ಬಹುಭಾಷಾ ನಟ ಪ್ರಕಾಶ್ ರಾಜ್ ಅದ್ಭುತ ನಟ ಅನ್ನೋದು ಎಲ್ಲರಿಗೂ ಗೊತ್ತು, ಆದರೆ ಇವರು ಸಿನಿಮಾಗಳಿಗಿಂತ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಬಾರಿ ಸುದ್ದಿಯಾಗುತ್ತಿದ್ದಾರೆ.
ಹೌದು, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಚಂದ್ರಯಾನ-3 ಕೈಗೊಂಡಿದ್ದು, ಇನ್ನೇನು ಎರಡು-ಮೂರು ದಿನಗಳಲ್ಲಿ ಅದು ಪೂರ್ಣಗೊಳ್ಳಲಿದೆ. ಚಂದ್ರಯಾನ-3 ಅಂಗವಾಗಿ ಚಂದ್ರನ ಕಕ್ಷೆ ಸೇರಿದ್ದ ನೌಕೆ ಈಗಾಗಲೇ ಅಲ್ಲಿನ ಫೋಟೋ ಕಳಿಸಿತ್ತು.
ಅದನ್ನು ಇಸ್ರೋ ಕೂಡ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊoಡಿತ್ತು. ಆ. 23ರಂದು ಚಂದ್ರಯಾನ ಚಂದ್ರನ ಮೇಲೆಯನ್ನು ಸ್ಪರ್ಶಿಸಲಿದ್ದು, ಇದಕ್ಕಾಗಿ ವಿಜ್ಞಾನಿಗಳು ಹಾಗೂ ಪ್ರತಿ ಭಾರತೀಯರೂ ಕಾತರದಿಂದ ಕಾಯುತ್ತಿದ್ದಾರೆ.
ಆದರೆ ಈ ಸಮಯದಲ್ಲಿ ಪ್ರಕಾಶ್ ರಾಜ್ ಚಂದ್ರಯಾನವನ್ನೇ ಅಪಹಾಸ್ಯ ಮಾಡುವಂತೆ ತಮ್ಮ ಟ್ವಿಟರ್ನಲ್ಲಿ ಒಂದು ಪೋಸ್ಟ್ ಹಂಚಿಕೊoಡಿದ್ದು, ಇದು ಜನರ ಟೀಕೆಗೆ ಕಾರಣವಾಗಿದೆ.
ಇಸ್ರೋ ಮಾಜಿ ಮುಖ್ಯಸ್ಥ ಕೆ.ಶಿವನ್ ಲುಂಗಿ ತೊಟ್ಟು ಎರಡೂ ಕೈಗಳಲ್ಲಿ ಚಹಾವನ್ನು ಬೆರೆಸುವ ಕಾರ್ಟೂನ್ ಫೋಟೋವನ್ನು ಟ್ವಿಟ್ಟರ್ನಲ್ಲಿ ಹಂಚಿಕೊoಡಿರುವ ಪ್ರಕಾಶ್ ರಾಜ್, ತಾಜಾ ಸುದ್ದಿ, ಚಂದ್ರಯಾನದಿoದ ಈಗಷ್ಟೇ ಬಂದ ಮೊದಲ ದೃಶ್ಯ” ಎಂದು ಬರೆದುಕೊಂಡಿದ್ದಾರೆ.
ಈ ಪೋಸ್ಟ್ ವೈರಲ್ ಆಗುತ್ತಿದಂತೆ ಎಲ್ಲರೂ ಪ್ರಕಾಶ್ ರಾಜ್ ವಿರುದ್ಧ ಅಸಮಾಧಾನ ಹೊರ ಹಾಕಿದ್ದು, ಇದು ಇಸ್ರೋಗೆ ಹಾಗೂ ದೇಶಕ್ಕೆ ಮಾಡಿದ ಅಪಮಾನ ಎಂದು ಪ್ರಕಾಶ್ ರಾಜ್ ವಿರುದ್ಧ ನೆಟ್ಟಿಗರು ಕಿಡಿಕಾರಿದ್ದಾರೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…