ಯಾರಿಗಾದರೂ ಹಾವು ಕಚ್ಚಿದರೆ ಕೂಡಲೇ ಅವರನ್ನು ತುರ್ತು ಚಿಕಿತ್ಸೆ ನೀಡಲು ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತದೆ.
ಆದರೆ ಇಲೊಬ್ಬರು ಹಾವು ಕಚ್ಚಿ ಚಿಕಿತ್ಸೆ ಪಡೆಯಲು 1,307 ಕಿ.ಮೀ ದೂರ ಪ್ರಯಾಣಿಸಿ ಆಸ್ಪತ್ರೆಗೆ ಬಂದಿದ್ದಾರೆ.
ಉತ್ತರ ಪ್ರದೇಶದ ಫತೇಪುರದ ಸುನಿಲ್ ಕುಮಾರ್ (20) ಗುಜರಾತ್ನ ರಾಜ್ಕೋಟ್ನಲ್ಲಿ ಕೂಲಿ ಕೆಲಸ ಮಾಡುತ್ತಾರೆ.
ಗುಜರಾತ್ನ ರಾಜ್ಕೋಟ್ನಲ್ಲಿ ಕೂಲಿ ಕೆಲಸ ಮಾಡುತ್ತಿದ್ದಾರೆ. ಕೆಲಸ ಮಾಡುತ್ತಿದ್ದ ವೇಳೆ ಸುನಿಲ್ ಅವರಿಗೆ ಹಾವೊಂದು ಕಚ್ಚಿದ್ದು, ಕೂಡಲೇ ಅವರನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಲಾಗಿದೆ. ಆದರೆ ಹಾವು ಕಡಿತದಿಂದ ಅವರ ಸ್ಥಿತಿ ಗಂಭೀರವಾಗಿದ್ದು, ಕೆಲ ಸಮಯದ ಬಳಿಕ ಅವರು ಪ್ರಜ್ಞೆ ತಪ್ಪಿದ್ದಾರೆ.
ಅವರ ಆರೋಗ್ಯ ಹದಗೆಡುತ್ತಿರುವ ಬಗ್ಗೆ ಅವರ ಕುಟುಂಬ ಸದಸ್ಯರು ಚಿಂತಿತರಾಗಿದ್ದು, ಸುನಿಲ್ ಅವರ ಚಿಕಿತ್ಸೆಗೆ 1,307 ಕಿ.ಮೀ ದೂರವಿರುವ ಕಾನ್ಪುರದ ಲಾಲಾ ಲಜಪತ್ ರಾಯ್ ಆಸ್ಪತ್ರೆಗೆ ಕರೆದೊಯ್ಯಲು ನಿರ್ಧರಿಸಿದ್ದಾರೆ.
ಇದಕ್ಕಾಗಿ ಕುಟುಂಬದ ಸದಸ್ಯರು ಗುಜರಾತ್ನಲ್ಲಿ 51,000 ರೂಪಾಯಿಗಳಿಗೆ ಅಡ್ವಾನ್ಸ್ಡ್ ಲೈಫ್ ಸಪೋರ್ಟ್ (ಂಐS) ಆಂಬ್ಯುಲೆನ್ಸ್ನ್ನು ಬಾಡಿಗೆಗೆ ಪಡೆದಿದ್ದಾರೆ. ರೋಗಿಯನ್ನು ಕಾನ್ಪುರಕ್ಕೆ ಕರೆತರಲು 1,307 ಕಿಮೀ ದೂರ ಪ್ರಯಾಣಿಸಿ ಎಲ್ಎಲ್ಆರ್ ಆಸ್ಪತ್ರೆ ತಲುಪಿದ ಕೂಡಲೇ ವೆಂಟಿಲೇಟರ್ನಲ್ಲಿರಿಸಿ ಚಿಕಿತ್ಸೆ ಆರಂಭಿಸಲಾಗಿದೆ.
ವೈದ್ಯರ ನಿರಂತರ ಪ್ರಯತ್ನದಿಂದ ರೋಗಿ ಚೇತರಿಕೆ ಕಾಣಲು ಆರಂಭಿಸಿದ್ದು, ಶನಿವಾರ ವೆಂಟಿಲೇಟರ್ ಸಪೋರ್ಟ್ ನ್ನು ತೆಗೆಯಲಾಗಿದೆ ಎಂದು ಎಲ್ ಎಲ್ ಆರ್ ನ ಹಿರಿಯ ವೈದ್ಯ ಡಾ.ಬಿ.ಪಿ. ಹೇಳಿದ್ದಾರೆ.
“ಆ.17 ರಂದು ರಾತ್ರಿ ಆಸ್ಪತ್ರೆಗೆ ಬರುವಾಗ ಅವರ ಸ್ಥಿತಿ ತುಂಬಾ ಗಂಭೀರವಾಗಿತ್ತು. ಹಾವಿನ ವಿಷವು ದೇಹದಲ್ಲಿ ವಿಷಕಾರಿ ಪರಿಣಾಮವನ್ನು ಬೀರಿತ್ತು. ಆ್ಯಂಟಿ ವೆನಮ್ ಮತ್ತಿತರ ಔಷಧಗಳನ್ನು ನೀಡಲಾಯಿತು. ಇದೀಗ ಸುನಿಲ್ ಸ್ಥಿತಿ ಸುಧಾರಿಸಿದೆ. ಅವರನ್ನು ವೆಂಟಿಲೇಟರ್ನಿoದ ಹೊರತೆಗೆದು ಐಸಿಯು ವಾರ್ಡ್ಗೆ ಸ್ಥಳಾಂತರಿಸಲಾಗಿದೆ. ಅವರ ಜೀವ ಈಗ ಅಪಾಯದಿಂದ ಪಾರಾಗಿದೆ’ʼ ಎಂದು ವೈದ್ಯ ಪ್ರಿಯದರ್ಶಿ ಹೇಳಿದ್ದಾರೆ
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…