ಜನ ಮನದ ನಾಡಿ ಮಿಡಿತ

Advertisement

ಕುಜ ದೋಷದಿಂದ ಲೂನಾ 25 ವಿಫಲ; ಚಂದ್ರಯಾನ-3ರ ಬಗ್ಗೆ ಭವಿಷ್ಯ ನುಡಿದ ಉಡುಪಿ ಮೂಲದ ಜ್ಯೋತಿಷಿ!

ಭಾರತದ ಕನಸಿನ ನೌಕೆ ಚಂದ್ರಯಾನ-3 ಯಶಸ್ವಿಯಾಗಲು ಒಂದೇ ದಿನ ಬಾಕಿ ಇದೆ. ನಾಳೆ ಸಂಜೆ ವಿಕ್ರಂ ನೌಕೆ ಚಂದ್ರನ ಮೇಲೆ ಲ್ಯಾಂಡ್ ಆಗುವ ನಿರೀಕ್ಷೆ ಇದೆ. ಹೀಗಿರುವಾಗ ಚಂದ್ರಯಾನ-3 ಯಶಸ್ವಿಯಾಗಲೆಂದು ಹಲವರು ಹರಕೆ ಕಟ್ಟಿಕೊಳ್ಳುತ್ತಿದ್ದಾರೆ. ದೇವರ ಮೊರೆ ಹೋಗಿ ಪೂಜೆ ಸಲ್ಲಿಸುತ್ತಿದ್ದಾರೆ. ಇಂತಹ ಸಮಯದಲ್ಲಿ ಉಡುಪಿ ಮೂಲದ ಜ್ಯೋತಿಷಿ ಪ್ರಕಾಶ್ ಅಮ್ಮಣ್ಣಾಯ ವಿಕ್ರಂ ಲ್ಯಾಂಡ್​ ಆಗುವ ಬಗ್ಗೆ ಭವಿಷ್ಯ ನುಡಿದಿದ್ದಾರೆ.

ಭಾರತ ಹಾಗೂ ರಷ್ಯಾ ಎರಡೂ ದೇಶಗಳು ವಾಯುತತ್ವ ರಾಶಿ ಪ್ರಕಾರ ಉಪಗ್ರಹ ಉಡಾಯಿಸಿದೆ. ರಷ್ಯಾ ಮಿಥುನ ಹಾಗೂ ಭಾರತ ತುಲಾ ಲಗ್ನ ದ ಪ್ರಕಾರ ಉಪಗ್ರಹ ಉಡಾವಣೆಯಾಗಿದೆ. ಕುಜದ ಪರಿಣಾಮ ಯಾಂತ್ರೀಕೃತ ದೋಷದಿಂದ ರಷ್ಯಾ ಉಪಗ್ರಹ ವಿಫಲವಾಗಿದೆ ಎಂದು ಜ್ಯೋತಿಷಿ ಪ್ರಕಾಶ್ ಅಮ್ಮಣ್ಣಾಯ ಭವಿಷ್ಯ ನುಡಿದಿದ್ದಾರೆ.

ನಂತರ ಮಾತು ಮುಂದುವರಿಸಿದ ಅವರು, ಜ್ಯೋತಿಷ್ಯ ಹಾಗೂ ವಿಜ್ಞಾನ ಲೆಕ್ಕಾಚಾರ ಎರಡೂ ಒಂದೇ. ಇದಕ್ಕೆ ನನ್ನ ಬಳಿಯೂ ಸರಿಯಾದ ಲೆಕ್ಕಾಚಾರ ಇದೆ. ತುಲಾ‌ ಲಘ್ನ ದಲ್ಲಿ ಕಳುಹಿಸಿದ ನೌಕೆ ಕುಂಭ ಲಗ್ನದಲ್ಲಿ ಲ್ಯಾಂಡ್ ಆಗಬೇಕು. ಆಗಸ್ಟ್​ 23ರ ಸಂಜೆ 6:30ರ ನಂತರ ಚಂದ್ರನಲ್ಲಿ ಇಳಿದರೆ ನನ್ನ ಜ್ಯೋತಿಷ್ಯ ಹಾಗೂ ವಿಜ್ಞಾನ ಅಧ್ಯಯನ ಸಾರ್ಥಕ ಎಂದು ಹೇಳಿದ್ದಾರೆ.

ರಷ್ಯಾ ದ ಉಪಗ್ರಹ ಮಿಥುನ ಲಗ್ನ ದಲ್ಲಿ ಹೊರಟಿರುವುದೇ ತಾಂತ್ರಿಕ ವೈಫಲ್ಯಕ್ಕೆ ಕಾರಣವಾಗಿದೆ. ಭಾರತದ ಚಂದ್ರಯಾನ 3 ಕ್ಕೆ ದೈವಬಲ ಪೂರ್ಣವಾಗಿದೆ. ಭಾರತೀಯ ವಿಜ್ಞಾನಿಗಳು ತಿರುಪತಿ ವೆಂಕಟರಮಣ ದೇವರ ಆಶೀರ್ವಾದ ಪಡೆದಿದ್ದಾರೆ. ದೇವರ ಆಶೀರ್ವಾದ ಪಡೆದ ಹಿನ್ನಲೆ ಚಂದ್ರಯಾನ 3 ಎಂದೂ ನಿಧಾನಗತಿ ಪಡೆಯಲಿಲ್ಲ. ಚಂದ್ರಯಾನ- 3 ಆಗಸ್ಟ್​ 23 ರ ಸಂಜೆ ಕುಂಭ ಲಗ್ನ 6:30 ರ ನಂತರ ಚಂದ್ರನ ಮೇಲೆ ಇಳಿಯಬೇಕು ಎಂದು ಜ್ಯೋತಿಷಿ ಪ್ರಕಾಶ್ ಅಮ್ಮಣ್ಣಾಯ ಹೇಳಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!