ಜೆಸಿಬಿ ಬಳಸಿಕೊಂಡು ಸುರತ್ಕಲ್ನ ರಾಜಶ್ರೀ ಕಟ್ಟಡದ ಎಟಿಎಂವೊoದರಲ್ಲಿ ಕಳ್ಳತನಕ್ಕೆ ಯತ್ನಿಸಿದ್ದ ನಾಲ್ವರು ಅಂತರ್ ಜಿಲ್ಲಾ ಕಳ್ಳರನ್ನು ನಗರ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳನ್ನು ಶಿವಮೊಗ್ಗ ಮೂಲದ ದೇವರಾಜ್ (24), ಭರತ್ ಹೆಚ್ (20), ನಾಗರಾಜ ನಾಯ್ಕ್ (21) ಮತ್ತು ಧನರಾಜ್ ನಾಯ್ಕ್ (22) ಎಂದು ತಿಳಿದು ಬಂದಿದೆ.
ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಸುಮಾರು 50 ಸಾವಿರ ಮೌಲ್ಯದ ಹೀರೋ ಸ್ಲೆಂಡರ್ ಬೈಕ್ ಹಾಗೂ 2 ಆಂಡ್ರೋಯ್ಡ್ ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ನಾಲ್ವರು ಅಂತರ್ ಜಿಲ್ಲಾ ಕಲ್ಳರ ವಿರುದ್ಧ ಐಪಿಸಿ ಸೆಕ್ಷನ್ 457, 380, 511 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ದೇವರಾಜ್ ನಾಯ್ಕ್ ಹಾಗೂ ನಾಗರಾಜ ನಾಯ್ಕ ವಿರುದ್ಧ ಶಿಕಾರಿಪುರ ಪಟ್ಟಣ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳಿವೆ. ವಿಚಾರಣೆ ವೇಳೆ ಆಗಸ್ಟ್ 26 ರಂದು ಶಿವಮೊಗ್ಗದಲ್ಲಿ ವಿನೋಭಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜೆಸಿಬಿ ಬಳಸಿ ಆಕ್ಸಿಸ್ ಬ್ಯಾಂಕಿನ ಎಟಿಎಂ ಒಡೆಯಲು ಯತ್ನಿಸಿದ್ದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ.
ಆರೋಪಿಗಳು ಆಗಸ್ಟ್ 4 ರ ಮಧ್ಯರಾತ್ರಿ ಪಡುಬಿದ್ರಿ-ಕಾರ್ಕಳ ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ಜೆಸಿಬಿ ಕದ್ದು, ಸುರತ್ಕಲ್ನಲ್ಲಿ ಎಟಿಎಂ ಕಳ್ಳತನ ಕೃತ್ಯಕ್ಕೆ ಯತ್ನಿಸಿದ್ದರು. ಆರೋಪಿಗಳ ಪೈಕಿ ಮೂವರಿಗೆ ಕೋರ್ಟ್ 4 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದ್ದು, ನಾಲ್ಕನೇ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…