ಜೆಸಿಬಿ ಬಳಸಿಕೊಂಡು ಸುರತ್ಕಲ್ನ ರಾಜಶ್ರೀ ಕಟ್ಟಡದ ಎಟಿಎಂವೊoದರಲ್ಲಿ ಕಳ್ಳತನಕ್ಕೆ ಯತ್ನಿಸಿದ್ದ ನಾಲ್ವರು ಅಂತರ್ ಜಿಲ್ಲಾ ಕಳ್ಳರನ್ನು ನಗರ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳನ್ನು ಶಿವಮೊಗ್ಗ ಮೂಲದ ದೇವರಾಜ್ (24), ಭರತ್ ಹೆಚ್ (20), ನಾಗರಾಜ ನಾಯ್ಕ್ (21) ಮತ್ತು ಧನರಾಜ್ ನಾಯ್ಕ್ (22) ಎಂದು ತಿಳಿದು ಬಂದಿದೆ.
ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಸುಮಾರು 50 ಸಾವಿರ ಮೌಲ್ಯದ ಹೀರೋ ಸ್ಲೆಂಡರ್ ಬೈಕ್ ಹಾಗೂ 2 ಆಂಡ್ರೋಯ್ಡ್ ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ನಾಲ್ವರು ಅಂತರ್ ಜಿಲ್ಲಾ ಕಲ್ಳರ ವಿರುದ್ಧ ಐಪಿಸಿ ಸೆಕ್ಷನ್ 457, 380, 511 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ದೇವರಾಜ್ ನಾಯ್ಕ್ ಹಾಗೂ ನಾಗರಾಜ ನಾಯ್ಕ ವಿರುದ್ಧ ಶಿಕಾರಿಪುರ ಪಟ್ಟಣ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳಿವೆ. ವಿಚಾರಣೆ ವೇಳೆ ಆಗಸ್ಟ್ 26 ರಂದು ಶಿವಮೊಗ್ಗದಲ್ಲಿ ವಿನೋಭಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜೆಸಿಬಿ ಬಳಸಿ ಆಕ್ಸಿಸ್ ಬ್ಯಾಂಕಿನ ಎಟಿಎಂ ಒಡೆಯಲು ಯತ್ನಿಸಿದ್ದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ.
ಆರೋಪಿಗಳು ಆಗಸ್ಟ್ 4 ರ ಮಧ್ಯರಾತ್ರಿ ಪಡುಬಿದ್ರಿ-ಕಾರ್ಕಳ ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ಜೆಸಿಬಿ ಕದ್ದು, ಸುರತ್ಕಲ್ನಲ್ಲಿ ಎಟಿಎಂ ಕಳ್ಳತನ ಕೃತ್ಯಕ್ಕೆ ಯತ್ನಿಸಿದ್ದರು. ಆರೋಪಿಗಳ ಪೈಕಿ ಮೂವರಿಗೆ ಕೋರ್ಟ್ 4 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದ್ದು, ನಾಲ್ಕನೇ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…