ಮೂಡುಬಿದಿರೆ: ತನ್ನ ಕರ್ತವ್ಯದ ಮೂಲಕ ಇಲಾಖೆ ಹಾಗೂ ಸಾರ್ವಜನಿಕ ವಲಯದಲ್ಲಿ ‘ಖಡಕ್ ಖಾಕಿ’ ಎಂದೇ ಕರೆಸಿಕೊಂಡಿರುವ ಸಂದೇಶ್ ಪಿ. ಜಿ. ಅವರು ಮೂಡುಬಿದಿರೆಯ ನೂತನ ಇನ್ಸ್ಪೆಕ್ಟರ್ ಆಗಿ ನೇಮಕಗೊಂದಿದ್ದಾರೆ.
ಕಳೆದ ಹಲವು ಸಮಯಗಳಿಂದ ಮೂಡುಬಿದಿರೆ ಇನ್ಸ್ಪೆಕ್ಟರ್ ಆಗಿ ಸಂದೇಶ್ ಅವರು ಬರುತ್ತಾರೆನ್ನುವ ಮಾಹಿತಿ ಇತ್ತಾದರೂ ಇಂದು ಅದು ಅಧಿಕೃತಗೊಂಡಿದೆ..
ಈ ಹಿಂದೆ ಕಾರ್ಕಳ, ಬೆಳ್ತಂಗಡಿ, ಬಜ್ಪೆ ಹಾಗೂ ಇನ್ನಿತರ ಕಡೆಗಳಲ್ಲಿ ಕರ್ತವ್ಯ ನಿರ್ವಹಿಸಿರುವ ಸಂದೇಶ್ ಅವರು ತಮ್ಮ ದಕ್ಷತೆಯ ಕರ್ತವ್ಯದ ಮೂಲಕ ಪೊಲೀಸ್ ಇಲಾಖೆ ಹಾಗೂ ಸಾರ್ವಜನಿಕರ ಮೆಚ್ಚುಗೆ ಗಳಿಸಿದ್ದರು. ಯಾರೊಂದಿಗೂ ರಾಜಿ ಮಾಡಿಕೊಳ್ಳದೆ ಕಾನೂನು ಹೇಗಿದೆಯೋ ಅದನ್ನು ಪಾಲಿಸಿ ಕೊಂಡು ಬಂದು, ಕಾನೂನಿಗೆ ಭಂಗತರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದು ಸಂದೇಶ್ ಅವರ ಸ್ವಭಾವ. ಇದೇ ಕಾರಣಕ್ಕೆ ಕಳ್ಳರು, ದರೋಡಕೋರರು, ಕಾನೂನು ಕೈಗೆತ್ತಿಕೊಳ್ಳುವವರಿಗೆ ಸಿಂಹಸ್ವಪ್ನರಾಗಿದ್ದಾರೆ.
ಇ0ತಹ ದಕ್ಷ ಅಧಿಕಾರಿ ಮೂಡುಬಿದಿರೆಗೊಮ್ಮೆ ಬರಲೇ ಬೇಕೆನ್ನುವುದು ಈ ಭಾಗದ ಜನರ ಆಶಯವಾಗಿತ್ತು. ಇದೀಗ ಓರ್ವ ನಿಷ್ಠಾವಂತ, ದಕ್ಷ ಅಧಿಕಾರಿ ಮೂಡುಬಿದಿರೆಯ ಇನ್ಸ್ಪೆಕ್ಟರ್ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಮೂಡುಬಿದಿರೆಗೆ ಸಂದೇಶ್ ರಂತಹ ಖಡಕ್ ಅಧಿಕಾರಿಯ ಅವಶ್ಯವಿತ್ತು. ಇನ್ನು ಕೆಲವು ಕ್ರೈಮ್, ಅಕ್ರಮ ಚಟುವಟಿಕೆಗಳು, ಮಾದಕ ವ್ಯಸನಿಗಳಿಗೆ, ಉಂಡಾಡಿಗು0ಡರಾಗಿ ಕಾನೂನು ಕೈಗೆತ್ತಿಕೊಳ್ಳುವವರಿಗೆ ಮೂಡುಬಿದಿರೆಯಲ್ಲಿ ಖಂಡಿತ ಅವಕಾಶ ವಿಲ್ಲ ಎನ್ನುವ ಅಭಿಪ್ರಾಯಗಳು ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ.
ಮೂಡುಬಿದಿರೆಯಲ್ಲಿ ಇನ್ಸ್ಪೆಕ್ಟರ್ ಆಗಿರುವ ನಿರಂಜನ್ ಅವರು ಸಕಲೇಶಪುರ ಗ್ರಾಮಾಂತರ ಇನ್ಸ್ಪೆಕ್ಟರ್ ಆಗಿ ವರ್ಗಾವಣೆಗೊಂಡಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…