ಜನ ಮನದ ನಾಡಿ ಮಿಡಿತ

Advertisement

ಕುಜ ದೋಷದಿಂದ ಲೂನಾ 25 ವಿಫಲ; ಚಂದ್ರಯಾನ-3ರ ಬಗ್ಗೆ ಭವಿಷ್ಯ ನುಡಿದ ಉಡುಪಿ ಮೂಲದ ಜ್ಯೋತಿಷಿ!

ಭಾರತದ ಕನಸಿನ ನೌಕೆ ಚಂದ್ರಯಾನ-3 ಯಶಸ್ವಿಯಾಗಲು ಒಂದೇ ದಿನ ಬಾಕಿ ಇದೆ. ನಾಳೆ ಸಂಜೆ ವಿಕ್ರಂ ನೌಕೆ ಚಂದ್ರನ ಮೇಲೆ ಲ್ಯಾಂಡ್ ಆಗುವ ನಿರೀಕ್ಷೆ ಇದೆ. ಹೀಗಿರುವಾಗ ಚಂದ್ರಯಾನ-3 ಯಶಸ್ವಿಯಾಗಲೆಂದು ಹಲವರು ಹರಕೆ ಕಟ್ಟಿಕೊಳ್ಳುತ್ತಿದ್ದಾರೆ. ದೇವರ ಮೊರೆ ಹೋಗಿ ಪೂಜೆ ಸಲ್ಲಿಸುತ್ತಿದ್ದಾರೆ. ಇಂತಹ ಸಮಯದಲ್ಲಿ ಉಡುಪಿ ಮೂಲದ ಜ್ಯೋತಿಷಿ ಪ್ರಕಾಶ್ ಅಮ್ಮಣ್ಣಾಯ ವಿಕ್ರಂ ಲ್ಯಾಂಡ್​ ಆಗುವ ಬಗ್ಗೆ ಭವಿಷ್ಯ ನುಡಿದಿದ್ದಾರೆ.

ಭಾರತ ಹಾಗೂ ರಷ್ಯಾ ಎರಡೂ ದೇಶಗಳು ವಾಯುತತ್ವ ರಾಶಿ ಪ್ರಕಾರ ಉಪಗ್ರಹ ಉಡಾಯಿಸಿದೆ. ರಷ್ಯಾ ಮಿಥುನ ಹಾಗೂ ಭಾರತ ತುಲಾ ಲಗ್ನ ದ ಪ್ರಕಾರ ಉಪಗ್ರಹ ಉಡಾವಣೆಯಾಗಿದೆ. ಕುಜದ ಪರಿಣಾಮ ಯಾಂತ್ರೀಕೃತ ದೋಷದಿಂದ ರಷ್ಯಾ ಉಪಗ್ರಹ ವಿಫಲವಾಗಿದೆ ಎಂದು ಜ್ಯೋತಿಷಿ ಪ್ರಕಾಶ್ ಅಮ್ಮಣ್ಣಾಯ ಭವಿಷ್ಯ ನುಡಿದಿದ್ದಾರೆ.

ನಂತರ ಮಾತು ಮುಂದುವರಿಸಿದ ಅವರು, ಜ್ಯೋತಿಷ್ಯ ಹಾಗೂ ವಿಜ್ಞಾನ ಲೆಕ್ಕಾಚಾರ ಎರಡೂ ಒಂದೇ. ಇದಕ್ಕೆ ನನ್ನ ಬಳಿಯೂ ಸರಿಯಾದ ಲೆಕ್ಕಾಚಾರ ಇದೆ. ತುಲಾ‌ ಲಘ್ನ ದಲ್ಲಿ ಕಳುಹಿಸಿದ ನೌಕೆ ಕುಂಭ ಲಗ್ನದಲ್ಲಿ ಲ್ಯಾಂಡ್ ಆಗಬೇಕು. ಆಗಸ್ಟ್​ 23ರ ಸಂಜೆ 6:30ರ ನಂತರ ಚಂದ್ರನಲ್ಲಿ ಇಳಿದರೆ ನನ್ನ ಜ್ಯೋತಿಷ್ಯ ಹಾಗೂ ವಿಜ್ಞಾನ ಅಧ್ಯಯನ ಸಾರ್ಥಕ ಎಂದು ಹೇಳಿದ್ದಾರೆ.

ರಷ್ಯಾ ದ ಉಪಗ್ರಹ ಮಿಥುನ ಲಗ್ನ ದಲ್ಲಿ ಹೊರಟಿರುವುದೇ ತಾಂತ್ರಿಕ ವೈಫಲ್ಯಕ್ಕೆ ಕಾರಣವಾಗಿದೆ. ಭಾರತದ ಚಂದ್ರಯಾನ 3 ಕ್ಕೆ ದೈವಬಲ ಪೂರ್ಣವಾಗಿದೆ. ಭಾರತೀಯ ವಿಜ್ಞಾನಿಗಳು ತಿರುಪತಿ ವೆಂಕಟರಮಣ ದೇವರ ಆಶೀರ್ವಾದ ಪಡೆದಿದ್ದಾರೆ. ದೇವರ ಆಶೀರ್ವಾದ ಪಡೆದ ಹಿನ್ನಲೆ ಚಂದ್ರಯಾನ 3 ಎಂದೂ ನಿಧಾನಗತಿ ಪಡೆಯಲಿಲ್ಲ. ಚಂದ್ರಯಾನ- 3 ಆಗಸ್ಟ್​ 23 ರ ಸಂಜೆ ಕುಂಭ ಲಗ್ನ 6:30 ರ ನಂತರ ಚಂದ್ರನ ಮೇಲೆ ಇಳಿಯಬೇಕು ಎಂದು ಜ್ಯೋತಿಷಿ ಪ್ರಕಾಶ್ ಅಮ್ಮಣ್ಣಾಯ ಹೇಳಿದ್ದಾರೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!