ಮೂಡುಬಿದಿರೆ: ತನ್ನ ಕರ್ತವ್ಯದ ಮೂಲಕ ಇಲಾಖೆ ಹಾಗೂ ಸಾರ್ವಜನಿಕ ವಲಯದಲ್ಲಿ ‘ಖಡಕ್ ಖಾಕಿ’ ಎಂದೇ ಕರೆಸಿಕೊಂಡಿರುವ ಸಂದೇಶ್ ಪಿ. ಜಿ. ಅವರು ಮೂಡುಬಿದಿರೆಯ ನೂತನ ಇನ್ಸ್ಪೆಕ್ಟರ್ ಆಗಿ ನೇಮಕಗೊಂದಿದ್ದಾರೆ.
ಕಳೆದ ಹಲವು ಸಮಯಗಳಿಂದ ಮೂಡುಬಿದಿರೆ ಇನ್ಸ್ಪೆಕ್ಟರ್ ಆಗಿ ಸಂದೇಶ್ ಅವರು ಬರುತ್ತಾರೆನ್ನುವ ಮಾಹಿತಿ ಇತ್ತಾದರೂ ಇಂದು ಅದು ಅಧಿಕೃತಗೊಂಡಿದೆ..
ಈ ಹಿಂದೆ ಕಾರ್ಕಳ, ಬೆಳ್ತಂಗಡಿ, ಬಜ್ಪೆ ಹಾಗೂ ಇನ್ನಿತರ ಕಡೆಗಳಲ್ಲಿ ಕರ್ತವ್ಯ ನಿರ್ವಹಿಸಿರುವ ಸಂದೇಶ್ ಅವರು ತಮ್ಮ ದಕ್ಷತೆಯ ಕರ್ತವ್ಯದ ಮೂಲಕ ಪೊಲೀಸ್ ಇಲಾಖೆ ಹಾಗೂ ಸಾರ್ವಜನಿಕರ ಮೆಚ್ಚುಗೆ ಗಳಿಸಿದ್ದರು. ಯಾರೊಂದಿಗೂ ರಾಜಿ ಮಾಡಿಕೊಳ್ಳದೆ ಕಾನೂನು ಹೇಗಿದೆಯೋ ಅದನ್ನು ಪಾಲಿಸಿ ಕೊಂಡು ಬಂದು, ಕಾನೂನಿಗೆ ಭಂಗತರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದು ಸಂದೇಶ್ ಅವರ ಸ್ವಭಾವ. ಇದೇ ಕಾರಣಕ್ಕೆ ಕಳ್ಳರು, ದರೋಡಕೋರರು, ಕಾನೂನು ಕೈಗೆತ್ತಿಕೊಳ್ಳುವವರಿಗೆ ಸಿಂಹಸ್ವಪ್ನರಾಗಿದ್ದಾರೆ.
ಇ0ತಹ ದಕ್ಷ ಅಧಿಕಾರಿ ಮೂಡುಬಿದಿರೆಗೊಮ್ಮೆ ಬರಲೇ ಬೇಕೆನ್ನುವುದು ಈ ಭಾಗದ ಜನರ ಆಶಯವಾಗಿತ್ತು. ಇದೀಗ ಓರ್ವ ನಿಷ್ಠಾವಂತ, ದಕ್ಷ ಅಧಿಕಾರಿ ಮೂಡುಬಿದಿರೆಯ ಇನ್ಸ್ಪೆಕ್ಟರ್ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಮೂಡುಬಿದಿರೆಗೆ ಸಂದೇಶ್ ರಂತಹ ಖಡಕ್ ಅಧಿಕಾರಿಯ ಅವಶ್ಯವಿತ್ತು. ಇನ್ನು ಕೆಲವು ಕ್ರೈಮ್, ಅಕ್ರಮ ಚಟುವಟಿಕೆಗಳು, ಮಾದಕ ವ್ಯಸನಿಗಳಿಗೆ, ಉಂಡಾಡಿಗು0ಡರಾಗಿ ಕಾನೂನು ಕೈಗೆತ್ತಿಕೊಳ್ಳುವವರಿಗೆ ಮೂಡುಬಿದಿರೆಯಲ್ಲಿ ಖಂಡಿತ ಅವಕಾಶ ವಿಲ್ಲ ಎನ್ನುವ ಅಭಿಪ್ರಾಯಗಳು ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ.
ಮೂಡುಬಿದಿರೆಯಲ್ಲಿ ಇನ್ಸ್ಪೆಕ್ಟರ್ ಆಗಿರುವ ನಿರಂಜನ್ ಅವರು ಸಕಲೇಶಪುರ ಗ್ರಾಮಾಂತರ ಇನ್ಸ್ಪೆಕ್ಟರ್ ಆಗಿ ವರ್ಗಾವಣೆಗೊಂಡಿದ್ದಾರೆ.
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…