ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಮನೆಯ ಅವರಣಗೋಡೆಗೆ ಗುದ್ದಿ ಚರಂಡಿಗೆ ವಾಲಿ ನಿಂತ ಘಟನೆ ಬಿಸಿರೋಡು ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಬಂಟ್ವಾಳ ಚೆಂಡ್ತಿಮಾರ್ ಎಂಬಲ್ಲಿ ಮಧ್ಯ ರಾತ್ರಿ ವೇಳೆ ನಡೆದಿದೆ.
ಚೆಂಡ್ತಿಮಾರ್ ನಿವಾಸಿ ಮೋನಪ್ಪ ಪೂಜಾರಿ ಎಂಬವರ ಮನೆಯ ಕಾಂಪೌಂಡ್ ಗೆ ಗುದ್ದಿದ ಲಾರಿ ಅವರ ಮನೆಯ ಗೇಟಿಗೂ ಹಾನಿ ಮಾಡಿದೆ. ಸದ್ಯ ಮನೆಗೆ ಯಾವುದೇ ಅಪಾಯವಾಗಿಲ್ಲ.
ಮಧ್ಯ ರಾತ್ರಿ ಸುಮಾರು 1.30 ಗಂಟೆ ವೇಳೆ ದೊಡ್ಡ ಶಬ್ದವಾಗಿದ್ದು ಮನೆಯ ಯಜಮಾನ ಮೋನಪ್ಪ ಪೂಜಾರಿ ಅವರು ಹೊರಗಡೆ ಬಂದು ನೋಡಿದಾಗ ಲಾರಿ ಕಂಪೌಡ್ ಗೆ ಗುದ್ದಿ ಅಲ್ಲೆ ಪಕ್ಕಕ್ಕೆ ವಾಲಿ ನಿಂತಿತ್ತು.
ಲಾರಿ ಚಾಲಕ ಯಾವುದೇ ಅಪಾಯವಿಲ್ಲದೆ ಹೊರಕ್ಕೆ ಬಂದಿದ್ದ.
ಯಾವುದೇ ಸಾಮಾಗ್ರಿಗಳು ಇಲ್ಲದೆ ಖಾಲಿ ಲಾರಿ ಮಂಗಳೂರಿನಿಂದ ವಾಪಸು ಉಜಿರೆಗೆ ಹೋಗುವ ವೇಳೆ ನಿದ್ದೆಯ ಕಣ್ಣಿನಲ್ಲಿದ್ದ ಚಾಲಕನಿಗೆ ಲಾರಿ ನಿಯಂತ್ರಣಕ್ಕೆ ಸಿಗದೆ ಘಟನೆ ನಡೆದಿರಬಹುದು ಎಂದು ಹೇಳಲಾಗಿದೆ.
ಇದೇ ಮನೆಯ ಸಮೀಪದ ಮನೆಗೆ ಪಿಕಪ್ ವಾಹನವೊಂದು ಗುದ್ದಿ ಮನೆಗೆ ಹಾನಿಯಾಗಿದ್ದಲ್ಲದೆ ,ಲಕ್ಷಾಂತರ ರೂ ನಷ್ಟ ಸಂಭವಿಸಿದ ಘಟನೆ ಕೆಲ ತಿಂಗಳ ಹಿಂದೆ ನಡೆದಿತ್ತು.
ಈಗ ಮತ್ತೆ ಅದೇ ಭಾಗದಲ್ಲಿ ಮತ್ತೊಂದು ಘಟನೆ ನಡೆದಿದೆ ಆದರೆ ಯಾವುದೇ ಅಪಾಯವಾಗಿಲ್ಲ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…