.
ಇಸ್ರೋ ಮಾಜಿ ಮುಖ್ಯಸ್ಥ ಕೆ.ಶಿವನ್ ಲುಂಗಿ ತೊಟ್ಟು ಎರಡೂ ಕೈಗಳಲ್ಲಿ ಚಹಾವನ್ನು ಬೆರೆಸುವ ಕಾರ್ಟೂನ್ ಫೋಟೋವನ್ನು ಟ್ವಿಟ್ಟರ್ನಲ್ಲಿ ಹಂಚಿಕೊoಡಿರುವ ಪ್ರಕಾಶ್ ರಾಜ್, ತಾಜಾ ಸುದ್ದಿ, ಚಂದ್ರಯಾನದಿoದ ಈಗಷ್ಟೇ ಬಂದ ಮೊದಲ ದೃಶ್ಯ” ಎಂದು ಬರೆದುಕೊಂಡಿದ್ದಾರೆ.
ಈ ಪೋಸ್ಟ್ ವೈರಲ್ ಆಗುತ್ತಿದಂತೆ ಎಲ್ಲರೂ ಪ್ರಕಾಶ್ ರಾಜ್ ವಿರುದ್ಧ ಅಸಮಾಧಾನ ಹೊರ ಹಾಕಿದ್ದು, ಇದು ಇಸ್ರೋಗೆ ಹಾಗೂ ದೇಶಕ್ಕೆ ಮಾಡಿದ ಅಪಮಾನ ಎಂದು ಪ್ರಕಾಶ್ ರಾಜ್ ವಿರುದ್ಧ ನೆಟ್ಟಿಗರು ಕಿಡಿಕಾರಿದ್ದಾರೆ.
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…
ಮಚ್ಚಿನ ಗ್ರಾಮ ಪಾಳ್ಯರ ಎಂಬಲ್ಲಿ ಪಿಕಪ್ ವಾಹನ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರು ಚಿಕಿತ್ಸೆ…
ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ…
ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ…