ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಮನೆಯ ಅವರಣಗೋಡೆಗೆ ಗುದ್ದಿ ಚರಂಡಿಗೆ ವಾಲಿ ನಿಂತ ಘಟನೆ ಬಿಸಿರೋಡು ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಬಂಟ್ವಾಳ ಚೆಂಡ್ತಿಮಾರ್ ಎಂಬಲ್ಲಿ ಮಧ್ಯ ರಾತ್ರಿ ವೇಳೆ ನಡೆದಿದೆ.
ಚೆಂಡ್ತಿಮಾರ್ ನಿವಾಸಿ ಮೋನಪ್ಪ ಪೂಜಾರಿ ಎಂಬವರ ಮನೆಯ ಕಾಂಪೌಂಡ್ ಗೆ ಗುದ್ದಿದ ಲಾರಿ ಅವರ ಮನೆಯ ಗೇಟಿಗೂ ಹಾನಿ ಮಾಡಿದೆ. ಸದ್ಯ ಮನೆಗೆ ಯಾವುದೇ ಅಪಾಯವಾಗಿಲ್ಲ.
ಮಧ್ಯ ರಾತ್ರಿ ಸುಮಾರು 1.30 ಗಂಟೆ ವೇಳೆ ದೊಡ್ಡ ಶಬ್ದವಾಗಿದ್ದು ಮನೆಯ ಯಜಮಾನ ಮೋನಪ್ಪ ಪೂಜಾರಿ ಅವರು ಹೊರಗಡೆ ಬಂದು ನೋಡಿದಾಗ ಲಾರಿ ಕಂಪೌಡ್ ಗೆ ಗುದ್ದಿ ಅಲ್ಲೆ ಪಕ್ಕಕ್ಕೆ ವಾಲಿ ನಿಂತಿತ್ತು.
ಲಾರಿ ಚಾಲಕ ಯಾವುದೇ ಅಪಾಯವಿಲ್ಲದೆ ಹೊರಕ್ಕೆ ಬಂದಿದ್ದ.
ಯಾವುದೇ ಸಾಮಾಗ್ರಿಗಳು ಇಲ್ಲದೆ ಖಾಲಿ ಲಾರಿ ಮಂಗಳೂರಿನಿಂದ ವಾಪಸು ಉಜಿರೆಗೆ ಹೋಗುವ ವೇಳೆ ನಿದ್ದೆಯ ಕಣ್ಣಿನಲ್ಲಿದ್ದ ಚಾಲಕನಿಗೆ ಲಾರಿ ನಿಯಂತ್ರಣಕ್ಕೆ ಸಿಗದೆ ಘಟನೆ ನಡೆದಿರಬಹುದು ಎಂದು ಹೇಳಲಾಗಿದೆ.
ಇದೇ ಮನೆಯ ಸಮೀಪದ ಮನೆಗೆ ಪಿಕಪ್ ವಾಹನವೊಂದು ಗುದ್ದಿ ಮನೆಗೆ ಹಾನಿಯಾಗಿದ್ದಲ್ಲದೆ ,ಲಕ್ಷಾಂತರ ರೂ ನಷ್ಟ ಸಂಭವಿಸಿದ ಘಟನೆ ಕೆಲ ತಿಂಗಳ ಹಿಂದೆ ನಡೆದಿತ್ತು.
ಈಗ ಮತ್ತೆ ಅದೇ ಭಾಗದಲ್ಲಿ ಮತ್ತೊಂದು ಘಟನೆ ನಡೆದಿದೆ ಆದರೆ ಯಾವುದೇ ಅಪಾಯವಾಗಿಲ್ಲ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…